AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naveen Patnaik: ಒಡಿಶಾದ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ

ನಾವು ಬಿಜೆಡಿ ಶಾಸಕರ ಸಭೆ ನಡೆಸಿದ್ದೇವೆ. ನಾನು ಅವರನ್ನು ಅಭಿನಂದಿಸಿ ಧನ್ಯವಾದ ಸಲ್ಲಿಸಿದೆ. ಅವರು ನನ್ನನ್ನು ವಿರೋಧ ಪಕ್ಷದ ನಾಯಕ ಮತ್ತು ಬಿಜೆಡಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ" ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ನವೀನ್ ಪಟ್ನಾಯಕ್ ಹೇಳಿದ್ದಾರೆ.

Naveen Patnaik: ಒಡಿಶಾದ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ
ನವೀನ್ ಪಟ್ನಾಯಕ್
ರಶ್ಮಿ ಕಲ್ಲಕಟ್ಟ
|

Updated on:Jun 19, 2024 | 9:00 PM

Share

ಭುವನೇಶ್ವರ್ ಜೂನ್ 19: ಒಡಿಶಾದಲ್ಲಿ ಐದು ಅವಧಿಯ ಮುಖ್ಯಮಂತ್ರಿ ಆಗಿದ್ದ, ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ (Naveen Patnaik) ಅವರನ್ನು ಒಡಿಶಾ(Odisha )ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪಟ್ನಾಯಕ್, ಬುಧವಾರ ನಡೆದ ಬಿಜೆಡಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ನಾವು ಬಿಜೆಡಿ ಶಾಸಕರ ಸಭೆ ನಡೆಸಿದ್ದೇವೆ. ನಾನು ಅವರನ್ನು ಅಭಿನಂದಿಸಿ ಧನ್ಯವಾದ ಸಲ್ಲಿಸಿದೆ. ಅವರು ನನ್ನನ್ನು ವಿರೋಧ ಪಕ್ಷದ ನಾಯಕ ಮತ್ತು ಬಿಜೆಡಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ” ಎಂದು ಅವರು ಹೇಳಿದರು.

ಸಭೆಯಲ್ಲಿ ಇತ್ತೀಚಿನ ಚುನಾವಣೆಗಳು ಸೇರಿದಂತೆ ವಿವಿಧ ವಿಷಯಗಳನ್ನು ಚರ್ಚಿಸಲಾಯಿತು ಎಂದ ಪಟ್ನಾಯಕ್, ನಾನು ಮತ್ತು ನನ್ನ ಪಕ್ಷ ಒಡಿಶಾದ ಜನರಿಗಾಗಿ ಶ್ರಮಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ರಾಯರಖೋಲ್ ಶಾಸಕ, ಮಾಜಿ ರಾಜ್ಯ ಸಚಿವ ಪ್ರಸನ್ನ ಆಚಾರ್ಯ ಅವರನ್ನು ಪ್ರತಿಪಕ್ಷದ ಉಪನಾಯಕರನ್ನಾಗಿ ಹೆಸರಿಸಲಾಗಿದ್ದು, ಮಾಜಿ ಸ್ಪೀಕರ್ ಬಿಂಜಾರಪುರದ ಶಾಸಕಿ ಪ್ರಮೀಳಾ ಮಲ್ಲಿಕ್ ಅವರು ಸದನದಲ್ಲಿ ಪ್ರತಿಪಕ್ಷದ ಮುಖ್ಯ ಸಚೇತಕರಾಗಿರುತ್ತಾರೆ. ಪಟ್ನಾಯಕ್ ಅವರು ಮಾಜಿ ಸಚಿವ ಪ್ರತಾಪ್ ಕೇಶರಿ ದೇಬ್, ಔಲ್ ಶಾಸಕರನ್ನು ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ಮುಖ್ಯ ಸಚೇತಕ ಎಂದು ಹೆಸರಿಸಿದರು.

ನಾವು ಈಗ ಒಡಿಶಾದ ಇತಿಹಾಸದಲ್ಲಿ ಪ್ರಬಲ ಪ್ರತಿಪಕ್ಷವಾಗಿದ್ದೇವೆ. ಕಳೆದ 24 ವರ್ಷಗಳಿಂದ ನಾವು ಒಡಿಶಾದ ಜನರಿಗೆ ಸೇವೆ ಸಲ್ಲಿಸಿದ್ದೇವೆ. ಪ್ರತಿ ತಿಂಗಳು, ಪ್ರತಿ ವರ್ಷ, ಪ್ರತಿ ದಿನ ಮತ್ತು ಪ್ರತಿ ಗಂಟೆ, ನಾವು ಒಡಿಶಾದ ಅಭಿವೃದ್ಧಿಗೆ ಖರ್ಚು ಮಾಡಿದ್ದೇವೆ ಮತ್ತು ಪ್ರತಿಪಕ್ಷವಾಗಿಯೂ ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಆಚಾರ್ಯ ಹೇಳಿದ್ದಾರೆ.

ರೈತರು, ಯುವಕರು ಮತ್ತು ಮಹಿಳೆಯರ ಹಿತಾಸಕ್ತಿಗಳಿಗಾಗಿ ಬಿಜೆಡಿ ವಿಧಾನಸಭೆಯಲ್ಲಿ ಹೋರಾಟ ನಡೆಸಲಿದೆ ಎಂದು ಮಲ್ಲಿಕ್ ಹೇಳಿದ್ದಾರೆ. ರಾಜ್ಯದಲ್ಲಿ 24 ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಡಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದ್ದು , ಇಲ್ಲಿ ಬಿಜೆಪಿ ಅಧಿಕಾರಕ್ಕೇರಿತ್ತು.

ಇದನ್ನೂ ಓದಿ: ಹಿಂದಿಯಲ್ಲಿ ಬೇಟಿ ಪಡಾವೋ ಎಂದು ತಪ್ಪಾಗಿ ಬರೆದ ಕೇಂದ್ರ ಸಚಿವೆ; ಅರ್ಹತೆ ಪ್ರಶ್ನಿಸಿದ ಕಾಂಗ್ರೆಸ್

147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಪಡೆದು ಸರ್ಕಾರ ರಚಿಸಿದರೆ, ಬಿಜೆಡಿ 51 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದುಕೊಂಡಿತು, ಸಿಪಿಐ ಒಂದು ಮತ್ತು ಮೂರು ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Wed, 19 June 24

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ