AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹಾರಾಟದ ವೇಳೆ ಪೈಲಟ್​ಗೆ ಹೃದಯಾಘಾತ; ನಾಗ್ಪುರದಲ್ಲಿ ಬಾಂಗ್ಲಾ ವಿಮಾನ ತುರ್ತು ಭೂಸ್ಪರ್ಶ

Biman Bangladesh plane | ಇಂದು 126 ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ವಿಮಾನದ ಪೈಲಟ್​ಗೆ ಹೃದಯಾಘಾತ ಆಗಿದ್ದರಿಂದ ಸಮೀಪದ ನಾಗ್ಪುರ ಏರ್​ಪೋರ್ಟ್​ನಲ್ಲಿ ಮಧ್ಯಾಹ್ನ 11.40ಕ್ಕೆ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನ ಹಾರಾಟದ ವೇಳೆ ಪೈಲಟ್​ಗೆ ಹೃದಯಾಘಾತ; ನಾಗ್ಪುರದಲ್ಲಿ ಬಾಂಗ್ಲಾ ವಿಮಾನ ತುರ್ತು ಭೂಸ್ಪರ್ಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 27, 2021 | 6:40 PM

Share

ನಾಗ್ಪುರ: ಮಸ್ಕತ್​ನಿಂದ ಢಾಕಾಗೆ ತೆರಳುತ್ತಿದ್ದ ಬಿಮನ್ ಬಾಂಗ್ಲಾದೇಶ ವಿಮಾನದ (Biman Bangladesh Plane) ಪೈಲಟ್​ಗೆ ವಿಮಾನ ಹಾರಾಟದ ವೇಳೆಯೇ ಹೃದಯಾಘಾತ ಉಂಟಾಗಿದೆ. ಹೀಗಾಗಿ, ನಾಗ್ಪುರದಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಇಂದು 126 ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೋಯಿಂಗ್ ವಿಮಾನದ ಪೈಲಟ್​ಗೆ ಹೃದಯಾಘಾತ ಆಗಿದ್ದರಿಂದ ಸಮೀಪದ ನಾಗ್ಪುರ ಏರ್​ಪೋರ್ಟ್​ನಲ್ಲಿ ಮಧ್ಯಾಹ್ನ 11.40ಕ್ಕೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್​ಪೋರ್ಟ್​ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದ ಪೈಲಟ್ ಅನ್ನು ನಾಗ್ಪುರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯ್ಪುರದ ಬಳಿ ವಿಮಾನ ತೆರಳುತ್ತಿದ್ದಂತೆ ಪೈಲಟ್​ಗೆ ಹೃದಯಾಘಾತ ಉಂಟಾಗಿದೆ. ಹೀಗಾಗಿ, ಕೂಡಲೇ ಕೊಲ್ಕತ್ತಾದ ಎಟಿಸಿಯನ್ನು ಸಂಪರ್ಕ ಮಾಡಲಾಯಿತು. ಬಳಿಕ ಸಮೀಪದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು.

ಕೊವಿಡ್​ನಿಂದ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಕೆಲವು ದೇಶಗಳಲ್ಲಿ ಇದೀಗ ಮತ್ತೆ ಆರಂಭವಾಗಿದೆ. ಬಿಮನ್ ಬಾಂಗ್ಲಾದೇಶ ವಿಮಾನ ಕೂಡ ಕೆಲವು ದಿನಗಳಿಂದ ಭಾರತಕ್ಕೆ ಸಂಚಾರ ಸೇವೆಯನ್ನು ಆರಂಭಿಸಿದೆ. ಕೊವಿಡ್​ನಿಂದ ಬಾಂಗ್ಲಾದೇಶ ಮತ್ತು ಭಾರತದ ನಡುವೆ ವಿಮಾನ ಸಂಚಾರ ಸ್ಥಗಿತವಾಗಿತ್ತು.

ಹೃದಯಾಘಾತಕ್ಕೆ ಒಳಗಾಗಿದ್ದ ಪೈಲಟ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇದನ್ನೂ ಓದಿ: Kabul Blast: ಕಾಬೂಲ್ ವಿಮಾನ ನಿಲ್ದಾಣದಲ್ಲಿ 3ನೇ ಬಾಂಬ್ ಸ್ಫೋಟ, ಅಮೆರಿಕ ಯೋಧರ ಸಾವಿನ ಶಂಕೆ

ಅಫ್ಘಾನಿಸ್ತಾನದಿಂದ ಸ್ಥಳಾಂತರದ ವೇಳೆ ಜನಿಸಿದ ಮಗುವಿಗೆ ವಿಮಾನದ ಕರೆ ಚಿಹ್ನೆ ರೀಚ್ ಎಂದು ನಾಮಕರಣ

(Biman Bangladesh Pilot Suffers Heart Attack Mid-Air Flight Makes Emergency Landing in Nagpur)

Published On - 6:38 pm, Fri, 27 August 21

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ