AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​

ಪ್ರಧಾನಿ ಮೋದಿ ಸೋಮವಾರ ಆಯುಷ್ಮಾನ್ ಭಾರತ್ ಡಿಜಿಟಲ್​ ಮಿಷನ್​​ನ್ನು ರಾಷ್ಟ್ರಕ್ಕೆ ಅರ್ಪಿಸಿದ್ದಾರೆ. ಈ ಯೋಜನೆಯಡಿ ರಾಷ್ಟ್ರಾದ್ಯಂತ ಪ್ರತಿ ಭಾರತೀಯನಿಗೂ ಒಂದು ಆರೋಗ್ಯ ಐಡಿ ನೀಡಲಾಗುತ್ತದೆ.

ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​
ಪ್ರಧಾನಿ ಮೋದಿ ಮತ್ತು ಬಿಲ್​ಗೇಟ್ಸ್​
Follow us
TV9 Web
| Updated By: Lakshmi Hegde

Updated on:Sep 30, 2021 | 10:18 AM

ಭಾರತದಲ್ಲಿ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಆಯುಷ್ಮಾನ್ ಭಾರತ್​ ಡಿಜಿಟಲ್​ ಆರೋಗ್ಯ ಮಿಷನ್​ ಅಂದರೆ ಡಿಜಿಟಲ್​ ಆರೋಗ್ಯ ಐಡಿ (Digital Health ID System) ವ್ಯವಸ್ಥೆಯನ್ನು ಬಿಲಿಯನೇರ್​​ ಬಿಲ್​ಗೇಟ್ಸ್​ ಶ್ಲಾಘಿಸಿದ್ದಾರೆ.  ಟ್ವೀಟ್​ ಮಾಡಿರುವ ಬಿಲ್​ಗೇಟ್ಸ್ (Bill Gates)​, ಆಯುಷ್ಮಾನ್ ಭಾರತ್​ ಡಿಜಿಟಲ್​ ಮಿಷನ್(Ayushman Bharat Digital Mission)​​ಗೆ ಚಾಲನೆ ನೀಡಿದ ಪ್ರಧಾನಿ ಮೋದಿ (PM Narendra Modi)ಯವರು ಅಭಿನಂದನಾರ್ಹರು. ಈ ಡಿಜಿಟಲ್​ ಆರೋಗ್ಯ ಮೂಲಸೌಕರ್ಯ ಜನರಿಗೆ ನ್ಯಾಯಯುತವಾದ, ಕೈಗೆಟಕಬಹುದಾದ ಆರೋಗ್ಯ ವ್ಯವಸ್ಥೆಯನ್ನು ಒದಗಿಸುತ್ತದೆ. ಹಾಗೇ, ಭಾರತದ ಆರೋಗ್ಯ ಕ್ಷೇತ್ರದ ಸುಧಾರಣೆಯ ಗುರಿಯಲ್ಲಿ ಇನ್ನಷ್ಟು ಪ್ರಗತಿ ತರುತ್ತದೆ ಎಂದು ಹೇಳಿದ್ದಾರೆ.  

ಇನ್ನು ಬಿಲ್​ಗೇಟ್ಸ್​ ಅವರ ಟ್ವೀಟ್​ಗೆ ಪ್ರತಿ ಟ್ವೀಟ್​ ಮಾಡಿದ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಆಯಷ್ಮಾನ್ ಭಾರತ್​ ಡಿಜಿಟಲ್​ ಮಿಷನ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ನಿಮಗೆ ಧನ್ಯವಾದಗಳು. ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು ತಂತ್ರಜ್ಞಾನ ಸದುಪಯೋಗಪಡಿಸಿಕೊಳ್ಳಲು ಅಪಾರ ಅವಕಾಶವಿದೆ ಮತ್ತು ಭಾರತವೂ ಇದೇ ದಿಸೆಯಲ್ಲಿ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸೋಮವಾರ ಆಯುಷ್ಮಾನ್ ಭಾರತ್ ಡಿಜಿಟಲ್​ ಮಿಷನ್​​ನ್ನು ರಾಷ್ಟ್ರಕ್ಕೆ ಅರ್ಪಿಸಿದ್ದಾರೆ. ಈ ಯೋಜನೆಯಡಿ ರಾಷ್ಟ್ರಾದ್ಯಂತ ಪ್ರತಿ ಭಾರತೀಯನಿಗೂ ಒಂದು ಆರೋಗ್ಯ ಐಡಿ ನೀಡಲಾಗುತ್ತದೆ. ಅದರಲ್ಲಿ ಆಯಾ ನಾಗರಿಕನ ಆರೋಗ್ಯಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳೂ ಇರಲಿವೆ. ಯೋಜನೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಡಿಜಿಟಲ್​ ಮಿಷನ್​ನಿಂದ ಆಸ್ಪತ್ರೆಗಳಲ್ಲಿ ಕೆಲಸಗಳು ಸರಳೀಕರಣಗೊಳ್ಳುವ ಜತೆಗೆ, ಸಾಮಾನ್ಯ ಜನರಿಗೂ ಅನುಕೂಲ ಹೆಚ್ಚು ಮಾಡುತ್ತವೆ. ಈ ಯೋಜನೆಯಡಿ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಒಂದು ಆರೋಗ್ಯ ಐಡಿ ಸಿಗುತ್ತದೆ. ಅದರಲ್ಲಿರುವ ದಾಖಲೆಗಳನ್ನು ಡಿಜಿಟಲಿ ಸಂರಕ್ಷಿಸಲಾಗುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: Digital Health Mission 2021: ಆರೋಗ್ಯ ಕ್ಷೇತ್ರ ಸುಧಾರಣೆಯ ಅತ್ಯಂತ ಮಹತ್ವದ ಘಟ್ಟ ಈ ಡಿಜಿಟಲ್​ ಹೆಲ್ತ್​ ಮಿಷನ್​: ಪ್ರಧಾನಿ ಮೋದಿ

Digital Health ID Card 2021: ಡಿಜಿಟಲ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ

Published On - 10:17 am, Thu, 30 September 21

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ