AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್​​ ಪಕ್ಷದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಭಾರತೀಯ ಜನತಾ ಪಕ್ಷವು (BJP) 2026ರ ರಾಜ್ಯಸಭಾ ಚುನಾವಣೆ ಮತ್ತು ಒಡಿಶಾ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕಾಂಗ್ರೆಸ್ ಕೂಡ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಂಸತ್ತಿನ ಮೇಲ್ಮನೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಖ್ಯಾಬಲವನ್ನು ಗರಿಷ್ಠಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಈ ಅಭ್ಯರ್ಥಿಗಳಿಗೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅನುಮೋದನೆ ನೀಡಿದೆ. ಇದರೊಂದಿಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆಯನ್ನು ಆಯೋಗ ಪ್ರಕಟಿಸಿದೆ.

ಬಿಜೆಪಿ, ಕಾಂಗ್ರೆಸ್​​ ಪಕ್ಷದ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ
Bjp Image Credit source: TV9
ಸುಷ್ಮಾ ಚಕ್ರೆ
|

Updated on:Jun 04, 2026 | 10:39 PM

Share

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಸತೀಶ್ ಪೂನಿಯಾ ಈಗ ಕರ್ನಾಟಕದಲ್ಲಿ ಚುನಾವಣಾ ಉಸ್ತುವಾರಿ ಹೊಂದಿದ್ದಾರೆ. ಜಿಬಿಎ ಚುನಾವಣೆಗೆ ಬಿಜೆಪಿ ಸಹ ಉಸ್ತುವಾರಿ ಆಗಿದ್ದಾರೆ.

ಅರುಣಾಚಲ ಪ್ರದೇಶದಿಂದ ತಾಯಿ ತಾಗಕ್ ಸ್ಪರ್ಧಿಸಲಿದ್ದರೆ, ಗುಜರಾತ್‌ನಿಂದ ರಾಜುಭಾಯ್ ಶುಕ್ಲಾ, ಮುಖೇಶ್‌ಭಾಯ್ ರಾಥ್ವಾ, ಮಾನಸಿಂಗ್ ಪರ್ಮಾರ್ ಮತ್ತು ಜಿತೇಂದ್ರ ಮೇಘ್ ಜಿಭಾಯ್ ಕಂಜಾರಿಯಾ ಸ್ಪರ್ಧಿಸಲಿದ್ದಾರೆ. ಮಧ್ಯಪ್ರದೇಶದಿಂದ ತರುಣ್ ಚುಗ್ ಮತ್ತು ರಜನೀಶ್ ಅಗರ್ವಾಲ್ ಹಾಗೂ ಮಣಿಪುರದಿಂದ ಎ. ಶಾರದಾ ದೇವಿ ಅವರಿಗೆ ಟಿಕೆಟ್ ನೀಡಲಾಗಿದೆ.

ರಾಜಸ್ಥಾನ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರಾದ ಸತೀಶ್ ಪೂನಿಯಾ ಅವರಿಗೆ ರಾಜಸ್ಥಾನದಿಂದ ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ನೀಡಲಾಗಿದೆ. ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಅವರಿಗೆ ಈಗ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿ ನೀಡಲಾಗುತ್ತಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ತರುಣ್ ಚುಗ್ ಅವರನ್ನು ಮಧ್ಯಪ್ರದೇಶದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ‘ಕೈ’ನಲ್ಲಿ ಭಾರಿ ಪೈಪೋಟಿ: ಮುಂಚೂಣಿಯಲ್ಲಿವೆ ಕೆಲ ನಾಯಕರ ಹೆಸರು

ಇವರೊಂದಿಗೆ ವಿವಿಧ ರಾಜ್ಯಗಳ ಒಟ್ಟು 11 ಜನ ನಾಯಕರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ರಾಜ್ಯವಾರು ಸಮೀಕರಣ ಮತ್ತು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಆಯ್ಕೆ ಮಾಡಲಾಗಿದೆ. ವಿವಿಧ ರಾಜ್ಯಗಳಲ್ಲಿ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಈ ಬಿಜೆಪಿ ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ. ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಮತ್ತು ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಅನುಕೂಲ ಮಾಡಿಕೊಳ್ಳಲು ಬಿಜೆಪಿ ಈ ತಂತ್ರ ರೂಪಿಸಿದೆ. ಪ್ರಾದೇಶಿಕ ನಾಯಕರಿಗೆ ರಾಷ್ಟ್ರ ಮಟ್ಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ.

ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ: ರಾಜ್ಯಸಭಾ ಚುನಾವಣೆಗೆ ಎಐಸಿಸಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಅವರ ಹೆಸರು ಪ್ರಕಟಿಸಲಾಗಿದೆ. ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ, ಜಾರ್ಖಂಡ್​ನಿಂದ ಪ್ರಣವ್ ಝಾ ಹೆಸರು ಪ್ರಕಟಿಸಲಾಗಿದೆ.

ಕಳೆದ ತಿಂಗಳು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ದಿಗ್ವಿಜಯ್ ಸಿಂಗ್ ಸೇರಿದಂತೆ ಹಾಲಿ ಸದಸ್ಯರ ನಿವೃತ್ತಿಯಿಂದಾಗಿ ಖಾಲಿ ಇರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿತ್ತು. ಜೂನ್ 21ರಿಂದ ಜುಲೈ 19ರ ನಡುವೆ ವಿವಿಧ ದಿನಾಂಕಗಳಲ್ಲಿ ಸದಸ್ಯರು ನಿವೃತ್ತರಾಗುತ್ತಿರುವ 10 ರಾಜ್ಯಗಳಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

ರಾಜ್ಯಸಭಾ ಚುನಾವಣೆಯು ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4 ಸ್ಥಾನಗಳಿಗೆ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ, ಜಾರ್ಖಂಡ್‌ನಲ್ಲಿ 2 ಸ್ಥಾನಗಳಿಗೆ ಹಾಗೂ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Thu, 4 June 26

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA