AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bird Flu Symptoms: ಹಕ್ಕಿ ಜ್ವರದಿಂದ ಒಡಿಶಾದಲ್ಲಿ 5 ಸಾವಿರಕ್ಕೂ ಹೆಚ್ಚು ಕೋಳಿಗಳ ಹತ್ಯೆ

ಹಕ್ಕಿ ಜ್ವರದ ಹಾವಳಿಯಿಂದಾಗಿ ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಸಾವಿರಾರು ಕೋಳಿಗಳನ್ನು ಕೊಲ್ಲಲಾಗುತ್ತಿದೆ. ಈ ಪ್ರದೇಶದಲ್ಲಿನ ಕೋಳಿ ಫಾರಂಗಳಲ್ಲಿ ಅನೇಕ ಕೋಳಿಗಳಲ್ಲಿ ಹಕ್ಕಿ ಜ್ವರದ ಸೋಂಕು ಪತ್ತೆಯಾಗಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

Bird Flu Symptoms: ಹಕ್ಕಿ ಜ್ವರದಿಂದ ಒಡಿಶಾದಲ್ಲಿ 5 ಸಾವಿರಕ್ಕೂ ಹೆಚ್ಚು ಕೋಳಿಗಳ ಹತ್ಯೆ
ಹಕ್ಕಿ ಜ್ವರ
ಸುಷ್ಮಾ ಚಕ್ರೆ
|

Updated on: Aug 26, 2024 | 3:36 PM

Share

ಪುರಿ: ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಸಾಮಾನ್ಯವಾಗಿ ಹಕ್ಕಿ ಜ್ವರ ಎಂದು ಕರೆಯಲ್ಪಡುವ ಏವಿಯನ್ ಇನ್ಫ್ಲುಯೆಂಜಾದ H5N1 ಸ್ಟ್ರೈನ್ ಪತ್ತೆಯಾದ ನಂತರ ಒಡಿಶಾದಲ್ಲಿ 5,000ಕ್ಕೂ ಹೆಚ್ಚು ಕೋಳಿಗಳನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಕ್ಕಿ ಜ್ವರದ ಕೇಂದ್ರಬಿಂದುವು ರಾಜ್ಯದ ರಾಜಧಾನಿ ಭುವನೇಶ್ವರದಿಂದ ಸುಮಾರು 19 ಮೈಲಿ ದೂರದಲ್ಲಿರುವ ಪುರಿ ಜಿಲ್ಲೆಯಲ್ಲಿದೆ. ಈ ಹಕ್ಕಿ ಜ್ವರದ ಉಲ್ಬಣ ಸ್ಥಳೀಯ ಕೋಳಿ ಫಾರ್ಮ್‌ನಲ್ಲಿ 1,800 ಪಕ್ಷಿಗಳ ಇತ್ತೀಚಿನ ಸಾವನ್ನು ಅನುಸರಿಸುತ್ತದೆ.

ಪಿಪಿಲಿಯ ಕೋಳಿ ಫಾರಂನಲ್ಲಿ ಕೋಳಿಗಳ ಸಾಮೂಹಿಕ ಸಾವಿನ ನಂತರ ರಾಜ್ಯ ಸರ್ಕಾರ ತನಿಖೆಗಾಗಿ ಪಶುವೈದ್ಯ ತಂಡವನ್ನು ಕಳುಹಿಸಿದೆ. ತಂಡವು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದೆ. ಇದು ಏವಿಯನ್ ಇನ್ಫ್ಲುಯೆಂಜಾದ H5N1 ಸ್ಟ್ರೈನ್ ಇರುವಿಕೆಯನ್ನು ದೃಢಪಡಿಸಿತು. ಇದಕ್ಕೆ ಸ್ಪಂದಿಸಿದ ಸರ್ಕಾರ ಶನಿವಾರದಿಂದಲೇ ಫಾರಂ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೋಳಿಗಳನ್ನು ಸಾಯಿಸಲು ಆರಂಭಿಸಿತು.

ಇದನ್ನೂ ಓದಿ: 1984ರಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ಗುಜರಾತ್​ನಲ್ಲಿ ಗಲಭೆ ತಡೆದಿದ್ದ ಪ್ರಧಾನಿ ಮೋದಿ

ಆದೇಶದಂತೆ ಸೋಂಕಿತ ಪಕ್ಷಿಗಳು ಅಥವಾ ಕೋಳಿಗಳನ್ನು ಕೊಲ್ಲಲಾಗುತ್ತಿದೆ. ಈ ತಡೆಗಟ್ಟುವ ಕ್ರಮದಿಂದ ಹಾನಿಗೊಳಗಾದ ರೈತರು ಮತ್ತು ಕೋಳಿ ಮಾಲೀಕರಿಗೆ ಸರ್ಕಾರ ಪರಿಹಾರವನ್ನು ನೀಡುತ್ತಿದೆ.

ಶನಿವಾರ 300 ಕೋಳಿಗಳನ್ನು ಕೊಲ್ಲಲಾಗಿದ್ದು, ಭಾನುವಾರ 4,700ಕ್ಕೂ ಹೆಚ್ಚು ಕೋಳಿಗಳನ್ನು ಕೊಲ್ಲಲಾಗಿದೆ ಎಂದು ರೋಗ ನಿಯಂತ್ರಣ ವಿಭಾಗದ ಹೆಚ್ಚುವರಿ ನಿರ್ದೇಶಕ ಜಗನ್ನಾಥ ನಂದಾ ತಿಳಿಸಿದ್ದಾರೆ. ಪಿಪಿಲಿಯಲ್ಲಿ ಒಟ್ಟು 20,000 ಪಕ್ಷಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Bird Flu: ಹಕ್ಕಿ ಜ್ವರ ಬಂದಿದೆ, ಮೊಟ್ಟೆ, ಕೋಳಿ ತಿನ್ನುವುದು ಸುರಕ್ಷಿತವೇ?

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಜಂಟಿ ನಿರ್ದೇಶಕ ಮನೋಜ್ ಪಟ್ನಾಯಕ್ ಅವರು ಪೀಡಿತ ಕೋಳಿ ಫಾರಂನ 1 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಪಕ್ಷಿಗಳನ್ನು ನಾಶಪಡಿಸಲಾಗುವುದು ಮತ್ತು ಮುಂದಿನ 5 ತಿಂಗಳವರೆಗೆ ಕೋಳಿಗಳನ್ನು ಸಾಕಲು ಫಾರ್ಮ್ ಅನ್ನು ಅನುಮತಿಸಲಾಗುವುದಿಲ್ಲ. ಮಾರ್ಗಸೂಚಿ ಪ್ರಕಾರ ರೈತರಿಗೆ ಪರಿಹಾರ ನೀಡಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು