AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bizarre News: ಹಾವನ್ನು ಕಚ್ಚಿ ಸಾಯಿಸಿದ ಮೂರು ವರ್ಷದ ಬಾಲಕ!

Uttara Pradesh: ಆಟವಾಡುತ್ತಿದ್ದಲ್ಲಿಗೆ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆ ನಂತರ ಮನೆಯವರು ಗಾಬರಿಗೊಂಡು ಬಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Bizarre News: ಹಾವನ್ನು ಕಚ್ಚಿ ಸಾಯಿಸಿದ ಮೂರು ವರ್ಷದ ಬಾಲಕ!
ಉತ್ತರ ಪ್ರದೇಶದಲ್ಲಿ ಬಾಲಕನೊಬ್ಬ ಹಾವನ್ನು ಕಚ್ಚಿ ಸಾಯಿಸಿದ ಘಟನೆ ನಡೆದಿದೆImage Credit source: Times Internet Network
Rakesh Nayak Manchi
|

Updated on: Jun 05, 2023 | 9:36 PM

Share

ಕಾನ್ಪುರ (ಉತ್ತರ ಪ್ರದೇಶ): ಆಟವಾಡುತ್ತಿದ್ದಲ್ಲಿಗೆ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ (Uttara Pradesh) ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಂತರ ಮನೆಯವರು ಗಾಬರಿಗೊಂಡು ಬಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕ ಅಕ್ಷಯ್ ಮನೆ ಮುಂದೆ ಆಡುತ್ತಿದ್ದಾಗ ಸಣ್ಣ ಹಾವು ಎದುರಿಗೆ ಬಂದಿದೆ. ಇದನ್ನು ನೋಡಿದ ಅಕ್ಷಯ್, ಕೈಯಲ್ಲಿ ಹಿಡಿದು ಬಾಯಿಗೆ ಹಾಕಿ ಕಚ್ಚಿದ್ದಾನೆ. ನಂತರ ಜೋರಾಗಿ ಅಳ ತೊಡಗಿದ್ದಾನೆ. ಏನಾಯ್ತು ಎಂದು ಅಜ್ಜಿ ಮನೆಯೊಳಗಿಂದ ಬಂದು ನೋಡಿದಾಗ ಅಕ್ಷಯ್ ಬಾಯಲ್ಲಿ ಹಾವು ಕಂಡು ಆಘಾತಗೊಂಡಿದ್ದಾರೆ.

ಕೂಡಲೇ ಎಚ್ಚೆತ್ತ ಅಜ್ಜಿ, ಹಾವನ್ನು ತೆಗೆದು ಎಸೆದ ನಂತರ ಬಾಲಕನ ಬಾಯಿಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಬಾಲಕನ ಅಜ್ಜಿ ಸುನೀತಾ, ಅಕ್ಷಯ್ ಬಾಯಿಯಿಂದ ಹಾವನ್ನು ಹೊರತೆಗೆದೆ. ನಂತರ ಆತನ ಬಾಯಿಯನ್ನು ನೀರಿನಿಂದ ತೊಳೆದು ಪೋಷಕರಿಗೆ ತಿಳಿಸಿದೆ. ಗಾಬರಿಗೊಂಡ ಪೋಷಕರು ಮಗನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದರು.

ಇದನ್ನೂ ಓದಿ: Bizarre news: ವಿಶ್ವದ ಅಪಾಯಕಾರಿ ಬುಡಕಟ್ಟು ಮುರ್ಸಿ, ಅನುಮತಿ ಇಲ್ಲದೆ ಇಲ್ಲಿಗೆ ಹೋದರೆ ಕೊಂದೇ ಬಿಡುತ್ತಾರೆ

ಘಟನೆಯನ್ನು ವಿವರಿಸಲು ಹಾಗೂ ಹಾವಿನ ಬಗ್ಗೆ ತಿಳಿಸಲು ಬ್ಯಾಗ್​ನಲ್ಲಿ ಹಾವನ್ನು ಹಾಕಿ ವೈದ್ಯರ ಬಳಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸುದ್ದಿಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಬಾಲಕನಿಗೆ ಅಗತ್ಯ ಔಷಧಿ ನೀಡಲಾಗಿದೆ. ಜೀವಕ್ಕೆ ಯಾವುದೇ ಅಪಾಯವಿಲ್ಲ. ಆರೋಗ್ಯವಾಗಿದ್ದಾನೆ. ಹೀಗಾಗಿ ತಪಾಸಣೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವೈದ್ಯ ಮೊಹಮ್ಮದ್ ಸಲೀಂ ಅನ್ಸಾರಿ ಹೇಳಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ