AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ
ಹಕ್ಕಿ ಜ್ವರ
TV9 Web
| Edited By: |

Updated on: Dec 01, 2021 | 7:42 AM

Share

ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಗಳೂ ದಾಂಗುಡಿ ಇಡುತ್ತಿವೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸಂಗತಿ ಎದುರಾಗಿದ್ದು ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ 48 ಕಾಗೆಗಳ ಮೃತದೇಹ ಸಿಕ್ಕಿದ್ದು, ಅವುಗಳಲ್ಲೀಗ ಹಕ್ಕಿಜ್ವರ ಸೋಂಕು(H5N8) ದೃಢಪಟ್ಟಿದೆ. ಅಂದಹಾಗೆ ಈ 48 ಕಾಗೆಗಳು ಭೋಪಾಲ್​​ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟವಾಗಿವೆ.

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ ಎಂದು ಅಗರ್​ ಮಾಲ್ವಾ ಜಿಲ್ಲಾಧಿಕಾರಿ ಅಧ್ವೇಶ್​ ಶರ್ಮಾ ಹೇಳಿದ್ದಾರೆ. 48 ಕಾಗೆಗಳೊಂದಿಗೆ ಒಂದು ಕೋಳಿಯೂ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.  ಸದ್ಯ ಪೌಲ್ಟ್ರಿಯಲ್ಲಿರುವ ಇತರ ಕೋಳಿಗಳ ಮಾದರಿಯನ್ನೂ ಕಳಿಸಲಾಗಿದೆ. ಆದರೆ ಅವುಗಳ ವರದಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್​ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗರ್​ ಮಾಲ್ವಾದಲ್ಲಿ ಹಕ್ಕಿ ಜ್ವರ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಟ್ರೋಲ್​ ರೂಂ ನಿರ್ಮಿಸಲಾಗಿದೆ. ಅದಕ್ಕೆ ಪಶುಸಂಗೋಪನಾ ಇಲಾಖೆಯ ಡಾ. ಎಸ್​.ವಿ.ಕೋಸಾರ್​ವಾಲ್​ ನೇತೃತ್ವವಿದೆ. ಹಾಗೇ, ಹಕ್ಕಿಜ್ವರದಿಂದ ಪಕ್ಷಿಗಳು ಮೃತಪಡುತ್ತಿವೆ. ಹಾಗಾಗಿ ಜನರೂ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬರು ಅಧಿಕಾರಿ ಮಾಹಿತಿ ನೀಡಿದ್ದಾರೆ.  ಚಳಿಗಾಲದಲ್ಲಿ ಬಹುಮುಖ್ಯವಾಗಿ ವಲಸೆ ಹಕ್ಕಿಗಳು ಈ ಹಕ್ಕಿಜ್ವರ ಸೋಂಕನ್ನು ಹರಡುತ್ತವೆ. ಹೀಗಾಗಿ ರಾಜ್ಯದ ಸಂರಕ್ಷಿತ ಪ್ರದೇಶಗಳು ಮತ್ತು ನೀರಿನ ಮೂಲಗಳಿಗೆ ವಲಸೆ ಬರುವ ಹಕ್ಕಿಗಳ ಮೇಲೆ ನಿಗಾ ಇಡಲಾಗುವುದು ಎಂದು ಹೇಳಿದ್ದಾರೆ.  ಈ ಎಚ್​​​5ಎನ್​​8 ಎಂಬುದು ಒಂದು ರೀತಿಯ ಜ್ವರವಾಗಿದ್ದು, ಇದು ಕಾಡು ಪಕ್ಷಿಗಳು ಮತ್ತು ಕೋಳಿಗಳಿಗೆ ಸಿಕ್ಕಾಪಟೆ ಮಾರಕವಾಗಿದೆ. ಮನುಷ್ಯರಿಗೂ ಹರಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Vrat Festivals December 2021: ಡಿಸೆಂಬರ್ ಮಾಸದಲ್ಲಿ ಬರುವ ವ್ರತ, ಹಬ್ಬ ಹರಿದಿನಗಳ ವಿವರಗಳು ಇಲ್ಲಿವೆ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ