AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bilkis Bano case: 11 ಅಪರಾಧಿಗಳ ಬಿಡುಗಡೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸುಪ್ರೀಂ ನೋಟಿಸ್ ಜಾರಿ

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

Bilkis Bano case: 11 ಅಪರಾಧಿಗಳ ಬಿಡುಗಡೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸುಪ್ರೀಂ ನೋಟಿಸ್ ಜಾರಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 27, 2023 | 5:44 PM

ದೆಹಲಿ: ಬಿಲ್ಕಿಸ್ ಬಾನೊ ಪ್ರಕರಣದಲ್ಲಿ (Bilkis Bano case) 11 ಅಪರಾಧಿಗಳ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬ ಸದಸ್ಯರನ್ನು ಹತ್ಯೆಗೈದ ಅಪರಾಧದ ಮೇಲೆ 11 ಜನರನ್ನು ಬಿಡುಗಡೆ ಮಾಡುವುದರ ವಿರುದ್ಧ ಬಿಲ್ಕಿಸ್ ಬಾನೊ ಸಲ್ಲಿಸಿದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅಪರಾಧವನ್ನು ಭಯಾನಕ ಎಂದು ಕರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 18 ರಂದು ಪ್ರಕರಣವನ್ನು ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಹೊಸ ಪೀಠವು , ಪರಿಹಾರಕ್ಕೆ ಸಂಬಂಧಿಸಿದ ಕಡತಗಳನ್ನು ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರ್ಕಾರವನ್ನು ಕೇಳಿದೆ. ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿ ಆರು ಅರ್ಜಿಗಳ ಗುಂಪನ್ನು ಕೈಗೆತ್ತಿಕೊಂಡಿತು. ಈ ಅರ್ಜಿಗಳಲ್ಲಿ ಒಂದನ್ನು ಬಾನೊ ಅವರು ಸಲ್ಲಿಸಿದ್ದರೆ, ಕಳೆದ ಆಗಸ್ಟ್‌ನಲ್ಲಿ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಯಾದ ಬಗ್ಗೆ ಆಕ್ರೋಶದ ಹಿನ್ನೆಲೆಯಲ್ಲಿ ಇತರರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು (ಪಿಐಎಲ್‌ಗಳು) ಸಲ್ಲಿಸಿದರು.

ಇದನ್ನೂ ಓದಿ: Bilkis Bano case ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಎನ್​​ಜಿಒ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನಿಯೋಜಿತ ಪೀಠದ ನ್ಯಾಯಾಧೀಶರಲ್ಲಿ ಒಬ್ಬರು ಪ್ರಕರಣದಿಂದ ಹಿಂದೆ ಸರಿದ ನಂತರ ಡಿಸೆಂಬರ್‌ನಿಂದ ಈ ವಿಷಯವನ್ನು ಆಲಿಸಲಾಗಿಲ್ಲ ಎಂದು ಬಾನೊ ಅವರ ವಕೀಲರು ಹೇಳಿದರು. ಈಗ ಹೊಸ ಪೀಠವನ್ನು ಸ್ಥಾಪಿಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಒಪ್ಪಿಕೊಂಡಿದ್ದರು. ಸುಪ್ರೀಂ ಕೋರ್ಟ್ ನಿಯಮಗಳ ಅಡಿಯಲ್ಲಿ, ವಿವಿಧ ಪೀಠಗಳಿಗೆ ಪ್ರಕರಣಗಳನ್ನು ನಿಯೋಜಿಸುವುದು ರೋಸ್ಟರ್ ಮಾಸ್ಟರ್ ಆಗಿ ಸಿಜೆಐ ಅವರ ವಿಶೇಷಾಧಿಕಾರವನ್ನು ಹೊಂದಿದೆ. ಇದೀಗ ಕೇಂದ್ರ ಸರ್ಕಾರ ಹಾಗೂ ಗುಜರಾತ್  ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬಗ್ಗೆ ಕಾರಣವನ್ನು ಮತ್ತು ವರದಿಯನ್ನು ಒಪ್ಪಿಸುವಂತೆ ಪ್ರಶ್ನಿಸಿ ಕೇಂದ್ರ ಮತ್ತು ಗುಜರಾತ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Published On - 5:07 pm, Mon, 27 March 23