AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ
ಹಕ್ಕಿ ಜ್ವರ
TV9 Web
| Edited By: |

Updated on: Dec 01, 2021 | 7:42 AM

Share

ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಗಳೂ ದಾಂಗುಡಿ ಇಡುತ್ತಿವೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸಂಗತಿ ಎದುರಾಗಿದ್ದು ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ 48 ಕಾಗೆಗಳ ಮೃತದೇಹ ಸಿಕ್ಕಿದ್ದು, ಅವುಗಳಲ್ಲೀಗ ಹಕ್ಕಿಜ್ವರ ಸೋಂಕು(H5N8) ದೃಢಪಟ್ಟಿದೆ. ಅಂದಹಾಗೆ ಈ 48 ಕಾಗೆಗಳು ಭೋಪಾಲ್​​ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟವಾಗಿವೆ.

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ ಎಂದು ಅಗರ್​ ಮಾಲ್ವಾ ಜಿಲ್ಲಾಧಿಕಾರಿ ಅಧ್ವೇಶ್​ ಶರ್ಮಾ ಹೇಳಿದ್ದಾರೆ. 48 ಕಾಗೆಗಳೊಂದಿಗೆ ಒಂದು ಕೋಳಿಯೂ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.  ಸದ್ಯ ಪೌಲ್ಟ್ರಿಯಲ್ಲಿರುವ ಇತರ ಕೋಳಿಗಳ ಮಾದರಿಯನ್ನೂ ಕಳಿಸಲಾಗಿದೆ. ಆದರೆ ಅವುಗಳ ವರದಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್​ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗರ್​ ಮಾಲ್ವಾದಲ್ಲಿ ಹಕ್ಕಿ ಜ್ವರ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಟ್ರೋಲ್​ ರೂಂ ನಿರ್ಮಿಸಲಾಗಿದೆ. ಅದಕ್ಕೆ ಪಶುಸಂಗೋಪನಾ ಇಲಾಖೆಯ ಡಾ. ಎಸ್​.ವಿ.ಕೋಸಾರ್​ವಾಲ್​ ನೇತೃತ್ವವಿದೆ. ಹಾಗೇ, ಹಕ್ಕಿಜ್ವರದಿಂದ ಪಕ್ಷಿಗಳು ಮೃತಪಡುತ್ತಿವೆ. ಹಾಗಾಗಿ ಜನರೂ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬರು ಅಧಿಕಾರಿ ಮಾಹಿತಿ ನೀಡಿದ್ದಾರೆ.  ಚಳಿಗಾಲದಲ್ಲಿ ಬಹುಮುಖ್ಯವಾಗಿ ವಲಸೆ ಹಕ್ಕಿಗಳು ಈ ಹಕ್ಕಿಜ್ವರ ಸೋಂಕನ್ನು ಹರಡುತ್ತವೆ. ಹೀಗಾಗಿ ರಾಜ್ಯದ ಸಂರಕ್ಷಿತ ಪ್ರದೇಶಗಳು ಮತ್ತು ನೀರಿನ ಮೂಲಗಳಿಗೆ ವಲಸೆ ಬರುವ ಹಕ್ಕಿಗಳ ಮೇಲೆ ನಿಗಾ ಇಡಲಾಗುವುದು ಎಂದು ಹೇಳಿದ್ದಾರೆ.  ಈ ಎಚ್​​​5ಎನ್​​8 ಎಂಬುದು ಒಂದು ರೀತಿಯ ಜ್ವರವಾಗಿದ್ದು, ಇದು ಕಾಡು ಪಕ್ಷಿಗಳು ಮತ್ತು ಕೋಳಿಗಳಿಗೆ ಸಿಕ್ಕಾಪಟೆ ಮಾರಕವಾಗಿದೆ. ಮನುಷ್ಯರಿಗೂ ಹರಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Vrat Festivals December 2021: ಡಿಸೆಂಬರ್ ಮಾಸದಲ್ಲಿ ಬರುವ ವ್ರತ, ಹಬ್ಬ ಹರಿದಿನಗಳ ವಿವರಗಳು ಇಲ್ಲಿವೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?