AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ಗೆದ್ದ ಆಮ್​ ಆದ್ಮಿ ಪಾರ್ಟಿಗೆ ಹರ್ಯಾಣದ ಹಲವು ಬಿಜೆಪಿ, ಕಾಂಗ್ರೆಸ್​ ನಾಯಕರ ಸೇರ್ಪಡೆ; ಕೇಜ್ರಿವಾಲ್​​ಗೆ ಜಾಕ್​ಪಾಟ್​

ಗುರುಗ್ರಾಮದ ಬಿಜೆಪಿ ಮಾಜಿ ಶಾಸಕ ಉಮೇಶ್​ ಅಗರ್​ವಾಲ್​, ಹಿರಿಯ ಕಾಂಗ್ರೆಸ್ ನಾಯಕ ಬಿಜೇಂದ್ರ ಸಿಂಗ್​, ಭಾರತೀಯ ರಾಷ್ಟ್ರೀಯ ಲೋಕದಳ ನಾಯಕ, ಹರ್ಯಾಣದ ಮಾಜಿ ಸಚಿವ ಬಲಬೀರ್ ಸೈನಿ ಮತ್ತಿತರ ಪ್ರಮುಖ ನಾಯಕರು ಇದೀಗ ಆಪ್​ ಪಕ್ಷ ಸೇರಿದ್ದಾರೆ.

ಪಂಜಾಬ್​​ನಲ್ಲಿ ಗೆದ್ದ ಆಮ್​ ಆದ್ಮಿ ಪಾರ್ಟಿಗೆ ಹರ್ಯಾಣದ ಹಲವು ಬಿಜೆಪಿ, ಕಾಂಗ್ರೆಸ್​ ನಾಯಕರ ಸೇರ್ಪಡೆ; ಕೇಜ್ರಿವಾಲ್​​ಗೆ ಜಾಕ್​ಪಾಟ್​
ಆಪ್​ ವಿಜಯಯಾತ್ರೆ ಚಿತ್ರ
TV9 Web
| Edited By: |

Updated on:Mar 17, 2022 | 2:40 PM

Share

ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷ ಗೆದ್ದಿದ್ದೇ ಗೆದ್ದಿದ್ದು, ಆ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹರ್ಯಾಣದ ಹಲವು ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಗುರುಗಾಂವ್​ ಶಾಸಕ  ಉಮೇಶ್ ಅಗರ್​ವಾಲ್​, ಮಾಜಿ ಸಚಿವ ಮತ್ತು ಕಾಂಗ್ರೆಸ್​ ನಾಯಕ ಬಿಜೇಂದ್ರ ಸಿಂಗ್​ ಸೇರಿ ಹಲವು ನಾಯಕರು ಆಪ್​​ಗೆ ಸೇರ್ಪಡೆಗೊಂಡಿದ್ದಾರೆ.

ಗುರುಗ್ರಾಮದ ಬಿಜೆಪಿ ಮಾಜಿ ಶಾಸಕ ಉಮೇಶ್​ ಅಗರ್​ವಾಲ್​, ಹಿರಿಯ ಕಾಂಗ್ರೆಸ್ ನಾಯಕ ಬಿಜೇಂದ್ರ ಸಿಂಗ್​, ಭಾರತೀಯ ರಾಷ್ಟ್ರೀಯ ಲೋಕದಳ ನಾಯಕ, ಹರ್ಯಾಣದ ಮಾಜಿ ಸಚಿವ ಬಲಬೀರ್ ಸೈನಿ ಮತ್ತಿತರ ಪ್ರಮುಖ ನಾಯಕರು ಇದೀಗ ಆಪ್​ ಪಕ್ಷ ಸೇರಿದ್ದಾರೆ. ಇನ್ನು, ಸಮಲ್ಖಾದ ಮಾಜಿ ಶಾಸಕ (ಸ್ವತಂತ್ರ) ರವೀಂದ್ರ ಕುಮಾರ್​, ಕಾಂಗ್ರೆಸ್​ ನಾಯಕ ಜಗತ್​ ಸಿಂಗ್​, ಬಿಎಸ್​​ಪಿಯ ಅಶೋಕ್​ ಮಿತ್ತಲ್​, ಬಿಜೆಪಿಯ ಅಮಂದೀಪ್​ ಸಿಂಗ್​ ವಾರಾಯಿಚ್, ಬಿಜೆಪಿಯ ಬಹ್ಮ ಸಿಂಗ್ ಗುರ್ಜಾರ್​, ಹರ್ಯಾಣದ ಸರ್​ಪಂಚ್​ ಆಗಿದ್ದ ಸರ್ದಾರ್ ಗುರ್ಲಾಲ್​ ಸಿಂಗ್​ ಕೂಡ ಕೈಯಲ್ಲಿ ಪೊರಕೆ ಹಿಡಿದಿದ್ದಾರೆ. ಅರ್ಥಾತ್​ ಆಮ್​ ಆದ್ಮಿ ಪಕ್ಷಕ್ಕೆ ಸೇರಿದ್ದಾರೆ.

ಈ ಬಗ್ಗೆ ಆಪ್​ ಶಾಸಕ ಸುಶೀಲ್​ ಗುಪ್ತಾ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ, ಕಾಂಗ್ರೆಸ್​ ಮತ್ತು ಇತರ ಪಕ್ಷಗಳಿಂದ ಹಲವು ಶಾಸಕರು, ಪ್ರಮುಖ ನಾಯಕರು ಆಪ್​ ಸೇರಿದ್ದಾರೆ. ಇವರೆಲ್ಲ ದೆಹಲಿಯಲ್ಲಿ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು ಎಂದೂ ತಿಳಿಸಿದ್ದಾರೆ. ಪಂಜಾಬ್​ ಮತ್ತು ದೆಹಲಿಯ ನಂತರ ಹರ್ಯಾಣದ ಜನರು ಆಪ್​​ನತ್ತ ಒಲವು ತೋರಿಸುತ್ತಿದ್ದಾರೆ. ಅಲ್ಲಿಯೂ ಕೂಡ ಮುಂದಿನ ಚುನಾವಣೆ ನಂತರ ಆಪ್​ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಳ್ಳೆಯ ಆಡಳಿತ, ಬೊಮ್ಮಾಯಿ ನೇತೃತ್ವದಲ್ಲಿ ಕೆಲಸಗಳು ಉತ್ತಮವಾಗಿ ಆಗುತ್ತಿವೆ, ಶಹಬಾಸ್! ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ

Published On - 9:23 am, Tue, 15 March 22

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು