AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಕಿಸ್ ಬಾನು ಪ್ರಕರಣ, ಮತ್ತೆ ಜೈಲಿಗೆ ಹೋಗಲಿದ್ದಾರೆ 11 ಅಪರಾಧಿಗಳು, ಗುಜರಾತ್​ ಸರ್ಕಾರದ ನಿರ್ಧಾರ ಬದಲಿಸಿದ ಸುಪ್ರೀಂ

ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಬಿಲ್ಕಿಸ್ ಬಾನು ಪ್ರಕರಣ, ಮತ್ತೆ ಜೈಲಿಗೆ ಹೋಗಲಿದ್ದಾರೆ 11 ಅಪರಾಧಿಗಳು, ಗುಜರಾತ್​ ಸರ್ಕಾರದ ನಿರ್ಧಾರ ಬದಲಿಸಿದ ಸುಪ್ರೀಂ
ಬಿಲ್ಕಿಸ್ ಬಾನು
TV9 Web
| Edited By: |

Updated on:Jan 08, 2024 | 11:24 AM

Share

ದೆಹಲಿ, ಜ.8: ಬಿಲ್ಕಿಸ್ ಬಾನು (Bilkis Bano ) ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಅರ್ಜಿ ವಿಚಾರಣೆ ಮುಂದುವರಿಯುವುದು ಎಂದು ಸುಪ್ರೀಂ ಹೇಳಿದೆ. ಇದರ ಜತೆಗೆ ಅಪರಾಧಿಗಳನ್ನು ಮತ್ತೆ ಜೈಲಿಗೆ ಹಾಕುವಂತೆ ಹೇಳಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಈ ಆದೇಶವನ್ನು ನೀಡಿದ್ದಾರೆ.

ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆ ಮಾಡಲು ಸಮರ್ಥವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ನಿರ್ಧಾರವು ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ. ಈ ಬಿಡುಗಡೆ ಆದೇಶದಲ್ಲಿ ಸಾಮರ್ಥ್ಯದ ಕೊರತೆ ಇದೆ ಎಂದು ಕೋರ್ಟ್​​​ ಹೇಳಿದೆ. ಆ ಕಾರಣದಿಂದ ಈ ಬಿಡುಗಡೆ ಆದೇಶವನ್ನು ರದ್ದುಗೊಳಿಸುವುದಾಗಿ ಹೇಳಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿತು. ಈ ಆದೇಶವು ವಿರೋಧ ಪಕ್ಷ ಹಾಗೂ ಸಾವರ್ವಜನಿಕರ ಖಂಡನೆ ಹಾಗೂ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳನ್ನು ಹೇಗೆ ಬಿಡುಗಡೆ ಮಾಡಿದಿರಿ?: ಗುಜರಾತ್‌ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ಅಪರಾಧಿಗಳ ಬಿಡುಗಡೆ ವೇಳೆ ಅವರಿಗೆ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಅಪರಾಧಿಗಳ ಜತೆಗೆ ಬಿಜೆಪಿ ಸಂಸದರು, ಶಾಸಕರು, ವೇದಿಕೆಯನ್ನು ಹಂಚಿಕೊಂಡಿದ್ದರು. ಈ ಸುದ್ದಿಯು ಭಾರೀ ಸುದ್ದಿ ಮಾಡಿತ್ತು. ಇನ್ನು ಈ ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ವಕೀಲಿ ವೃತ್ತಿಯನ್ನು ಪ್ರಾರಂಭಿಸಿದ್ದರು, ಇದನ್ನು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತರಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Mon, 8 January 24

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು