AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi, Bill Gates: ​ಪ್ರಧಾನಿ ಮೋದಿ, ಬಿಲ್ ಗೇಟ್ಸ್ ಸಂವಾದದ ವಿಡಿಯೋ ಇಲ್ಲಿದೆ ನೋಡಿ

Bill Gates and Narendra Modi interaction: ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ನಡುವಣ ಸಂವಾದದ ವಿಡಿಯೋ ಬಿಡುಗಡೆಯಾಗಿದೆ. ತಂತ್ರಜ್ಞಾನದಿಂದ ಹಿಡಿದು ಹವಾಮಾನ ಬದಲಾವಣೆ, ಮಹಿಳಾ ಸಬಲೀಕರಣ, ಜಿ20 ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ಮಾಡಿದ್ದಾರೆ. ಮೋದಿ, ಬಿಲ್ ಗೇಟ್ಸ್ ಸಂವಾದದ ಪೂರ್ಣ ವಿಡಿಯೋ ಇಲ್ಲಿದೆ.

PM Modi, Bill Gates: ​ಪ್ರಧಾನಿ ಮೋದಿ, ಬಿಲ್ ಗೇಟ್ಸ್ ಸಂವಾದದ ವಿಡಿಯೋ ಇಲ್ಲಿದೆ ನೋಡಿ
ಬಿಲ್ ಗೇಟ್ಸ್, ಪ್ರಧಾನಿ ಮೋದಿ ಸಂವಾದ
Follow us
Ganapathi Sharma
|

Updated on: Mar 29, 2024 | 9:48 AM

ನವದೆಹಲಿ, ಮಾರ್ಚ್​ 29: ಭಾರತದಲ್ಲಿ ಮಹಿಳೆಯರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಮುಕ್ತರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಉದ್ಯಮಿ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ (Bill Gates) ಜತೆ ಸಂವಾದ ನಡೆಸಿದ ಅವರು, ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ಬಗ್ಗೆ ಚರ್ಚಿಸಿದರು. ಇದೇ ವೇಳೆ, ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಮೋದಿ ವ್ಯಕ್ತಪಡಿಸಿದರು.

ಉಭಯ ನಾಯಕರ ಸಂವಾದದ ಪ್ರೋಮೋವನ್ನು ಗುರುವಾರ ಬಿಡುಗಡೆ ಮಾಡಲಾಗಿತ್ತು. ಇದೀಗ ಸಂವಾದದ ಪೂರ್ತಿ ವಿಡಿಯೋ ಬಿಡುಗಡೆಯಾಗಿದೆ. ಪ್ರಧಾನಿ ಮೋದಿ ಸಹ ಎಕ್ಸ್​ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಬಿಲ್​ ಗೇಟ್ಸ್ ಜತೆಗೆ ಒಳನೋಟವುಳ್ಳ ಒಂದು ಸಂವಾದ. ದಯವಿಟ್ಟು ನೋಡಿ ಎಂದು ಎಕ್ಸ್​ ಪೋಸ್ಟ್​​ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಎಕ್ಸ್ ಸಂದೇಶ

ಸಂವಾದದಲ್ಲಿ ಏನಂದರು ಮೋದಿ?

ಸಂವಾದದಲ್ಲಿ ಕೃತಕ ಬುದ್ಧಿಮತ್ತೆ (AI) ಕುರಿತು ಮಾತನಾಡಿದ ಮೋದಿ, ಎಐ ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಸೃಷ್ಟಿಸುತ್ತಿದೆ ಎಂದು ಬಿಲ್ ಗೇಟ್ಸ್‌ಗೆ ವಿವರಿಸಿದರು. ಜತೆಗೆ ಎಐ ವ್ಯವಸ್ಥೆಗಳಿಗೆ ಸಮಗ್ರ ತರಬೇತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಅಲ್ಲದೆ, ಎಐಯಿಂದ ರಚಿತವಾದುದಕ್ಕೆ ವಾಟರ್‌ಮಾರ್ಕ್ ಸೇರಿಸುವ ಕಲ್ಪನೆಯನ್ನು ಪ್ರಸ್ತಾಪಿಸಿದರು.

ಡೀಪ್‌ಫೇಕ್ ತಂತ್ರಜ್ಞಾನ ವಂಚನೆಗೆ ಹೆಚ್ಚು ಬಳಕೆಯಾಗುವ ಸಾಧ್ಯತೆ ಬಗ್ಗೆ ಮೋದಿ ಎಚ್ಚರಿಕೆ ನೀಡಿದರು. ಈ ಬಗ್ಗೆ ಗಮನಹರಿಸುವ ಮತ್ತು ಅದರ ಸಂಪೂರ್ಣ ಮೂಲವನ್ನು ಪತ್ತೆಹಚ್ಚಲು ಬೇಕಾದ ವ್ಯವಸ್ಥೆ ರೂಪಿಸುವ ಅಗತ್ಯವನ್ನು ಒತ್ತಿ ಹೇಳಿದರು. ಎಐ ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ನಿಯಂತ್ರಿಸಲು ಕಾನೂನು ಚೌಕಟ್ಟನ್ನು ರೂಪಿಸುವ ಬಗ್ಗೆಯೂ ಪ್ರತಿಪಾದಿಸಿದರು.

ಭಾರತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮಹಿಳೆಯರು ಹೆಚ್ಚು ಮುಕ್ತರಾಗಿದ್ದಾರೆ. ನಾನು ‘ನಮೋ ಡ್ರೋನ್ ದೀದಿ’ ಯೋಜನೆಯನ್ನು ಪ್ರಾರಂಭಿಸಿದ್ದೇನೆ. ಇದು ಇದು ಅತ್ಯಂತ ಯಶಸ್ವಿಯಾಗಿ ಮನ್ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಜತೆ ಸಂವಹನ ನಡೆಸಿದ್ದೇನೆ, ಅವರು ಸಂತೋಷಪಡುತ್ತಾರೆ. ಈ ಹಿಂದೆ ಸೈಕಲ್ ತುಳಿಯುವುದೇ ಕಷ್ಟ ಎನ್ನುತ್ತಿದ್ದ ಮಹಿಳೆಯರು ಈಗ ಪೈಲಟ್‌ಗಳು ಮತ್ತು ಡ್ರೋನ್‌ಗಳನ್ನು ಹಾರಿಸಬಲ್ಲರು. ಭಾರತದಲ್ಲಿ ಮನಃಸ್ಥಿತಿ ಬದಲಾಗಿದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಮೋದಿ ನಿವಾಸದಲ್ಲಿ ಬಿಲ್ ಗೇಟ್ಸ್; ಎಐನಿಂದ ಪರಿಸರದವರೆಗೆ ವಿವಿಧ ವಿಚಾರ ಚರ್ಚಿಸಿದ ಜಾಗತಿಕ ನಾಯಕರು

ಜಿ20 ಶೃಂಗಸಭೆ ಬಗ್ಗೆಯೂ ಪ್ರಧಾನಿ ಮೋದಿ, ಬಿಲ್​​ಗೇಟ್ಸ್​ ನಡುವೆ ಸಂವಾದ ನಡೆಯಿತು. ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಜಿ20 ಶೃಂಗಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಯಿತು. ಹವಾಮಾನ ವೈಪರೀತ್ಯ, ಭಯೋತ್ಪಾದನೆ ನಿರ್ಮೂಲನೆ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯಿತು. ಜಿ20 ದೇಶಗಳ ನಡುವೆ ಸಂಬಂಧ ಸುಧಾರಣೆಗೆ ನಿರ್ಣಯಕೈಗೊಳ್ಳಲಾಯಿತು. ಆರ್ಥಿಕ ಸುಧಾರಣೆ, ರಕ್ಷಣೆ, ಶಿಕ್ಷಣ, ವ್ಯಾಪಾರ, ವಿಜ್ಞಾನ-ತಂತ್ರಜ್ಞಾನ, ಪ್ರವಾಸೋದ್ಯಮ, ಪರಿಸರ ಸಂರಕ್ಷಣೆ ಸೇರಿ ಹಲವು ಕ್ಷೇತ್ರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯೊತು. ಶೃಂಗಸಭೆಯಲ್ಲಿನ ನಿರ್ಣಯಗಳ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ