AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bizarre News: ಹಾವನ್ನು ಕಚ್ಚಿ ಸಾಯಿಸಿದ ಮೂರು ವರ್ಷದ ಬಾಲಕ!

Uttara Pradesh: ಆಟವಾಡುತ್ತಿದ್ದಲ್ಲಿಗೆ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆ ನಂತರ ಮನೆಯವರು ಗಾಬರಿಗೊಂಡು ಬಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Bizarre News: ಹಾವನ್ನು ಕಚ್ಚಿ ಸಾಯಿಸಿದ ಮೂರು ವರ್ಷದ ಬಾಲಕ!
ಉತ್ತರ ಪ್ರದೇಶದಲ್ಲಿ ಬಾಲಕನೊಬ್ಬ ಹಾವನ್ನು ಕಚ್ಚಿ ಸಾಯಿಸಿದ ಘಟನೆ ನಡೆದಿದೆImage Credit source: Times Internet Network
Rakesh Nayak Manchi
Rakesh Nayak Manchi|

Updated on: Jun 05, 2023 | 9:36 PM

Share

ಕಾನ್ಪುರ (ಉತ್ತರ ಪ್ರದೇಶ): ಆಟವಾಡುತ್ತಿದ್ದಲ್ಲಿಗೆ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ (Uttara Pradesh) ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಂತರ ಮನೆಯವರು ಗಾಬರಿಗೊಂಡು ಬಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕ ಅಕ್ಷಯ್ ಮನೆ ಮುಂದೆ ಆಡುತ್ತಿದ್ದಾಗ ಸಣ್ಣ ಹಾವು ಎದುರಿಗೆ ಬಂದಿದೆ. ಇದನ್ನು ನೋಡಿದ ಅಕ್ಷಯ್, ಕೈಯಲ್ಲಿ ಹಿಡಿದು ಬಾಯಿಗೆ ಹಾಕಿ ಕಚ್ಚಿದ್ದಾನೆ. ನಂತರ ಜೋರಾಗಿ ಅಳ ತೊಡಗಿದ್ದಾನೆ. ಏನಾಯ್ತು ಎಂದು ಅಜ್ಜಿ ಮನೆಯೊಳಗಿಂದ ಬಂದು ನೋಡಿದಾಗ ಅಕ್ಷಯ್ ಬಾಯಲ್ಲಿ ಹಾವು ಕಂಡು ಆಘಾತಗೊಂಡಿದ್ದಾರೆ.

ಕೂಡಲೇ ಎಚ್ಚೆತ್ತ ಅಜ್ಜಿ, ಹಾವನ್ನು ತೆಗೆದು ಎಸೆದ ನಂತರ ಬಾಲಕನ ಬಾಯಿಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಬಾಲಕನ ಅಜ್ಜಿ ಸುನೀತಾ, ಅಕ್ಷಯ್ ಬಾಯಿಯಿಂದ ಹಾವನ್ನು ಹೊರತೆಗೆದೆ. ನಂತರ ಆತನ ಬಾಯಿಯನ್ನು ನೀರಿನಿಂದ ತೊಳೆದು ಪೋಷಕರಿಗೆ ತಿಳಿಸಿದೆ. ಗಾಬರಿಗೊಂಡ ಪೋಷಕರು ಮಗನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದರು.

ಇದನ್ನೂ ಓದಿ: Bizarre news: ವಿಶ್ವದ ಅಪಾಯಕಾರಿ ಬುಡಕಟ್ಟು ಮುರ್ಸಿ, ಅನುಮತಿ ಇಲ್ಲದೆ ಇಲ್ಲಿಗೆ ಹೋದರೆ ಕೊಂದೇ ಬಿಡುತ್ತಾರೆ

ಘಟನೆಯನ್ನು ವಿವರಿಸಲು ಹಾಗೂ ಹಾವಿನ ಬಗ್ಗೆ ತಿಳಿಸಲು ಬ್ಯಾಗ್​ನಲ್ಲಿ ಹಾವನ್ನು ಹಾಕಿ ವೈದ್ಯರ ಬಳಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸುದ್ದಿಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಬಾಲಕನಿಗೆ ಅಗತ್ಯ ಔಷಧಿ ನೀಡಲಾಗಿದೆ. ಜೀವಕ್ಕೆ ಯಾವುದೇ ಅಪಾಯವಿಲ್ಲ. ಆರೋಗ್ಯವಾಗಿದ್ದಾನೆ. ಹೀಗಾಗಿ ತಪಾಸಣೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವೈದ್ಯ ಮೊಹಮ್ಮದ್ ಸಲೀಂ ಅನ್ಸಾರಿ ಹೇಳಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್
ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್
ರಾಧಿಕಾ ಪಂಡಿತ್ ಯಶ್ ಅವರ ಅತಿ ದೊಡ್ಡ ಶಕ್ತಿ; ನಯನತಾರಾ ಭಾವುಕ ಮಾತು
ರಾಧಿಕಾ ಪಂಡಿತ್ ಯಶ್ ಅವರ ಅತಿ ದೊಡ್ಡ ಶಕ್ತಿ; ನಯನತಾರಾ ಭಾವುಕ ಮಾತು