Bird Flu Symptoms: ಹಕ್ಕಿ ಜ್ವರದಿಂದ ಒಡಿಶಾದಲ್ಲಿ 5 ಸಾವಿರಕ್ಕೂ ಹೆಚ್ಚು ಕೋಳಿಗಳ ಹತ್ಯೆ

ಹಕ್ಕಿ ಜ್ವರದ ಹಾವಳಿಯಿಂದಾಗಿ ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಸಾವಿರಾರು ಕೋಳಿಗಳನ್ನು ಕೊಲ್ಲಲಾಗುತ್ತಿದೆ. ಈ ಪ್ರದೇಶದಲ್ಲಿನ ಕೋಳಿ ಫಾರಂಗಳಲ್ಲಿ ಅನೇಕ ಕೋಳಿಗಳಲ್ಲಿ ಹಕ್ಕಿ ಜ್ವರದ ಸೋಂಕು ಪತ್ತೆಯಾಗಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

Bird Flu Symptoms: ಹಕ್ಕಿ ಜ್ವರದಿಂದ ಒಡಿಶಾದಲ್ಲಿ 5 ಸಾವಿರಕ್ಕೂ ಹೆಚ್ಚು ಕೋಳಿಗಳ ಹತ್ಯೆ
ಹಕ್ಕಿ ಜ್ವರ
Follow us
|

Updated on: Aug 26, 2024 | 3:36 PM

ಪುರಿ: ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಸಾಮಾನ್ಯವಾಗಿ ಹಕ್ಕಿ ಜ್ವರ ಎಂದು ಕರೆಯಲ್ಪಡುವ ಏವಿಯನ್ ಇನ್ಫ್ಲುಯೆಂಜಾದ H5N1 ಸ್ಟ್ರೈನ್ ಪತ್ತೆಯಾದ ನಂತರ ಒಡಿಶಾದಲ್ಲಿ 5,000ಕ್ಕೂ ಹೆಚ್ಚು ಕೋಳಿಗಳನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಕ್ಕಿ ಜ್ವರದ ಕೇಂದ್ರಬಿಂದುವು ರಾಜ್ಯದ ರಾಜಧಾನಿ ಭುವನೇಶ್ವರದಿಂದ ಸುಮಾರು 19 ಮೈಲಿ ದೂರದಲ್ಲಿರುವ ಪುರಿ ಜಿಲ್ಲೆಯಲ್ಲಿದೆ. ಈ ಹಕ್ಕಿ ಜ್ವರದ ಉಲ್ಬಣ ಸ್ಥಳೀಯ ಕೋಳಿ ಫಾರ್ಮ್‌ನಲ್ಲಿ 1,800 ಪಕ್ಷಿಗಳ ಇತ್ತೀಚಿನ ಸಾವನ್ನು ಅನುಸರಿಸುತ್ತದೆ.

ಪಿಪಿಲಿಯ ಕೋಳಿ ಫಾರಂನಲ್ಲಿ ಕೋಳಿಗಳ ಸಾಮೂಹಿಕ ಸಾವಿನ ನಂತರ ರಾಜ್ಯ ಸರ್ಕಾರ ತನಿಖೆಗಾಗಿ ಪಶುವೈದ್ಯ ತಂಡವನ್ನು ಕಳುಹಿಸಿದೆ. ತಂಡವು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದೆ. ಇದು ಏವಿಯನ್ ಇನ್ಫ್ಲುಯೆಂಜಾದ H5N1 ಸ್ಟ್ರೈನ್ ಇರುವಿಕೆಯನ್ನು ದೃಢಪಡಿಸಿತು. ಇದಕ್ಕೆ ಸ್ಪಂದಿಸಿದ ಸರ್ಕಾರ ಶನಿವಾರದಿಂದಲೇ ಫಾರಂ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೋಳಿಗಳನ್ನು ಸಾಯಿಸಲು ಆರಂಭಿಸಿತು.

ಇದನ್ನೂ ಓದಿ: 1984ರಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ಗುಜರಾತ್​ನಲ್ಲಿ ಗಲಭೆ ತಡೆದಿದ್ದ ಪ್ರಧಾನಿ ಮೋದಿ

ಆದೇಶದಂತೆ ಸೋಂಕಿತ ಪಕ್ಷಿಗಳು ಅಥವಾ ಕೋಳಿಗಳನ್ನು ಕೊಲ್ಲಲಾಗುತ್ತಿದೆ. ಈ ತಡೆಗಟ್ಟುವ ಕ್ರಮದಿಂದ ಹಾನಿಗೊಳಗಾದ ರೈತರು ಮತ್ತು ಕೋಳಿ ಮಾಲೀಕರಿಗೆ ಸರ್ಕಾರ ಪರಿಹಾರವನ್ನು ನೀಡುತ್ತಿದೆ.

ಶನಿವಾರ 300 ಕೋಳಿಗಳನ್ನು ಕೊಲ್ಲಲಾಗಿದ್ದು, ಭಾನುವಾರ 4,700ಕ್ಕೂ ಹೆಚ್ಚು ಕೋಳಿಗಳನ್ನು ಕೊಲ್ಲಲಾಗಿದೆ ಎಂದು ರೋಗ ನಿಯಂತ್ರಣ ವಿಭಾಗದ ಹೆಚ್ಚುವರಿ ನಿರ್ದೇಶಕ ಜಗನ್ನಾಥ ನಂದಾ ತಿಳಿಸಿದ್ದಾರೆ. ಪಿಪಿಲಿಯಲ್ಲಿ ಒಟ್ಟು 20,000 ಪಕ್ಷಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Bird Flu: ಹಕ್ಕಿ ಜ್ವರ ಬಂದಿದೆ, ಮೊಟ್ಟೆ, ಕೋಳಿ ತಿನ್ನುವುದು ಸುರಕ್ಷಿತವೇ?

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಜಂಟಿ ನಿರ್ದೇಶಕ ಮನೋಜ್ ಪಟ್ನಾಯಕ್ ಅವರು ಪೀಡಿತ ಕೋಳಿ ಫಾರಂನ 1 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಪಕ್ಷಿಗಳನ್ನು ನಾಶಪಡಿಸಲಾಗುವುದು ಮತ್ತು ಮುಂದಿನ 5 ತಿಂಗಳವರೆಗೆ ಕೋಳಿಗಳನ್ನು ಸಾಕಲು ಫಾರ್ಮ್ ಅನ್ನು ಅನುಮತಿಸಲಾಗುವುದಿಲ್ಲ. ಮಾರ್ಗಸೂಚಿ ಪ್ರಕಾರ ರೈತರಿಗೆ ಪರಿಹಾರ ನೀಡಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ