AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಎಲ್ಲಾ ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ

ಬ್ಯಾನರ್ಜಿಯವರ ಘೋಷಣೆಗಳು ಮತ್ತು ಬೆಂಬಲದ ಸಂದೇಶವನ್ನು ಎಎಪಿ ಸಂಸದ ರಾಘವ್ ಚಡ್ಡಾ ಅವರು ಪ್ರತಿಧ್ವನಿಸಿದ್ದು,ರು 2014 ರಿಂದ ತನಿಖಾ ಸಂಸ್ಥೆಗಳ ಶೇಕಡಾ 95 ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿವೆ. ಈಗ, ಇಂಡಿಯಾ ರಚನೆಯ ನಂತರ, ಬಿಜೆಪಿ ದಂಗಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಎಲ್ಲಾ ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Nov 01, 2023 | 7:14 PM

ದೆಹಲಿ ನವೆಂಬರ್ 01: ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆ ಮತ್ತು ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್‌ರಿಂದ (Arvind Kejriwal) ಆರಂಭಗೊಂಡು ಹಿರಿಯ ವಿರೋಧ ಪಕ್ಷದ ನಾಯಕರನ್ನು ಬಂಧಿಸಲು ಆಡಳಿತ ಪಕ್ಷ ಸಂಚು ನಡೆಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಬುಧವಾರ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುನ್ನ ಬಿಜೆಪಿಯವರು ಎಲ್ಲಾ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆ. ಚುನಾವಣೆಗೆ ಮುನ್ನವೇ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಬಂಧಿಸಲು ಅವರು ಯೋಜನೆ ರೂಪಿಸುತ್ತಿದ್ದಾರೆ, ಆದ್ದರಿಂದ ಅವರು ಖಾಲಿ ದೇಶದಲ್ಲಿ ಅವರವರೇ ಮತಚಲಾಯಿಸಬಹುದು,ಅದಕ್ಕಾಗಿ ಅವರು ಸಂಚು ರೂಪಿಸುತ್ತಿದ್ದಾರೆ ಎಂದು ಕೋಲ್ಕತ್ತಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮಮತಾ ಹೇಳಿದ್ದಾರೆ.

ದೆಹಲಿಯಲ್ಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಗುರುವಾರ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಕೇಂದ್ರ ಹಣಕಾಸು ಸಚಿವಾಲಯಕ್ಕೆ ವರದಿ ಸಲ್ಲಿಸಿರುವ ಇಡಿ, ಈಗಾಗಲೇ ದೆಹಲಿ ಉಪಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ ಮತ್ತು ಎಎಪಿ ₹ 338 ಕೋಟಿ ಮೌಲ್ಯದ ಕಿಕ್‌ಬ್ಯಾಕ್ ಆರೋಪಿಸಿದೆ.

ಮುಖ್ಯಮಂತ್ರಿಯನ್ನು “ನವೆಂಬರ್ 2 ರಂದು ಬಂಧಿಸಿ ಜೈಲಿಗೆ ಹಾಕುತ್ತಾರೆ” ಎಂದು “ಮೂಲಗಳನ್ನು” ಉಲ್ಲೇಖಿಸಿ ಅತಿಶಿ ಹೇಳಿದ್ದಾರೆ. ಪಡಿತರ ವಿತರಣೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಗಾಳದ ಸಚಿವೆ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಕಳೆದ ವಾರ ಬಂಧಿಸಲಾಗಿತ್ತು. ಏತನ್ಮಧ್ಯೆ, ತೃಣಮೂಲ ನಾಯಕ ಬಿಜೆಪಿಯು ವಿರೋಧ ಪಕ್ಷದ ನಾಯಕರ ಫೋನ್‌ಗಳನ್ನು ಹ್ಯಾಕ್ ಮಾಡುತ್ತಿದೆ ಎಂದು ಆರೋಪಿಸಿದರು; ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಸಂಸದರು ತಮ್ಮಮೊಬೈಲ್ ಡಿವೈಸಿ ಪ್ರವೇಶಿಸಲು ಪ್ರಯತ್ನಿಸುತ್ತಿರುವ “ರಾಜ್ಯ-ಪ್ರಾಯೋಜಿತ ದಾಳಿಕೋರರ” ಎಚ್ಚರಿಕೆಯ ಸಂದೇಶಗಳನ್ನು ಆಪಲ್‌ನಿಂದ ಸ್ವೀಕರಿಸಿದ್ದೇವೆ ಎಂದಿದ್ದಾರೆ.

ಬ್ಯಾನರ್ಜಿಯವರ ಘೋಷಣೆಗಳು ಮತ್ತು ಬೆಂಬಲದ ಸಂದೇಶವನ್ನು ಎಎಪಿ ಸಂಸದ ರಾಘವ್ ಚಡ್ಡಾ ಅವರು ಪ್ರತಿಧ್ವನಿಸಿದ್ದು,ರು 2014 ರಿಂದ ತನಿಖಾ ಸಂಸ್ಥೆಗಳ ಶೇಕಡಾ 95 ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿವೆ. ಈಗ, ಇಂಡಿಯಾ ರಚನೆಯ ನಂತರ, ಬಿಜೆಪಿ ದಂಗಾಗಿದೆ. ಅವರು ಮೈತ್ರಿಯಿಂದ ಉನ್ನತ ನಾಯಕರನ್ನು ಗುರಿಯಾಗಿಸಲು ಯೋಜನೆಯನ್ನು ರೂಪಿಸಿದ್ದಾರೆ ಎಂದು ನಾವು ಮೂಲಗಳಿಂದ ತಿಳಿದುಕೊಂಡಿದ್ದೇವೆ. ಮೊದಲ ಬಂಧನ ಮುಖ್ಯಮಂತ್ರಿ ಕೇಜ್ರಿವಾಲ್” ಎಂದು ಅವರು ಹೇಳಿದರು.

ಎಎಪಿ ನಾಯಕರ “ಪಟ್ಟಿ”ಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ – ಲೋಕಸಭೆ ಸಂಸದ ಅಭಿಷೇಕ್ ಬ್ಯಾನರ್ಜಿ ಕೂಡ ಸೇರಿದ್ದಾರೆ, ಅವರು ಕಲ್ಲಿದ್ದಲು ಹಗರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಇಡಿ ಮತ್ತು ಸಿಬಿಐನಿಂದ ತನಿಖೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್​ರಿಂದ ರಾಜಶ್ಯಾಮಲ ಯಾಗ: ಪುನರಾವರ್ತನೆಯಾಗಲಿದೆಯಾ 2018ರ ಫಲಿತಾಂಶ?

ಎಎಪಿ ಮತ್ತು ತೃಣಮೂಲ ಎರಡೂ ಇಂಡಿಯಾ ಮೈ ಭಾಗವಾಗಿದೆ – ಈ ವರ್ಷ ಮತ್ತು ಮುಂದಿನ ಚುನಾವಣೆಗಳಿಗೆ ಮುಂಚಿತವಾಗಿ ವಿರೋಧವನ್ನು ಒಗ್ಗೂಡಿಸಲು ಜುಲೈನಲ್ಲಿ 28 ಸದಸ್ಯರ ಬಣವನ್ನು ರಚಿಸಲಾಗಿದೆ. ಶ್ರೀಮತಿ ಬ್ಯಾನರ್ಜಿ ಅಥವಾ ಶ್ರೀ ಚಾಡಾ ಅವರ ಹೇಳಿಕೆಗಳಿಗೆ ಬಿಜೆಪಿ ಇಲ್ಲಿಯವರೆಗೆ ಪ್ರತಿಕ್ರಿಯಿಸಿಲ್ಲ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷವು ಕೇಂದ್ರ ಸರ್ಕಾರಕ್ಕೆ ವರದಿ ಮಾಡುವ ತನಿಖಾ ಸಂಸ್ಥೆಗಳನ್ನು – ED ಮತ್ತು CBI ನಂತಹ – ಪ್ರತಿಸ್ಪರ್ಧಿ ನಾಯಕರನ್ನು ಗುರಿಯಾಗಿಸಲು, ವಿಶೇಷವಾಗಿ ಚುನಾವಣೆಗೆ ಮುಂಚಿತವಾಗಿ ಬಳಸುತ್ತಿದೆ ಎಂದು ಪ್ರತಿಪಕ್ಷಗಳು ವಾಡಿಕೆಯಂತೆ ಆರೋಪಿಸುತ್ತಿವೆ. ಈ ಆರೋಪಗಳನ್ನು ಸರ್ಕಾರ ದೃಢವಾಗಿ ನಿರಾಕರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ