AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bird Flu: ಕೋಳಿಕೋಡ್​​ನ ಕೋಳಿ ಫಾರ್ಮ್​ನಲ್ಲಿ ಹಕ್ಕಿ ಜ್ವರ ಉಲ್ಬಣ; 1,800 ಕೋಳಿಗಳ ಸಾವು

ಆರಂಭಿಕ ಪರೀಕ್ಷೆಗಳಲ್ಲಿ ಹಕ್ಕಿ ಜ್ವರ ಇರುವ ಬಗ್ಗೆ ಸೂಚಿಸಿದ್ದರಿಂದ, ಕೋಳಿಗಳ ಮಾದರಿಗಳನ್ನು ಭೋಪಾಲ್​ನಲ್ಲಿರುವ ಹೈ ಸೆಕ್ಯುರಿಟಿ ಲ್ಯಾಬ್‌ಗೆ ಕಳುಹಿಸಲಾಗಿತ್ತು.

Bird Flu: ಕೋಳಿಕೋಡ್​​ನ ಕೋಳಿ ಫಾರ್ಮ್​ನಲ್ಲಿ ಹಕ್ಕಿ ಜ್ವರ ಉಲ್ಬಣ; 1,800 ಕೋಳಿಗಳ ಸಾವು
ಹಕ್ಕಿ ಜ್ವರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 12, 2023 | 4:43 PM

Share

ತಿರುವನಂತಪುರಂ: ಕೇರಳದ ಕೋಳಿಕೋಡ್ ಜಿಲ್ಲೆಯ ಸರ್ಕಾರಿ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡ ಬಳಿಕ ಸುಮಾರು 1,800 ಕೋಳಿಗಳು ಹಕ್ಕಿ ಜ್ವರದ ಸೋಂಕಿನಿಂದ ಸಾವನ್ನಪ್ಪಿವೆ. ಈ ನಿಟ್ಟಿನಲ್ಲಿ ಕೇಂದ್ರದ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್ ಪ್ರಕಾರ ಹಕ್ಕಿ ಜ್ವರದ ಸೋಂಕನ್ನು ತುರ್ತಾಗಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲು ಕೇರಳದ (Kerala) ಪಶುಸಂಗೋಪನೆ ಸಚಿವರಾದ ಜೆ. ಚಿಂಚು ರಾಣಿ ಸೂಚನೆ ನೀಡಿದ್ದಾರೆ.

ಆರಂಭಿಕ ಪರೀಕ್ಷೆಗಳಲ್ಲಿ ಹಕ್ಕಿ ಜ್ವರ ಇರುವ ಬಗ್ಗೆ ಸೂಚಿಸಿದ್ದರಿಂದ, ಕೋಳಿಗಳ ಮಾದರಿಗಳನ್ನು ಭೋಪಾಲ್​ನಲ್ಲಿರುವ ಹೈ ಸೆಕ್ಯುರಿಟಿ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಇದರಲ್ಲಿ ಏವಿಯನ್ ಇನ್ಫ್ಲುಯೆನ್ಸ ದೃಢಪಟ್ಟಿದೆ ಎಂದು ಕೇರಳ ಸರ್ಕಾರದ ಹೇಳಿಕೆ ತಿಳಿಸಿದೆ. ಕೋಳಿ ಫಾರ್ಮ್‌ನಲ್ಲಿ 5,000ಕ್ಕೂ ಹೆಚ್ಚು ಕೋಳಿಗಳಿದ್ದು, ಅವುಗಳಲ್ಲಿ 1,800 ಕೋಳಿಗಳು ಸೋಂಕಿನಿಂದ ಸಾವನ್ನಪ್ಪಿವೆ.

ಇದನ್ನೂ ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಕೇರಳದ ಪಶುಸಂಗೋಪನಾ ಸಚಿವರಾದ ಜೆ. ಚಿಂಚು ರಾಣಿ ಈ ನಿಟ್ಟಿನಲ್ಲಿ ಕೇಂದ್ರದ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್‌ನ ಪ್ರಕಾರ, ತುರ್ತಾಗಿ ಹಕ್ಕಿಜ್ವರವನ್ನು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಹಕ್ಕಿ ಜ್ವರಕ್ಕೆ ಒಳಗಾದ ಕೋಳಿಗಳ ಹತ್ಯೆ ಮತ್ತು ಮುಂದಿನ ಕಾರ್ಯವಿಧಾನಗಳನ್ನು ಜಿಲ್ಲೆಯ ಅಧಿಕಾರಿಗಳ ಅಧೀನದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಸಮನ್ವಯದೊಂದಿಗೆ ಮಾಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್