AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ
ಹಕ್ಕಿ ಜ್ವರ
TV9 Web
| Edited By: |

Updated on: Dec 01, 2021 | 7:42 AM

Share

ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಗಳೂ ದಾಂಗುಡಿ ಇಡುತ್ತಿವೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸಂಗತಿ ಎದುರಾಗಿದ್ದು ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ 48 ಕಾಗೆಗಳ ಮೃತದೇಹ ಸಿಕ್ಕಿದ್ದು, ಅವುಗಳಲ್ಲೀಗ ಹಕ್ಕಿಜ್ವರ ಸೋಂಕು(H5N8) ದೃಢಪಟ್ಟಿದೆ. ಅಂದಹಾಗೆ ಈ 48 ಕಾಗೆಗಳು ಭೋಪಾಲ್​​ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟವಾಗಿವೆ.

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ ಎಂದು ಅಗರ್​ ಮಾಲ್ವಾ ಜಿಲ್ಲಾಧಿಕಾರಿ ಅಧ್ವೇಶ್​ ಶರ್ಮಾ ಹೇಳಿದ್ದಾರೆ. 48 ಕಾಗೆಗಳೊಂದಿಗೆ ಒಂದು ಕೋಳಿಯೂ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.  ಸದ್ಯ ಪೌಲ್ಟ್ರಿಯಲ್ಲಿರುವ ಇತರ ಕೋಳಿಗಳ ಮಾದರಿಯನ್ನೂ ಕಳಿಸಲಾಗಿದೆ. ಆದರೆ ಅವುಗಳ ವರದಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್​ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗರ್​ ಮಾಲ್ವಾದಲ್ಲಿ ಹಕ್ಕಿ ಜ್ವರ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಟ್ರೋಲ್​ ರೂಂ ನಿರ್ಮಿಸಲಾಗಿದೆ. ಅದಕ್ಕೆ ಪಶುಸಂಗೋಪನಾ ಇಲಾಖೆಯ ಡಾ. ಎಸ್​.ವಿ.ಕೋಸಾರ್​ವಾಲ್​ ನೇತೃತ್ವವಿದೆ. ಹಾಗೇ, ಹಕ್ಕಿಜ್ವರದಿಂದ ಪಕ್ಷಿಗಳು ಮೃತಪಡುತ್ತಿವೆ. ಹಾಗಾಗಿ ಜನರೂ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬರು ಅಧಿಕಾರಿ ಮಾಹಿತಿ ನೀಡಿದ್ದಾರೆ.  ಚಳಿಗಾಲದಲ್ಲಿ ಬಹುಮುಖ್ಯವಾಗಿ ವಲಸೆ ಹಕ್ಕಿಗಳು ಈ ಹಕ್ಕಿಜ್ವರ ಸೋಂಕನ್ನು ಹರಡುತ್ತವೆ. ಹೀಗಾಗಿ ರಾಜ್ಯದ ಸಂರಕ್ಷಿತ ಪ್ರದೇಶಗಳು ಮತ್ತು ನೀರಿನ ಮೂಲಗಳಿಗೆ ವಲಸೆ ಬರುವ ಹಕ್ಕಿಗಳ ಮೇಲೆ ನಿಗಾ ಇಡಲಾಗುವುದು ಎಂದು ಹೇಳಿದ್ದಾರೆ.  ಈ ಎಚ್​​​5ಎನ್​​8 ಎಂಬುದು ಒಂದು ರೀತಿಯ ಜ್ವರವಾಗಿದ್ದು, ಇದು ಕಾಡು ಪಕ್ಷಿಗಳು ಮತ್ತು ಕೋಳಿಗಳಿಗೆ ಸಿಕ್ಕಾಪಟೆ ಮಾರಕವಾಗಿದೆ. ಮನುಷ್ಯರಿಗೂ ಹರಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Vrat Festivals December 2021: ಡಿಸೆಂಬರ್ ಮಾಸದಲ್ಲಿ ಬರುವ ವ್ರತ, ಹಬ್ಬ ಹರಿದಿನಗಳ ವಿವರಗಳು ಇಲ್ಲಿವೆ

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ