AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bilkis Bano case ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನಾವು ಕ್ಷಮಾಪಣೆ ನೀಡಿದ್ದನ್ನು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂಕೋರ್ಟ್ ಆದೇಶವನ್ನಲ್ಲ. ಸುಪ್ರೀಂಕೋರ್ಟ್ ಆದೇಶ ಸರಿಯಾಗಿದೆ, ಮೈ ಲಾರ್ಡ್ಸ್. ಯಾವ ತತ್ವಗಳ ಆಧಾರದ ಮೇಲೆ ಕ್ಷಮಾಪಣೆ ನೀಡಲಾಗಿದೆ ಎಂಬುದನ್ನು...

Bilkis Bano case ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಲ್ಕಿಸ್ ಬಾನು
TV9 Web
| Edited By: |

Updated on: Aug 23, 2022 | 2:34 PM

Share

ದೆಹಲಿ: ಬಿಲ್ಕಿಸ್ ಬಾನು (Bilkis Bano) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​​ನಲ್ಲಿ (Supreme Court)  ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆಗೊಳಪಡಿಸಲಾಗುವುದು ಎಂದು  ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಮಂಗಳವಾರ ಹೇಳಿದ್ದಾರೆ. ಪ್ರಕರಣದ ಅಪರಾಧಿಗಳಿಗೆ ಕ್ಷಮಾಪಣೆ ನೀಡಿ ಜೈಲಿನಿಂದ ಬಿಡುಗಡೆ ಮಾಡಿ ದ್ದನ್ನು ಪ್ರಶ್ನಿಸಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಈ ಅರ್ಜಿ ಸಲ್ಲಿಸಿದ್ದಾರೆ. ನಾವು ಕ್ಷಮಾಪಣೆ ನೀಡಿದ್ದನ್ನು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂಕೋರ್ಟ್ ಆದೇಶವನ್ನಲ್ಲ. ಸುಪ್ರೀಂಕೋರ್ಟ್ ಆದೇಶ ಸರಿಯಾಗಿದೆ, ಮೈ ಲಾರ್ಡ್ಸ್. ಯಾವ ತತ್ವಗಳ ಆಧಾರದ ಮೇಲೆ ಕ್ಷಮಾಪಣೆ ನೀಡಲಾಗಿದೆ ಎಂಬುದನ್ನು ನಾವು ಪ್ರಶ್ನಿಸುತ್ತಿದ್ದೇವೆಎಂದು ಸಿಬಲ್ ಹೇಳಿದರು. ವಕೀಲರು ಸಿಪಿಐ(ಎಂ) ನಾಯಕಿ ಸುಭಾಸಿನಿ ಅಲಿ, ಫ್ರೀಲ್ಯಾನ್ಸ್ ಪತ್ರಕರ್ತೆ ಮತ್ತು ಚಲನಚಿತ್ರ ನಿರ್ಮಾಪಕಿ ರೇವತಿ ಲಾಲ್ ಮತ್ತು ಮಾಜಿ ತತ್ವಶಾಸ್ತ್ರ ಪ್ರೊಫೆಸರ್ ಮತ್ತು ಕಾರ್ಯಕರ್ತ ರೂಪ್ ರೇಖ್ ವರ್ಮಾ ಅವರನ್ನು ಪ್ರತಿನಿಧಿಸುತ್ತಿದ್ದಾರೆ. ಇದೇ ರೀತಿಯ ಬೇಡಿಕೆಯೊಡ್ಡಿ ಟಿಎಂಎಸಿ ಸಂಸದೆ ಮಹುವಾ ಮೊಯಿತ್ರಾ ಕೂಡಾ ಅರ್ಜಿ ಸಲ್ಲಿಸಿದ್ದಾರೆ. . ಮೊಯಿತ್ರಾ ಅವರು ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಸುಪ್ರೀಂಕೋರ್ಟ್ ಈ ಹಿಂದೆ ಗುಜರಾತ್ ಸರ್ಕಾರಕ್ಕೆ ಕ್ಷಮಾಪಣೆ ಅರ್ಜಿಯನ್ನು ಪರಿಗಣಿಸುವಂತೆ ಸೂಚಿಸಿತ್ತು.

ಜನವರಿ 21, 2008 ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಬಿಲ್ಕಿಸ್ ಬಾನು ಅವರ  ಮೇಲೆ  ಸಾಮೂಹಿಕ ಅತ್ಯಾಚಾರ ಮತ್ತು  ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ 11 ಜನರಿಗೆ  ಜೀವಾವಧಿ ಶಿಕ್ಷೆ ವಿಧಿಸಿತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿಯಿತು.

ಗೋಧ್ರಾ ರೈಲು ದಹನದ ನಂತರ ಭುಗಿಲೆದ್ದ ಹಿಂಸಾಚಾರದಿಂದ ತಪ್ಪಿಸಿಕೊಳ್ಳುವಾಗ ಬಿಲ್ಕಿಸ್ ಬಾನುಗೆ 21 ವರ್ಷ, ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದಳು. ಹತ್ಯೆಯಾದವರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಾಳೆ.

ಗುಜರಾತ್ ಸರ್ಕಾರವು ತನ್ನ ಕ್ಷಮಾಪಣೆ  ನೀತಿಯಡಿಯಲ್ಲಿ ಅವರನ್ನು ಬಿಡುಗಡೆ ಮಾಡಲು ಅನುಮತಿಸಿದ ನಂತರ 11 ಅಪರಾಧಿಗಳು ಆಗಸ್ಟ್ 15 ರಂದು ಗೋಧ್ರಾ  ಸಬ್ಜೈ ಲಿನಿಂದ ಹೊರನಡೆದರು. ಅವರು 15 ವರ್ಷಗಳಿಗೂ ಹೆಚ್ಚು ಜೈಲು ವಾಸವನ್ನು ಪೂರ್ಣಗೊಳಿಸಿದ್ದರು.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು