Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿಗೆ ಬೇಸತ್ತ ಬಿಜೆಪಿ..: ಮೇ 5ರಂದು ದೇಶಾದ್ಯಂತ ಧರಣಿ ನಡೆಸಲು ನಿರ್ಧಾರ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆದ್ದಿದೆ. ಆದರೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ.

ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿಗೆ ಬೇಸತ್ತ ಬಿಜೆಪಿ..: ಮೇ 5ರಂದು ದೇಶಾದ್ಯಂತ ಧರಣಿ ನಡೆಸಲು ನಿರ್ಧಾರ
ಬಿಜೆಪಿ ಬಾವುಟ
Follow us
Lakshmi Hegde
|

Updated on: May 03, 2021 | 11:24 PM

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಹೊರಬಿದ್ದು, ಟಿಎಂಸಿ ಸ್ಪಷ್ಟ ಬಹುಮತದಿಂದ ಮುನ್ನಡೆ ಸಾಧಿಸಿದ ಬಳಿಕ ಅನೇಕ ಕಡೆ ಹಿಂಸಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿ, ಪಕ್ಷದ ಕಾರ್ಯಕರ್ತರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ನಿನ್ನೆ ಆರೋಪ ಮಾಡಿದ್ದಾರೆ. ಟಿಎಂಸಿ ಕಾರ್ಯಕರ್ತರು ಹೀಗೆ ಚುನಾವಣಾ ಫಲಿತಾಂಶದ ಬಳಿಕ ಹಿಂಸಾಚಾರ ನಡೆಸಿದ್ದನ್ನು ವಿರೋಧಿಸಿ ಇದೀಗ ಬಿಜೆಪಿ ಮೇ 5ರಂದು ರಾಷ್ಟ್ರಾದ್ಯಂತ ಧರಣಿ ನಡೆಸಲು ನಿರ್ಧರಿಸಿದೆ.

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಧರಣಿ ನಡೆಸಲಾಗುವುದು. ಆದರೆ ನಾವು ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸುತ್ತೇವೆ. ಎಲ್ಲ ನಿಯಮ, ಶಿಷ್ಟಾಚಾರಗಳನ್ನೂ ಪಾಲಿಸಿಯೇ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ತಿಳಿಸಿದೆ. ಅಲ್ಲದೆ, ಮೇ 4 ಮತ್ತು 5ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಹಲ್ಲೆಗೊಳಗಾದ, ಮನೆ ಕಳೆದುಕೊಂಡ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಅವರ ಕುಟುಂಬದವರ ಜತೆ ಮಾತುಕತೆ ನಡೆಸಲಿದ್ದಾರೆ. ಈ ಬಗ್ಗೆ ಬಿಜೆಪಿ ಪಕ್ಷದ ಟ್ವಿಟರ್​​ನಲ್ಲಿ ತಿಳಿಸಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆದ್ದಿದೆ. ಆದರೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಈ ಸಿಟ್ಟಿನಲ್ಲಿ ಟಿಎಂಸಿ ಗೂಂಡಾಗಳು ಸುವೇಂದು ಅಧಿಕಾರಿ ಅವರ ಬೆಂಗಾವಲು ವಾಹನದ ಮೇಲೆ, ಬೇರೆ ಕೆಲವು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ಬಿಜೆಪಿಯ ಆರೋಪ.

ಇದನ್ನೂ ಓದಿ: ‘ಮೇ ತಿಂಗಳಲ್ಲಿ ನಿಗದಿಯಾಗಿದ್ದ ಯಾವುದೇ ಆಫ್​ಲೈನ್ ಪರೀಕ್ಷೆಗಳನ್ನೂ ನಡೆಸಬೇಡಿ’-ಶಿಕ್ಷಣಸಂಸ್ಥೆಗಳಿಗೆ ಶಿಕ್ಷಣ ಇಲಾಖೆಯಿಂದ ಸೂಚನೆ

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ