Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ
ಹಕ್ಕಿ ಜ್ವರ
Follow us
TV9 Web
| Updated By: Lakshmi Hegde

Updated on: Dec 01, 2021 | 7:42 AM

ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಗಳೂ ದಾಂಗುಡಿ ಇಡುತ್ತಿವೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸಂಗತಿ ಎದುರಾಗಿದ್ದು ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ 48 ಕಾಗೆಗಳ ಮೃತದೇಹ ಸಿಕ್ಕಿದ್ದು, ಅವುಗಳಲ್ಲೀಗ ಹಕ್ಕಿಜ್ವರ ಸೋಂಕು(H5N8) ದೃಢಪಟ್ಟಿದೆ. ಅಂದಹಾಗೆ ಈ 48 ಕಾಗೆಗಳು ಭೋಪಾಲ್​​ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟವಾಗಿವೆ.

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ ಎಂದು ಅಗರ್​ ಮಾಲ್ವಾ ಜಿಲ್ಲಾಧಿಕಾರಿ ಅಧ್ವೇಶ್​ ಶರ್ಮಾ ಹೇಳಿದ್ದಾರೆ. 48 ಕಾಗೆಗಳೊಂದಿಗೆ ಒಂದು ಕೋಳಿಯೂ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.  ಸದ್ಯ ಪೌಲ್ಟ್ರಿಯಲ್ಲಿರುವ ಇತರ ಕೋಳಿಗಳ ಮಾದರಿಯನ್ನೂ ಕಳಿಸಲಾಗಿದೆ. ಆದರೆ ಅವುಗಳ ವರದಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್​ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗರ್​ ಮಾಲ್ವಾದಲ್ಲಿ ಹಕ್ಕಿ ಜ್ವರ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಟ್ರೋಲ್​ ರೂಂ ನಿರ್ಮಿಸಲಾಗಿದೆ. ಅದಕ್ಕೆ ಪಶುಸಂಗೋಪನಾ ಇಲಾಖೆಯ ಡಾ. ಎಸ್​.ವಿ.ಕೋಸಾರ್​ವಾಲ್​ ನೇತೃತ್ವವಿದೆ. ಹಾಗೇ, ಹಕ್ಕಿಜ್ವರದಿಂದ ಪಕ್ಷಿಗಳು ಮೃತಪಡುತ್ತಿವೆ. ಹಾಗಾಗಿ ಜನರೂ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬರು ಅಧಿಕಾರಿ ಮಾಹಿತಿ ನೀಡಿದ್ದಾರೆ.  ಚಳಿಗಾಲದಲ್ಲಿ ಬಹುಮುಖ್ಯವಾಗಿ ವಲಸೆ ಹಕ್ಕಿಗಳು ಈ ಹಕ್ಕಿಜ್ವರ ಸೋಂಕನ್ನು ಹರಡುತ್ತವೆ. ಹೀಗಾಗಿ ರಾಜ್ಯದ ಸಂರಕ್ಷಿತ ಪ್ರದೇಶಗಳು ಮತ್ತು ನೀರಿನ ಮೂಲಗಳಿಗೆ ವಲಸೆ ಬರುವ ಹಕ್ಕಿಗಳ ಮೇಲೆ ನಿಗಾ ಇಡಲಾಗುವುದು ಎಂದು ಹೇಳಿದ್ದಾರೆ.  ಈ ಎಚ್​​​5ಎನ್​​8 ಎಂಬುದು ಒಂದು ರೀತಿಯ ಜ್ವರವಾಗಿದ್ದು, ಇದು ಕಾಡು ಪಕ್ಷಿಗಳು ಮತ್ತು ಕೋಳಿಗಳಿಗೆ ಸಿಕ್ಕಾಪಟೆ ಮಾರಕವಾಗಿದೆ. ಮನುಷ್ಯರಿಗೂ ಹರಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Vrat Festivals December 2021: ಡಿಸೆಂಬರ್ ಮಾಸದಲ್ಲಿ ಬರುವ ವ್ರತ, ಹಬ್ಬ ಹರಿದಿನಗಳ ವಿವರಗಳು ಇಲ್ಲಿವೆ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್