AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ.

ಮಧ್ಯಪ್ರದೇಶದಲ್ಲಿ ಮತ್ತೊಂದು ಸೋಂಕಿನ ಆತಂಕ; ನಾಲ್ಕು ದಿನಗಳಲ್ಲಿ 48ಕಾಗೆಗಳು ಸಾವು, ವಲಸೆ ಹಕ್ಕಿಗಳ ಮೇಲೆ ನಿಗಾ
ಹಕ್ಕಿ ಜ್ವರ
TV9 Web
| Edited By: |

Updated on: Dec 01, 2021 | 7:42 AM

Share

ಮತ್ತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಗಳೂ ದಾಂಗುಡಿ ಇಡುತ್ತಿವೆ. ಈ ಮಧ್ಯೆ ಇನ್ನೊಂದು ಆತಂಕಕಾರಿ ಸಂಗತಿ ಎದುರಾಗಿದ್ದು ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ 48 ಕಾಗೆಗಳ ಮೃತದೇಹ ಸಿಕ್ಕಿದ್ದು, ಅವುಗಳಲ್ಲೀಗ ಹಕ್ಕಿಜ್ವರ ಸೋಂಕು(H5N8) ದೃಢಪಟ್ಟಿದೆ. ಅಂದಹಾಗೆ ಈ 48 ಕಾಗೆಗಳು ಭೋಪಾಲ್​​ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟವಾಗಿವೆ.

ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್​ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8 ಇರುವುದು ಗೊತ್ತಾಗಿದೆ ಎಂದು ಅಗರ್​ ಮಾಲ್ವಾ ಜಿಲ್ಲಾಧಿಕಾರಿ ಅಧ್ವೇಶ್​ ಶರ್ಮಾ ಹೇಳಿದ್ದಾರೆ. 48 ಕಾಗೆಗಳೊಂದಿಗೆ ಒಂದು ಕೋಳಿಯೂ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.  ಸದ್ಯ ಪೌಲ್ಟ್ರಿಯಲ್ಲಿರುವ ಇತರ ಕೋಳಿಗಳ ಮಾದರಿಯನ್ನೂ ಕಳಿಸಲಾಗಿದೆ. ಆದರೆ ಅವುಗಳ ವರದಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್​ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗರ್​ ಮಾಲ್ವಾದಲ್ಲಿ ಹಕ್ಕಿ ಜ್ವರ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ಕಂಟ್ರೋಲ್​ ರೂಂ ನಿರ್ಮಿಸಲಾಗಿದೆ. ಅದಕ್ಕೆ ಪಶುಸಂಗೋಪನಾ ಇಲಾಖೆಯ ಡಾ. ಎಸ್​.ವಿ.ಕೋಸಾರ್​ವಾಲ್​ ನೇತೃತ್ವವಿದೆ. ಹಾಗೇ, ಹಕ್ಕಿಜ್ವರದಿಂದ ಪಕ್ಷಿಗಳು ಮೃತಪಡುತ್ತಿವೆ. ಹಾಗಾಗಿ ಜನರೂ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಇನ್ನೊಬ್ಬರು ಅಧಿಕಾರಿ ಮಾಹಿತಿ ನೀಡಿದ್ದಾರೆ.  ಚಳಿಗಾಲದಲ್ಲಿ ಬಹುಮುಖ್ಯವಾಗಿ ವಲಸೆ ಹಕ್ಕಿಗಳು ಈ ಹಕ್ಕಿಜ್ವರ ಸೋಂಕನ್ನು ಹರಡುತ್ತವೆ. ಹೀಗಾಗಿ ರಾಜ್ಯದ ಸಂರಕ್ಷಿತ ಪ್ರದೇಶಗಳು ಮತ್ತು ನೀರಿನ ಮೂಲಗಳಿಗೆ ವಲಸೆ ಬರುವ ಹಕ್ಕಿಗಳ ಮೇಲೆ ನಿಗಾ ಇಡಲಾಗುವುದು ಎಂದು ಹೇಳಿದ್ದಾರೆ.  ಈ ಎಚ್​​​5ಎನ್​​8 ಎಂಬುದು ಒಂದು ರೀತಿಯ ಜ್ವರವಾಗಿದ್ದು, ಇದು ಕಾಡು ಪಕ್ಷಿಗಳು ಮತ್ತು ಕೋಳಿಗಳಿಗೆ ಸಿಕ್ಕಾಪಟೆ ಮಾರಕವಾಗಿದೆ. ಮನುಷ್ಯರಿಗೂ ಹರಡುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Vrat Festivals December 2021: ಡಿಸೆಂಬರ್ ಮಾಸದಲ್ಲಿ ಬರುವ ವ್ರತ, ಹಬ್ಬ ಹರಿದಿನಗಳ ವಿವರಗಳು ಇಲ್ಲಿವೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ