AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​

ಪ್ರಧಾನಿ ಮೋದಿ ಸೋಮವಾರ ಆಯುಷ್ಮಾನ್ ಭಾರತ್ ಡಿಜಿಟಲ್​ ಮಿಷನ್​​ನ್ನು ರಾಷ್ಟ್ರಕ್ಕೆ ಅರ್ಪಿಸಿದ್ದಾರೆ. ಈ ಯೋಜನೆಯಡಿ ರಾಷ್ಟ್ರಾದ್ಯಂತ ಪ್ರತಿ ಭಾರತೀಯನಿಗೂ ಒಂದು ಆರೋಗ್ಯ ಐಡಿ ನೀಡಲಾಗುತ್ತದೆ.

ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​
ಪ್ರಧಾನಿ ಮೋದಿ ಮತ್ತು ಬಿಲ್​ಗೇಟ್ಸ್​
TV9 Web
| Edited By: |

Updated on:Sep 30, 2021 | 10:18 AM

Share

ಭಾರತದಲ್ಲಿ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಆಯುಷ್ಮಾನ್ ಭಾರತ್​ ಡಿಜಿಟಲ್​ ಆರೋಗ್ಯ ಮಿಷನ್​ ಅಂದರೆ ಡಿಜಿಟಲ್​ ಆರೋಗ್ಯ ಐಡಿ (Digital Health ID System) ವ್ಯವಸ್ಥೆಯನ್ನು ಬಿಲಿಯನೇರ್​​ ಬಿಲ್​ಗೇಟ್ಸ್​ ಶ್ಲಾಘಿಸಿದ್ದಾರೆ.  ಟ್ವೀಟ್​ ಮಾಡಿರುವ ಬಿಲ್​ಗೇಟ್ಸ್ (Bill Gates)​, ಆಯುಷ್ಮಾನ್ ಭಾರತ್​ ಡಿಜಿಟಲ್​ ಮಿಷನ್(Ayushman Bharat Digital Mission)​​ಗೆ ಚಾಲನೆ ನೀಡಿದ ಪ್ರಧಾನಿ ಮೋದಿ (PM Narendra Modi)ಯವರು ಅಭಿನಂದನಾರ್ಹರು. ಈ ಡಿಜಿಟಲ್​ ಆರೋಗ್ಯ ಮೂಲಸೌಕರ್ಯ ಜನರಿಗೆ ನ್ಯಾಯಯುತವಾದ, ಕೈಗೆಟಕಬಹುದಾದ ಆರೋಗ್ಯ ವ್ಯವಸ್ಥೆಯನ್ನು ಒದಗಿಸುತ್ತದೆ. ಹಾಗೇ, ಭಾರತದ ಆರೋಗ್ಯ ಕ್ಷೇತ್ರದ ಸುಧಾರಣೆಯ ಗುರಿಯಲ್ಲಿ ಇನ್ನಷ್ಟು ಪ್ರಗತಿ ತರುತ್ತದೆ ಎಂದು ಹೇಳಿದ್ದಾರೆ.  

ಇನ್ನು ಬಿಲ್​ಗೇಟ್ಸ್​ ಅವರ ಟ್ವೀಟ್​ಗೆ ಪ್ರತಿ ಟ್ವೀಟ್​ ಮಾಡಿದ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಆಯಷ್ಮಾನ್ ಭಾರತ್​ ಡಿಜಿಟಲ್​ ಮಿಷನ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ನಿಮಗೆ ಧನ್ಯವಾದಗಳು. ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು ತಂತ್ರಜ್ಞಾನ ಸದುಪಯೋಗಪಡಿಸಿಕೊಳ್ಳಲು ಅಪಾರ ಅವಕಾಶವಿದೆ ಮತ್ತು ಭಾರತವೂ ಇದೇ ದಿಸೆಯಲ್ಲಿ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸೋಮವಾರ ಆಯುಷ್ಮಾನ್ ಭಾರತ್ ಡಿಜಿಟಲ್​ ಮಿಷನ್​​ನ್ನು ರಾಷ್ಟ್ರಕ್ಕೆ ಅರ್ಪಿಸಿದ್ದಾರೆ. ಈ ಯೋಜನೆಯಡಿ ರಾಷ್ಟ್ರಾದ್ಯಂತ ಪ್ರತಿ ಭಾರತೀಯನಿಗೂ ಒಂದು ಆರೋಗ್ಯ ಐಡಿ ನೀಡಲಾಗುತ್ತದೆ. ಅದರಲ್ಲಿ ಆಯಾ ನಾಗರಿಕನ ಆರೋಗ್ಯಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳೂ ಇರಲಿವೆ. ಯೋಜನೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಡಿಜಿಟಲ್​ ಮಿಷನ್​ನಿಂದ ಆಸ್ಪತ್ರೆಗಳಲ್ಲಿ ಕೆಲಸಗಳು ಸರಳೀಕರಣಗೊಳ್ಳುವ ಜತೆಗೆ, ಸಾಮಾನ್ಯ ಜನರಿಗೂ ಅನುಕೂಲ ಹೆಚ್ಚು ಮಾಡುತ್ತವೆ. ಈ ಯೋಜನೆಯಡಿ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಒಂದು ಆರೋಗ್ಯ ಐಡಿ ಸಿಗುತ್ತದೆ. ಅದರಲ್ಲಿರುವ ದಾಖಲೆಗಳನ್ನು ಡಿಜಿಟಲಿ ಸಂರಕ್ಷಿಸಲಾಗುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: Digital Health Mission 2021: ಆರೋಗ್ಯ ಕ್ಷೇತ್ರ ಸುಧಾರಣೆಯ ಅತ್ಯಂತ ಮಹತ್ವದ ಘಟ್ಟ ಈ ಡಿಜಿಟಲ್​ ಹೆಲ್ತ್​ ಮಿಷನ್​: ಪ್ರಧಾನಿ ಮೋದಿ

Digital Health ID Card 2021: ಡಿಜಿಟಲ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ

Published On - 10:17 am, Thu, 30 September 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ