AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಪುರದಲ್ಲಿ ಕಸದ ರಾಶಿ ವಿರುದ್ಧ ಬಿಜೆಪಿ ಪ್ರತಿಭಟನೆ, ನಾನು ಶ್ರವಣ ಕುಮಾರ ಎಂದ ಅರವಿಂದ ಕೇಜ್ರಿವಾಲ್

ನಾನು ದೆಹಲಿಯ ಹಿರಿಯ ನಾಗರಿಕರನ್ನು ಉಚಿತ ತೀರ್ಥಯಾತ್ರೆಗಳಿಗೆ ಕಳುಹಿಸಿದ್ದೇನೆ, ನಾನು ದೆಹಲಿಯ ‘ಶ್ರವಣ ಕುಮಾರ’ ಎಂದ ಅರವಿಂದ ಕೇಜ್ರಿವಾಲ್

ಗಾಜಿಪುರದಲ್ಲಿ ಕಸದ ರಾಶಿ ವಿರುದ್ಧ ಬಿಜೆಪಿ ಪ್ರತಿಭಟನೆ, ನಾನು ಶ್ರವಣ ಕುಮಾರ ಎಂದ ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 27, 2022 | 1:34 PM

Share

ದೆಹಲಿ: ದೆಹಲಿಯ ಬಿಜೆಪಿ (BJP) ಮತ್ತು ಎಎಪಿ (AAP) ಕಾರ್ಯಕರ್ತರು ಇಂದು ಗಾಜಿಪುರದಲ್ಲಿ ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯ ಕಸದ ಸಮಸ್ಯೆ ವಿಚಾರವಾಗಿ ಬಿಜೆಪಿ, ಕೇಜ್ರಿವಾಲ್ ವಿರುದ್ದ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಅರವಿಂದ ಕೇಜ್ರಿವಾಲ್ (Arvind Kejriwal) ಅವರ ಗಾಜಿಪುರದಲ್ಲಿ ಕಸ ತುಂಬುವ ಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಕಸ ವಿಲೇವಾರಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಎಪಿ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ದೆಹಲಿಯ ನಗರ ಪಾಲಿಕೆ ಅಥವಾ ಮುನ್ಸಿಪಲ್ ಕಾರ್ಪೊರೇಷನ್ ಆಫ್ ಡೆಲ್ಲಿ (MCD) ಚುನಾವಣೆ ಸಮೀಪಿಸುತ್ತಿದ್ದಂತೆ ಕೇಜ್ರಿವಾಲ್, ದೆಹಲಿಯ ತ್ಯಾಜ್ಯಗಳನ್ನು ಸುರಿಯುವ ಸ್ಥಳವಾದ ಗಾಜಿಪುರಕ್ಕೆ ಭೇಟಿ ನೀಡಿದ್ದಾರೆ. ಏಕೀಕೃತ ಎಂಸಿಡಿ ಚುನಾವಣೆ ಈ ವರ್ಷದ ಅಂತ್ಯದ ವೇಳೆಗೆ ಅಥವಾ 2023 ರ ಆರಂಭದಲ್ಲಿ ನಡೆಯುವ ಸಾಧ್ಯತೆಯಿದೆ.

ಎಲ್ಲಾ ಮೂರು ಎಂಸಿಡಿಗಳನ್ನು ವಿಸರ್ಜಿಸಿ ಒಂದು ಏಕೀಕೃತ ಸಂಸ್ಥೆಯನ್ನು ಮಾಡುವ ಮೊದಲು ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (MCD)ನಲ್ಲಿ ಒಂದು ದಶಕದಿಂದ ಹೆಚ್ಚು ಕಾಲ ಅಧಿಕಾರ ಹೊಂದಿದ್ದ ಬಿಜೆಪಿ ವಿರುದ್ಧ ಎಎಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಇತ್ತ, ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ಅರವಿಂದ ಕೇಜ್ರಿವಾಲ್ ಅವರನ್ನು ಸುಳ್ಳುಗಾರ ಎಂದು ಕರೆದಿದ್ದಾರೆ.

ಬಿಜೆಪಿ ಪ್ರತಿಭಟನೆ ತಾರ್ಕಿಕವಲ್ಲದ್ದು ಎಂದು ಟೀಕಿಸಿದ ಕೇಜ್ರಿವಾಲ್ ನಾನು ದೆಹಲಿಯ ಹಿರಿಯ ನಾಗರಿಕರನ್ನು ಉಚಿತ ತೀರ್ಥಯಾತ್ರೆಗಳಿಗೆ ಕಳುಹಿಸಿದ್ದೇನೆ, ನಾನು ದೆಹಲಿಯ ‘ಶ್ರವಣ ಕುಮಾರ’ ಎಂದಿದ್ದಾರೆ. ತಂದೆ ತಾಯಿಯನ್ನು ಶ್ರದ್ಧಾ ಭಕ್ತಿಯಿಂದ ತೀರ್ಥಯಾತ್ರೆಗೆ ಕರೆದೊಯ್ದ ರಾಮಾಯಣದ  ಶ್ರವಣ ಕುಮಾರನಿಗೆ ಕೇಜ್ರಿವಾಲ್ ತಮ್ಮನ್ನು ಹೋಲಿಸಿಕೊಂಡಿದ್ದಾರೆ.

ಬಿಜೆಪಿ ಮತದಾರರು ಒಮ್ಮೆ ಪಕ್ಷ ಬೇಧ ಮರೆತು ಬಿಡಿ. ನಾವು ದೆಹಲಿಯನ್ನು ಸ್ಪಚ್ಛ ಮಾಡುತ್ತೇವೆ. ನಿಮ್ಮನ್ನು ತೀರ್ಥಯಾತ್ರೆಗೆ ಕರೆದೊಯ್ದ ನಿಮ್ಮ ಮಗನಿಗೆ ಮತ ನೀಡಿ ಎಂದು ನಾನು  ದೆಹಲಿಯ ಅಮ್ಮಂದಿರಿಗೆ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ ಕೇಜ್ರಿವಾಲ್.

ಗುಜರಾತ್ ಚುನಾವಣೆ ಸಮೀಪಿಸುತ್ತಿದ್ದಂತೆ ಎಎಪಿ ಮತ್ತು ಬಿಜೆಪಿ ನಡುವಿನ ಗುದ್ದಾಟ ಮತ್ತಷ್ಟು ತೀವ್ರವಾಗಿದೆ.ಇದರ ನಡುವೆಯೇ ಕರೆನ್ಸಿ ನೋಟುಗಳ ಮೇಲೆ ಹಿಂದೂ ದೇವತೆಗಳ ಚಿತ್ರಗಳಿರಬೇಕು ಎಂದು ಕೇಜ್ರಿವಾಲ್ ಹೇಳಿದ್ದು, ಬಿಜೆಪಿಯ ಹಿಂದುತ್ವ ಮತಗಳನ್ನು ಕಬಳಿಸುವ ತಂತ್ರ ಎನ್ನಲಾಗಿದೆ.

ಇಂದು ಗಾಜಿಪುರದಲ್ಲಿ ಕೇಜ್ರಿವಾಲ್ ಬರುವುದಕ್ಕೆ ಮುನ್ನ ಬಿಜೆಪಿ ಕಾರ್ಯಕರ್ತರು ಎಎಪಿ ಧ್ವಜಗಳನ್ನು ತುಳಿದರ.ಕೆಲವರು ಅವುಗಳನ್ನು ರಸ್ತೆಯ ಮೇಲೆ ಹಾಕಿ ಕೋಲುಗಳಿಂದ ಹೊಡೆದರು. ಕೇಜ್ರಿವಾಲ್ ಹೋಗುವ ರಸ್ತೆಯನ್ನು ನಿರ್ಬಂಧಿಸಿ. ‘ಕೇಜ್ರಿವಾಲ್, ಹಾಯ್ ಹಾಯ್’ ಎಂದು ಎದೆಗೆ ಬಡಿದುಕೊಳ್ಳುತ್ತಿದ್ದರು. ಇದಕ್ಕೆ ಪ್ರತಿಯಾಗಿ ಎಎಪಿ ಕಾರ್ಯಕರ್ತರು ಎದೆಗೆ ಹೊಡೆದುಕೊಂಡು ಬಿಜೆಪಿ ಮುರ್ದಾಬಾದ್ ಎಂದು ಘೋಷಣೆ ಕೂಗಿದರು.

Published On - 1:32 pm, Thu, 27 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ