AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢದಲ್ಲಿ 2 ಎಕರೆ ಜಾಗದಲ್ಲಿ ಅರವಿಂದ್ ಕೇಜ್ರಿವಾಲ್ ಹೊಸ ‘ಶೀಷ್ ಮಹಲ್’ ನಿರ್ಮಾಣ; ಬಿಜೆಪಿ ಆರೋಪ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಐಷಾರಾಮಿ ಬಂಗಲೆ ಶೀಷ್ ಮಹಲ್ ವಿವಾದದ ಬಳಿಕ ಇದೀಗ ಛತ್ತೀಸ್​ಗಢದಲ್ಲಿ ಕೂಡ ಅದೇ ರೀತಿಯ ಬಂಗಲೆಯನ್ನು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್ ಸರ್ಕಾರವು ಅರವಿಂದ್ ಕೇಜ್ರಿವಾಲ್ ಅವರಿಗೆ ಚಂಡೀಗಢದಲ್ಲಿ "7 ಸ್ಟಾರ್ ಐಷಾರಾಮಿ ಬಂಗಲೆ" ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.

ಚಂಡೀಗಢದಲ್ಲಿ 2 ಎಕರೆ ಜಾಗದಲ್ಲಿ ಅರವಿಂದ್ ಕೇಜ್ರಿವಾಲ್ ಹೊಸ 'ಶೀಷ್ ಮಹಲ್' ನಿರ್ಮಾಣ; ಬಿಜೆಪಿ ಆರೋಪ
Kejriwal Bunglow
ಸುಷ್ಮಾ ಚಕ್ರೆ
|

Updated on: Oct 31, 2025 | 7:19 PM

Share

ನವದೆಹಲಿ, ಅಕ್ಟೋಬರ್ 31: ಅರವಿಂದ್ ಕೇಜ್ರಿವಾಲ್ ವಿರುದ್ಧದ ‘ಶೀಷ್ ಮಹಲ್’ ವಿವಾದ ಮತ್ತೆ ಚರ್ಚೆಯಾಗುತ್ತಿದೆ. ಈ ಬಾರಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಚಂಡೀಗಢದಲ್ಲಿ 2 ಎಕರೆ ವಿಸ್ತೀರ್ಣದ ವಿಶಾಲವಾದ ಹೊಸ ಬಂಗಲೆ ನೀಡಲಾಗಿದೆ ಎಂದು ಬಿಜೆಪಿ ಹೊಸ ವಾಗ್ದಾಳಿ ನಡೆಸಿದೆ. ಆದರೆ, ಈ ಆರೋಪಗಳನ್ನು “ಆಧಾರರಹಿತ” ಎಂದು ತಳ್ಳಿಹಾಕಿದ ಎಎಪಿ, ಬಿಜೆಪಿ ತನ್ನ ಹೇಳಿಕೆಯನ್ನು ದೃಢೀಕರಿಸಲು ದಾಖಲೆ ತೋರಿಸುವಂತೆ ಒತ್ತಾಯಿಸಿದೆ.

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪಂಜಾಬ್ ರಾಜಧಾನಿ ಚಂಡೀಗಢದಲ್ಲಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು “7-ಸ್ಟಾರ್ ಐಷಾರಾಮಿ ಬಂಗಲೆ”ಯನ್ನು ನೀಡಿದೆ ಎಂದು ಬಿಜೆಪಿ ಆರೋಪಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಬಂಗಲೆಯ ವೈಮಾನಿಕ ಫೋಟೋವನ್ನು ಹಂಚಿಕೊಂಡ ಬಿಜೆಪಿ, ಚಂಡೀಗಢದ ಸೆಕ್ಟರ್ 2ನಲ್ಲಿರುವ ಎರಡು ಎಕರೆ ನಿವಾಸವನ್ನು ಮುಖ್ಯಮಂತ್ರಿ ಕೋಟಾದಡಿಯಲ್ಲಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: Arvind Kejriwal: ದೆಹಲಿ ಚುನಾವಣೆಯಲ್ಲಿ ಅರವಿಂದ್​ ಕೇಜ್ರಿವಾಲ್​ಗೆ ಸೋಲು, ಎಎಪಿ ವರಿಷ್ಠಗೆ ಭಾರೀ ಮುಖಭಂಗ

“ಕಾಮನ್ ಮ್ಯಾನ್ ಎಂದು ನಟಿಸಿದ ವ್ಯಕ್ತಿ ದೆಹಲಿಯ ನಂತರ ಪಂಜಾಬ್​​ನಲ್ಲಿ ಮತ್ತೊಂದು ಭವ್ಯವಾದ ಶೀಷ್ ಮಹಲ್ ಅನ್ನು ನಿರ್ಮಿಸಿದ್ದಾರೆ. ದೆಹಲಿಯ ‘ಶೀಷ್ ಮಹಲ್’ ಅನ್ನು ಖಾಲಿ ಮಾಡಿದ ನಂತರ ಅರವಿಂದ್ ಕೇಜ್ರಿವಾಲ್ ಪಂಜಾಬಿನಲ್ಲಿ ಇನ್ನೊಂದು ಭವ್ಯವಾದ ಒಂದನ್ನು ನಿರ್ಮಿಸಿದ್ದಾರೆ” ಎಂದು ಬಿಜೆಪಿಯ ದೆಹಲಿ ಘಟಕವು ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: Parvesh Verma: ಅರವಿಂದ್ ಕೇಜ್ರಿವಾಲ್​ ಎದುರು ಗೆದ್ದು ದೆಹಲಿ ಸಿಎಂ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿರುವ ಪರ್ವೇಶ್ ವರ್ಮಾ ಯಾರು?

ಇದನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ. ಬಿಜೆಪಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮನೆ ಮಂಜೂರು ಮಾಡಲಾಗಿದೆ ಎಂದು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆಪ್ ಆರೋಪಿಸಿದೆ. “ಮನೆ ಹಂಚಿಕೆ ಪತ್ರ ಎಲ್ಲಿದೆ?” ಎಂದು ಪ್ರಶ್ನಿಸಿದ ಎಎಪಿ, ಬಿಜೆಪಿಯ ಆರೋಪಗಳು ಆಧಾರರಹಿತ ಎಂದು ತಳ್ಳಿಹಾಕಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ