AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಹಕ್ಕಿ ಜ್ವರ ಹರಡುತ್ತದೆ ಎಂಬ ಮುನ್ನೆಚ್ಚರಿಕೆಯಿಂದ ಕೇರಳದ ಕೊಟ್ಟಾಯಂ ಜಿಲ್ಲೆಯ 3 ಪ್ರತ್ಯೇಕ ಪಂಚಾಯತ್‌ಗಳಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ.

Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ
ಹಕ್ಕಿ ಜ್ವರ
TV9 Web
| Edited By: |

Updated on: Dec 25, 2022 | 1:26 PM

Share

ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಳೆದ ಕೆಲವು ದಿನಗಳಿಂದ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡಿದ್ದು, ತೀವ್ರ ಆತಂಕವನ್ನು ಉಂಟುಮಾಡಿದೆ. ಹಕ್ಕಿ ಜ್ವರ ಹರಡುತ್ತದೆ ಎಂಬ ಮುನ್ನೆಚ್ಚರಿಕೆಯಿಂದ ಕೇರಳದ (Kerala) ಕೊಟ್ಟಾಯಂ ಜಿಲ್ಲೆಯ 3 ಪ್ರತ್ಯೇಕ ಪಂಚಾಯತ್‌ಗಳಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ. ಕೊಟ್ಟಾಯಂ ಜಿಲ್ಲೆಯ ವೇಚೂರು, ನೀಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ 6,017 ಪಕ್ಷಿಗಳು ಅವುಗಳಲ್ಲೂ ಹೆಚ್ಚಾಗಿ ಬಾತುಕೋಳಿಗಳನ್ನು ಹತ್ಯೆ ಮಾಡಲಾಗಿದೆ.

ಈ ಬಗ್ಗೆ ಕೊಟ್ಟಾಯಂ ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಧಿಕೃತ ಮಾಹಿತಿಯ ಪ್ರಕಾರ, ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳು ಸಾವನ್ನಪ್ಪಿವೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಭೀತಿ; ಕೋಳಿ ಫಾರಂನಲ್ಲಿ 25,000 ಕೋಳಿಗಳನ್ನು ಕೊಲ್ಲಲು ಆದೇಶ

ಲಕ್ಷದ್ವೀಪ ಆಡಳಿತವು ಇದೀಗ ಕೇರಳದಲ್ಲಿ ಹಕ್ಕಿಜ್ವರದ ಹರಡುವಿಕೆಯಿಂದಾಗಿ ದ್ವೀಪಗಳಿಗೆ ಕೋಳಿಯನ್ನು ಸಾಗಿಸುವುದನ್ನು ನಿಷೇಧಿಸಿದೆ. ಇಂದು ಮುಂಜಾನೆ, ರೈತರು ಕೊಳಗಳಲ್ಲಿ ಇಳಿದು ಬಾತುಕೋಳಿಗಳನ್ನು ಹಿಡಿದು ಅವುಗಳನ್ನು ಕೊಲ್ಲಲು ಗೊತ್ತುಪಡಿಸಿದ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಆ ಬಾತುಕೋಳಿಗಳನ್ನು ಆರೋಗ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಈ ವರ್ಷದ ಅಕ್ಟೋಬರ್ ಅಂತ್ಯದಲ್ಲಿ ಕೇರಳ ರಾಜ್ಯದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ವರದಿಯಾಗಿತ್ತು. ಹರಿಪಾಡು ಪುರಸಭೆಯಲ್ಲಿ ರೋಗ ಹರಡುವುದನ್ನು ತಡೆಯಲು ಕಾರ್ಯಾಚರಣೆ ನಡೆಸಲಾಗಿತ್ತು. ಭಾರತದಲ್ಲಿ, ಹಕ್ಕಿ ಜ್ವರ ಮುಖ್ಯವಾಗಿ ಸೆಪ್ಟೆಂಬರ್ ಮತ್ತು ಮಾರ್ಚ್ ನಡುವಿನ ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಾಗುತ್ತವೆ. ಈ ಸಂದರ್ಭದಲ್ಲಿ ದೇಶಕ್ಕೆ ಬರುವ ವಲಸೆ ಹಕ್ಕಿಗಳಿಂದ ಈ ರೋಗ ಹರಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ