AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಹಕ್ಕಿ ಜ್ವರ ಹರಡುತ್ತದೆ ಎಂಬ ಮುನ್ನೆಚ್ಚರಿಕೆಯಿಂದ ಕೇರಳದ ಕೊಟ್ಟಾಯಂ ಜಿಲ್ಲೆಯ 3 ಪ್ರತ್ಯೇಕ ಪಂಚಾಯತ್‌ಗಳಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ.

Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ
ಹಕ್ಕಿ ಜ್ವರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 25, 2022 | 1:26 PM

Share

ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ (Kottayam) ಕಳೆದ ಕೆಲವು ದಿನಗಳಿಂದ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡಿದ್ದು, ತೀವ್ರ ಆತಂಕವನ್ನು ಉಂಟುಮಾಡಿದೆ. ಹಕ್ಕಿ ಜ್ವರ ಹರಡುತ್ತದೆ ಎಂಬ ಮುನ್ನೆಚ್ಚರಿಕೆಯಿಂದ ಕೇರಳದ (Kerala) ಕೊಟ್ಟಾಯಂ ಜಿಲ್ಲೆಯ 3 ಪ್ರತ್ಯೇಕ ಪಂಚಾಯತ್‌ಗಳಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳನ್ನು ಕೊಲ್ಲಲಾಗಿದೆ. ಕೊಟ್ಟಾಯಂ ಜಿಲ್ಲೆಯ ವೇಚೂರು, ನೀಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ 6,017 ಪಕ್ಷಿಗಳು ಅವುಗಳಲ್ಲೂ ಹೆಚ್ಚಾಗಿ ಬಾತುಕೋಳಿಗಳನ್ನು ಹತ್ಯೆ ಮಾಡಲಾಗಿದೆ.

ಈ ಬಗ್ಗೆ ಕೊಟ್ಟಾಯಂ ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಧಿಕೃತ ಮಾಹಿತಿಯ ಪ್ರಕಾರ, ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳು ಸಾವನ್ನಪ್ಪಿವೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಭೀತಿ; ಕೋಳಿ ಫಾರಂನಲ್ಲಿ 25,000 ಕೋಳಿಗಳನ್ನು ಕೊಲ್ಲಲು ಆದೇಶ

ಲಕ್ಷದ್ವೀಪ ಆಡಳಿತವು ಇದೀಗ ಕೇರಳದಲ್ಲಿ ಹಕ್ಕಿಜ್ವರದ ಹರಡುವಿಕೆಯಿಂದಾಗಿ ದ್ವೀಪಗಳಿಗೆ ಕೋಳಿಯನ್ನು ಸಾಗಿಸುವುದನ್ನು ನಿಷೇಧಿಸಿದೆ. ಇಂದು ಮುಂಜಾನೆ, ರೈತರು ಕೊಳಗಳಲ್ಲಿ ಇಳಿದು ಬಾತುಕೋಳಿಗಳನ್ನು ಹಿಡಿದು ಅವುಗಳನ್ನು ಕೊಲ್ಲಲು ಗೊತ್ತುಪಡಿಸಿದ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಆ ಬಾತುಕೋಳಿಗಳನ್ನು ಆರೋಗ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಈ ವರ್ಷದ ಅಕ್ಟೋಬರ್ ಅಂತ್ಯದಲ್ಲಿ ಕೇರಳ ರಾಜ್ಯದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ವರದಿಯಾಗಿತ್ತು. ಹರಿಪಾಡು ಪುರಸಭೆಯಲ್ಲಿ ರೋಗ ಹರಡುವುದನ್ನು ತಡೆಯಲು ಕಾರ್ಯಾಚರಣೆ ನಡೆಸಲಾಗಿತ್ತು. ಭಾರತದಲ್ಲಿ, ಹಕ್ಕಿ ಜ್ವರ ಮುಖ್ಯವಾಗಿ ಸೆಪ್ಟೆಂಬರ್ ಮತ್ತು ಮಾರ್ಚ್ ನಡುವಿನ ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಾಗುತ್ತವೆ. ಈ ಸಂದರ್ಭದಲ್ಲಿ ದೇಶಕ್ಕೆ ಬರುವ ವಲಸೆ ಹಕ್ಕಿಗಳಿಂದ ಈ ರೋಗ ಹರಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!