AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಕತ್ತರಿ, ವಿವಾದಾತ್ಮಕ ಮಾತುಗಳನ್ನು ಕಲಾಪದಿಂದ ತೆಗೆಯಲು ಸ್ಪೀಕರ್ ಸೂಚನೆ

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು ಆ ಭಾಷಣವನ್ನು ಕಲಾಪದಿಂದ ತೆಗೆದುಹಾಕುವಂತೆ ಸ್ಪೀಕರ್ ಓಂ ಬಿರ್ಲಾ ಸೂಚನೆ ನೀಡಿದ್ದಾರೆ. ಸಂಸತ್​ ಅಧಿವೇಶನದ ಆರನೇ ದಿನವಾದ ಸೋಮವಾರ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಭಾಷಣದ ವೇಳೆ ಗದ್ದಲ ಉಂಟಾಗಿತ್ತು. ಎರಡೂವರೆ ಗಂಟೆಯ ಭಾಷಣದಲ್ಲಿ ರಾಹುಲ್ ಹಲವು ವಿವಾದಾತ್ಮಕ ವಿಷಯಗಳನ್ನು ಹೇಳಿದ್ದು ಆಡಳಿತ ಪಕ್ಷಕ್ಕೆ ಅದರಲ್ಲೂ ಬಿಜೆಪಿಗೆ ಅಸಮಾಧಾನ ತಂದಿದೆ.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಕತ್ತರಿ, ವಿವಾದಾತ್ಮಕ ಮಾತುಗಳನ್ನು ಕಲಾಪದಿಂದ ತೆಗೆಯಲು ಸ್ಪೀಕರ್ ಸೂಚನೆ
ರಾಹುಲ್ ಗಾಂಧಿImage Credit source: Hindustan Times
ನಯನಾ ರಾಜೀವ್
|

Updated on: Jul 02, 2024 | 9:58 AM

Share

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಬಿಜೆಪಿ ಹಾಗೂ ಆರ್​ಎಸ್​ಎಸ್​ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ಕಾರಣ ಅವರ ಭಾಷಣವನ್ನು ಕಲಾಪದಿಂದ ತೆಗೆಯುವಂತೆ ಸ್ಪೀಕರ್ ಓಂ ಬಿರ್ಲಾ ಸೂಚನೆ ನೀಡಿದ್ದಾರೆ. ಲೋಕಸಭೆ ಸಚಿವಾಲಯದ ಪತ್ರಿಕಾ ಮತ್ತು ಸಾರ್ವಜನಿಕ ಸಂಪರ್ಕ ಶಾಖೆಯ ಜಂಟಿ ನಿರ್ದೇಶಕ ಬೈಕುಂಠನಾಥ ಮಹಾಪಾತ್ರ ಅವರು ಪತ್ರವೊಂದನ್ನು ಹೊರಡಿಸಿ ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಈ ವೇಳೆ ಅವರು ಇಂತಹ ಹಲವು ವಿಷಯಗಳನ್ನು ಹೇಳಿದ್ದು ಆಡಳಿತ ಪಕ್ಷ ಅದರಲ್ಲೂ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಎರಡು ಬಾರಿ ಪ್ರಧಾನಿ ಮೋದಿ ತಮ್ಮ ಆಸನದಿಂದ ಎದ್ದು ಉತ್ತರಿಸಬೇಕಾಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ರಾಹುಲ್ ಭಾಷಣಕ್ಕೂ ಎನ್ ಡಿಎ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಓಂ ಬಿರ್ಲಾ ಅವರೇ ಎಚ್ಚರಿಕೆಯಿಂದ ಮಾತನಾಡುವಂತೆ ಒತ್ತಾಯಿಸಿದ್ದರು. ಹಿಂದೂಗಳ ಕುರಿತ ಅವರ ಹೇಳಿಕೆ ಸೇರಿದಂತೆ ಭಾಷಣದ ಕೆಲವು ಭಾಗಗಳನ್ನು ಈಗ ಸದನದ ಕಲಾಪದಿಂದ ತೆಗೆದುಹಾಕಲಾಗಿದೆ. ರಾಹುಲ್ ಗಾಂಧಿ ಅವರ ವಿವಾದಾತ್ಮಕ ಭಾಷಣದ ಕೆಲವು ಸಾಲುಗಳಿಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಅವರ ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ, ಅಶ್ವಿನಿ ವೈಷ್ಣವ್ ಮತ್ತು ಎನ್‌ಡಿಎ ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಆಡಳಿತ ಪಕ್ಷದ ಅನೇಕ ಸಂಸದರು ರಾಹುಲ್ ಕ್ಷಮೆಯಾಚಿಸುವಂತೆ ಕೇಳಿಕೊಂಡರು. ರಾಹುಲ್ ಭಾಷಣದ ವೇಳೆ ಹಲವು ಬಾರಿ ರಾಜನಾಥ್ ಸಿಂಗ್, ಪ್ರಧಾನಿ ಮೋದಿ, ಕಿರಣ್ ರಿಜಿಜು ತಮ್ಮ ಆಸನಗಳಿಂದ ಎದ್ದು ರಾಹುಲ್ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.

ಆಡಳಿತ ಪಕ್ಷದ ನಾಯಕರು ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದರು. ಮೋದಿ, ಬಿಜೆಪಿ, ಆರ್ ಎಸ್ಎಸ್ ಮಾತ್ರ ಇಡೀ ಹಿಂದೂ ಸಮುದಾಯವಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು.

ಭಾರತದ ಪರಿಕಲ್ಪನೆ, ಸಂವಿಧಾನ, ಸಂವಿಧಾನದ ಮೇಲಿನ ದಾಳಿಯನ್ನು ತಡೆಯಲು ಮುಂದಾದವರ ಮೇಲೆ ವ್ಯವಸ್ಥಿತ ಪೂರ್ಣಪ್ರಮಾಣದ ದಾಳಿಗಳು ನಡೆದಿವೆ ಎಂದು ರಾಹುಲ್ ಗಾಂಧಿ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಗುರುನಾನಕ್, ಬುದ್ಧ, ಮಹಾವೀರ ಸೇರಿದಂತೆ ಭಾರತದಲ್ಲಿ ಯಾವುದೇ ಮಹಾಪುರುಷರನ್ನು ನೋಡಿದರೂ ಅವರೆಲ್ಲರೂ ಅಹಿಂಸೆಯನ್ನು ಬೋಧಿಸಿದರು, ಹಿಂಸೆಯನ್ನು ವಿರೋಧಿಸಿದವರಾಗಿದ್ದಾರೆ. ಆದರೆ ಕೇಂದ್ರ ಸರ್ಕಾರದಲ್ಲಿರುವ, ಹಿಂದೂಗಳೆಂದು ಕರೆದುಕೊಳ್ಳುವವರು ಹಿಂದೂ ಧರ್ಮದ ಮೂಲಭೂತವಾದ ಅಂಶ ಅಹಿಂಸೆಗೆ ವಿರುದ್ಧವಾಗಿ ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ, ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಕಟುವಾದ ಮಾತುಗಳನ್ನಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ