AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Chopper Crash: ಮರಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್​ನಿಂದ ಸಿಬ್ಬಂದಿ ನೆಲಕ್ಕೆ ಬೀಳುತ್ತಿದ್ದರು; ಭಯಾನಕ ಸನ್ನಿವೇಶ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

ಹೆಲಿಕಾಪ್ಟರ್​ ಸುಲೂರ್​​ನಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿತ್ತು. ಅದರಲ್ಲಿ 14 ಮಂದಿ ಇದ್ದರು ಎನ್ನಲಾಗಿದೆ. ತಮಿಳುನಾಡಿನ ಅರಣ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಒಟ್ಟು 5 ಮಂದಿಯ ಮೃತದೇಹ ಸಿಕ್ಕಿದೆ ಎಂದಿದ್ದಾರೆ.

Army Chopper Crash: ಮರಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್​ನಿಂದ ಸಿಬ್ಬಂದಿ ನೆಲಕ್ಕೆ ಬೀಳುತ್ತಿದ್ದರು; ಭಯಾನಕ ಸನ್ನಿವೇಶ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ
ಹೊತ್ತಿ ಉರಿದ ಹೆಲಿಕಾಪ್ಟರ್​ (ಪಿಟಿಐ ಚಿತ್ರ)
TV9 Web
| Edited By: |

Updated on:Dec 08, 2021 | 5:08 PM

Share

ಇಂದು ಸಿಡಿಎಸ್​ ಬಿಪಿನ್​ ರಾವತ್ (Bipin Rawat)​ ಅವರಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕುನೂರು ಬಳಿ ಪತನವಾಗಿದ್ದು, ಐವರು ಮೃತಪಟ್ಟಿದ್ದಾರೆ. ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಲ್ಲಿ ಹೆಲಿಕಾಪ್ಟರ್​ ಬೆಂಕಿಯಲ್ಲಿ ಹೊತ್ತಿ ಉರಿದು, ರಕ್ಷಣಾ ಕಾರ್ಯಾಚರಣೆಯ ವಿಡಿಯೋಗಳು ಸೋಷಿಯಲ್​ ಮೀಡಿಯಾ ಮತ್ತು ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಹೀಗಿರುವಾಗ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಸ್ಥಳೀಯರು ಇಂಡಿಯಾ ಟುಡೆಯೊಂದಿಗೆ ಮಾತನಾಡಿ, ಅಲ್ಲಿನ ಸನ್ನಿವೇಶವನ್ನು, ತಾವು ಕೇಳಿದ ಭಯಾನಕ ಶಬ್ದದ ಬಗ್ಗೆ ಹೇಳಿಕೊಂಡಿದ್ದಾರೆ.  

ಮಧ್ಯಾಹ್ನ 12.20ರ ಹೊತ್ತಿಗೆ ದುರ್ಘಟನೆ ನಡೆದಿದೆ. ಅಷ್ಟೊತ್ತು ಎಲ್ಲವೂ ಸಹಜವಾಗಿಯೇ ಇತ್ತು. ಒಂದು ಭಯಾನಕ ಶಬ್ದ ಕೇಳಿತು. ಅದು ತುಂಬ ಹತ್ತಿರದಲ್ಲೇ ಕೇಳಿಸಿತು. ಹೀಗಾಗಿ ಕುತೂಹಲ ಮತ್ತು ಭಯದಿಂದ ಹೊರಬಂದು ನೋಡಿದೆ. ಆಗ ಹೆಲಿಕಾಪ್ಟರ್​ವೊಂದು ಮರಕ್ಕೆ ಅಪ್ಪಳಿಸಿತ್ತು. ಅಲ್ಲಿಂದ ಬೆಂಕಿಯ ಉಂಡ ಏಳುತ್ತಿತ್ತು..ನೋಡನೋಡುತ್ತಿದ್ದಂತೆ ಮತ್ತೆ ಆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿತು. ನನಗೆ ಅಕ್ಷರಶಃ ದಿಗಿಲಾಯಿತು. ಅಷ್ಟರಲ್ಲಿ ಮೂವರು ಹೆಲಿಕಾಪ್ಟರ್​ನಿಂದ ಕೆಳಗೆ ಬಿದ್ದರು. ಅವರು ಪೂರ್ತಿಯಾಗಿ ಬೆಂಕಿಯಿಂದ ಸುಟ್ಟುಹೋಗುತ್ತಿದ್ದರು..ಹಾಗೇ ಹೆಲಿಕಾಪ್ಟರ್​ನಿಂದ ಬೀಳುತ್ತಿದ್ದರು. ಅದನ್ನು ನೋಡಿ ನಾನು ಸುತ್ತಲಿನ ಜನರನ್ನು ಕೂಗಿ ಕರೆದೆ. ಬಳಿಕ ಅಗ್ನಿಶಾಮಕ ದಳ, ತುರ್ತು ಸೇವಾ ಘಟಕಗಳಿಗೆ ಕರೆ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ವಿವರಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಹೆಲಿಕಾಪ್ಟರ್​ ಸುಲೂರ್​​ನಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿತ್ತು. ಅದರಲ್ಲಿ 14 ಮಂದಿ ಇದ್ದರು ಎನ್ನಲಾಗಿದೆ. ತಮಿಳುನಾಡಿನ ಅರಣ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಒಟ್ಟು 5 ಮಂದಿಯ ಮೃತದೇಹ ಸಿಕ್ಕಿದೆ ಎಂದಿದ್ದಾರೆ. ಘಟನಾ ಸ್ಥಳದ ಫೋಟೋ, ವಿಡಿಯೋಗಳು ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಬಿಪಿನ್ ರಾವತ್ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಅವರ ಪತ್ನಿ ಈಗಾಗಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

Published On - 5:06 pm, Wed, 8 December 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ