Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಡೆನ್‌ಬರ್ಗ್‌ನ ಪ್ರಮುಖ ಹೂಡಿಕೆದಾರ ಜಾರ್ಜ್ ಸೊರೊಸ್: ಬಿಜೆಪಿ ಆರೋಪ

ಭಾರತದ ಷೇರುಪೇಟೆಗೆ ತೊಂದರೆಯಾದರೆ, ಸಣ್ಣ ಹೂಡಿಕೆದಾರರಿಗೆ ತೊಂದರೆಯಾಗುತ್ತದೆಯೇ ಅಥವಾ ಇಲ್ಲವೇ? ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಒಂದು ಟೂಲ್ ಕಿಟ್ ರಾಜಕೀಯವಿದೆ, ಇನ್ನೊಂದು ಚಿಟ್ ರಾಜಕೀಯ. ಪರೀಕ್ಷೆಯಲ್ಲಿ ಚಿಟ್‌ಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಪಡೆಯುವ ಚಿಟ್‌ಗಳ ಬಗ್ಗೆ ಏನು ಮಾಡಬೇಕು ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಕೇಳಿದ್ದಾರೆ.

ಹಿಂಡೆನ್‌ಬರ್ಗ್‌ನ ಪ್ರಮುಖ ಹೂಡಿಕೆದಾರ ಜಾರ್ಜ್ ಸೊರೊಸ್: ಬಿಜೆಪಿ ಆರೋಪ
ರವಿ ಶಂಕರ್ ಪ್ರಸಾದ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 12, 2024 | 4:18 PM

ದೆಹಲಿ ಆಗಸ್ಟ್ 12: ಹಂಗೇರಿಯನ್ ಮೂಲದ ಯುಎಸ್ ಹೂಡಿಕೆದಾರ ಜಾರ್ಜ್ ಸೊರೊಸ್ (George Soros) ಹಿಂಡೆನ್‌ಬರ್ಗ್ ರಿಸರ್ಚ್​ನಲ್ಲಿ (Hindenburg Research) ಪ್ರಮುಖ ಹೂಡಿಕೆದಾರರಾಗಿದ್ದಾರೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಇಂದು ನಾವು ಕೆಲವು ಸಮಸ್ಯೆಗಳನ್ನು ಎತ್ತಲು ಬಯಸುತ್ತೇವೆ. ಹಿಂಡೆನ್‌ಬರ್ಗ್‌ನಲ್ಲಿ ಯಾರ ಹೂಡಿಕೆ ಇದೆ? ಭಾರತದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡುವ ಈ ಮಹನೀಯ ಜಾರ್ಜ್ ಸೊರೊಸ್ ನಿಮಗೆ ಗೊತ್ತಾ…ಅವರೇ ಅಲ್ಲಿನ ಪ್ರಮುಖ ಹೂಡಿಕೆದಾರ… ನರೇಂದ್ರ ಮೋದಿ ವಿರುದ್ಧದ ತಮ್ಮ ರೋಗಗ್ರಸ್ತ ದ್ವೇಷದಲ್ಲಿ ಕಾಂಗ್ರೆಸ್ ಪಕ್ಷ ಇಂದು ಭಾರತದ ವಿರುದ್ಧವೇ ದ್ವೇಷ ಬೆಳೆಸಿಕೊಂಡಿದೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ (Ravi Shankar Prasad) ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

“ಭಾರತದ ಷೇರುಪೇಟೆಗೆ ತೊಂದರೆಯಾದರೆ, ಸಣ್ಣ ಹೂಡಿಕೆದಾರರಿಗೆ ತೊಂದರೆಯಾಗುತ್ತದೆಯೇ ಅಥವಾ ಇಲ್ಲವೇ? ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಒಂದು ಟೂಲ್ ಕಿಟ್ ರಾಜಕೀಯವಿದೆ, ಇನ್ನೊಂದು ಚಿಟ್ ರಾಜಕೀಯ. ಪರೀಕ್ಷೆಯಲ್ಲಿ ಚಿಟ್‌ಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಪಡೆಯುವ ಚಿಟ್‌ಗಳ ಬಗ್ಗೆ ಏನು ಮಾಡಬೇಕು?.ಅವರು ಇಡೀ ಷೇರು ಮಾರುಕಟ್ಟೆಯನ್ನು ಕ್ರ್ಯಾಶ್ ಮಾಡಲು ಬಯಸುತ್ತಾರೆ, ಸಣ್ಣ ಹೂಡಿಕೆದಾರರ ಬಂಡವಾಳ ಹೂಡಿಕೆಯನ್ನು ನಿಲ್ಲಿಸುತ್ತಾರೆ. ಭಾರತದಲ್ಲಿ ಆರ್ಥಿಕ ಹೂಡಿಕೆಯಾಗದಂತೆ ನೋಡಿಕೊಳ್ಳುತ್ತಾರೆ” ಎಂದಿದ್ದಾರೆ ಬಿಜೆಪಿ ನಾಯಕ.

ಸೊರೊಸ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಓಪನ್ ಸೊಸೈಟಿ ಫೌಂಡೇಶನ್‌ನ ಸಂಸ್ಥಾಪಕರ ವಿಮರ್ಶಕರಾಗಿದ್ದಾರೆ. ಅವರು “ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ” ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಶನಿವಾರ, ಯುಎಸ್ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸ್ಫೋಟಕ ವರದಿಯಲ್ಲಿ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅವರು ಅದಾನಿ ಹಣದ ಹಗರಣದಲ್ಲಿ ಬಳಸಲಾದ ಅಸ್ಪಷ್ಟ ಕಡಲಾಚೆಯ ನಿಧಿಗಳಲ್ಲಿ ಪಾಲುಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿಂಡೆನ್‌ಬರ್ಗ್ ಆರೋಪಗಳನ್ನು ‘ದುರುದ್ದೇಶಪೂರಿತ, ಪ್ರೇರಿತ’ ಎಂದು ಸೆಬಿ ಮುಖ್ಯಸ್ಥರು ಕರೆದಿದ್ದಾರೆ.

ಕಳೆದ ವರ್ಷ ಜನವರಿಯಲ್ಲಿ, ಹಿಂಡೆನ್‌ಬರ್ಗ್ ಅದಾನಿ ಗ್ರೂಪ್‌ನ ಹಣಕಾಸು ಅಕ್ರಮಗಳ ಆರೋಪದ ವರದಿಯನ್ನು ಪ್ರಕಟಿಸಿತು. ಇದು ಗುಂಪಿನ ಷೇರುಗಳ ಬೆಲೆಯಲ್ಲಿ ಗಮನಾರ್ಹ ಕುಸಿತಕ್ಕೆ ಕಾರಣವಾಯಿತು. ಅದಾನಿ ಈ ಹೇಳಿಕೆಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದ್ದರು.

ಇದನ್ನೂ ಓದಿ: ಸುಪ್ರಿಯಾ ಸುಳೆ ವಾಟ್ಸಾಪ್​ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್​

ಸೆಕ್ಯೂರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಯ “ಸಮಗ್ರತೆ” ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ “ಗಂಭೀರವಾಗಿ ರಾಜಿ” ಆದ ನಂತರ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗಮನಾರ್ಹ ಅಪಾಯವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ