AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳ ಕುರಿತು ‘ತಪ್ಪು ಕಲ್ಪನೆ’ ದೂರ ಮಾಡಲು ಯತ್ನ: ರೈತ ಸಮುದಾಯದ ಮನವೊಲಿಸಲು ಹೊರಟ ಬಿಜೆಪಿ

ದೇಶದ ಕೃಷಿಕರು ಮತ್ತು ನಾಗರಿಕರಲ್ಲಿ ನೂತನ ಕೃಷಿ ಕಾಯ್ದೆಗಳ ಪರ ಒಲವು ಮೂಡಿಸುವ ಯತ್ನಕ್ಕೆ ಬಿಜೆಪಿ ಮುಂದಾಗುತ್ತಿರುವುದು ನಿಚ್ಚಳವಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನಲ್ಲಿ ಕೃಷಿಕರ ಜೊತೆ ಹಮ್ಮಿಕೊಂಡಿರುವ ಸಂವಾದ ಈ ಪ್ರಯತ್ನಕ್ಕೆ ಪೂರ್ವಭಾವಿಯಂತೆ ತೋರುತ್ತಿದೆ.

ಕೃಷಿ ಕಾಯ್ದೆಗಳ ಕುರಿತು ‘ತಪ್ಪು ಕಲ್ಪನೆ’ ದೂರ ಮಾಡಲು ಯತ್ನ: ರೈತ ಸಮುದಾಯದ ಮನವೊಲಿಸಲು ಹೊರಟ ಬಿಜೆಪಿ
ಪ್ರತಿಭಟನಾ ನಿರತ ರೈತರು (ಪಿಟಿಐ ಚಿತ್ರ)
guruganesh bhat
| Updated By: ಸಾಧು ಶ್ರೀನಾಥ್​|

Updated on: Dec 15, 2020 | 12:38 PM

Share

ದೆಹಲಿ: ದೇಶದ ಕೃಷಿಕರು ಮತ್ತು ನಾಗರಿಕರಲ್ಲಿ ನೂತನ ಕೃಷಿ ಕಾಯ್ದೆಗಳ ಪರ ಒಲವು ಮೂಡಿಸುವ ಯತ್ನಕ್ಕೆ ಬಿಜೆಪಿ ಮುಂದಾಗುತ್ತಿರುವುದು ನಿಚ್ಚಳವಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್​ನಲ್ಲಿ ಕೃಷಿಕರ ಜೊತೆ ಹಮ್ಮಿಕೊಂಡಿರುವ ಸಂವಾದ ಈ ಪ್ರಯತ್ನಕ್ಕೆ ಪೂರ್ವಭಾವಿಯಂತೆ ತೋರುತ್ತಿದೆ. ಅದರಲ್ಲೂ 5000 ಸಿಖ್ ಕುಟುಂಬಗಳು ನೆಲೆಸಿರುವ ಕಚ್​ ಪ್ರಾಂತ್ಯದಲ್ಲಿ ಮೋದಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇಂದಿನ ಕಾರ್ಯಕ್ರಮ ಪಂಜಾಬ್ ರೈತರ ಮನವೊಲಿಕೆಯ ಪ್ರಯತ್ನ ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಮಧ್ಯಪ್ರದೇಶ ಬಿಜೆಪಿ ಘಟಕದಿಂದಲೂ ಕೃಷಿಕರ ಸಭೆ ದೆಹಲಿ ಚಲೋ ಹೀಗೇ ಮುಂದುವರೆದರೆ ದೇಶದ ರೈತರಲ್ಲಿ ಬಿಜೆಪಿ ವಿರೋಧ ಭಾವನೆ ಬಲಗೊಳ್ಳಬಹುದು ಎಂಬ ಸೂಕ್ಷ್ಮ ಭಯ ಬಿಜೆಪಿಯನ್ನು ಆವರಿಸಿರುವುದು ಖಚಿತ. ಇದೇ ಕಾರಣಕ್ಕೆ ನೂತನ ಕೃಷಿ ಕಾಯ್ದೆಯ ಕುರಿತು ರೈತರನ್ನು ಹಾದಿ ತಪ್ಪಿಸಲಾಗಿದೆ ಎಂದು ಬಿಜೆಪಿ ವಾದಿಸುತ್ತಲೇ ಇದೆ. ಇದೀಗ, ಮಧ್ಯ ಪ್ರದೇಶದ ಬಿಜೆಪಿ ಘಟಕ, ರಾಜ್ಯದ ರೈತ ಸಮುದಾಯದ ಜೊತೆ ಸಭೆಗಳನ್ನು ಆಯೋಜಿಸಿದೆ. ನೂತನ ಕೃಷಿ ಕಾಯ್ದೆಗಳ ಕುರಿತು ‘ತಪ್ಪು ಕಲ್ಪನೆ’ಯನ್ನು ಹೋಗಲಾಡಿಸುವ ಯತ್ನದ ಒಂದು ಭಾಗವೆಂದು ಬಿಜೆಪಿ ಈ ಸಭೆಗಳನ್ನು ವ್ಯಾಖ್ಯಾನಿಸಿದೆ. ಮತ್ತು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಮತ್ತು ಬಿಜೆಪಿ ಅಧ್ಯಕ್ಷ ವಿ ಡಿ ಶರ್ಮಾ ಸಭೆಯಲ್ಲಿ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪಂಜಾಬ್​ ಬಿಜೆಪಿ ಘಟಕದ ಮೇಲೂ ಈ ಕುರಿತು ಒತ್ತಡ ಬೀಳುವ ಸಾಧ್ಯತೆಗಳಿವೆ. ಈಗಾಗಲೇ ಶಿರೋಮಣಿ ಅಕಾಲಿದಳದಿಂದದಿಂದ ದೂರವಾಗಿರುವ ಬಿಜೆಪಿ ಪಂಜಾಬ್​ನಲ್ಲಿ ಕಷ್ಟದ ದಿನಗಳನ್ನು ಎದುರಿಸಬಹುದು. ಪಂಜಾಬ್​ನಲ್ಲೂ ರೈತ ಸಮುದಾಯದ ಜೊತೆಗೆ ಸಂವಾದ ನಡೆಸುವ ಕುರಿತು ರಾಜ್ಯ ಘಟಕ ನಿರ್ಧರಿಸಲಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಿತರ ರಾಜ್ಯಗಳಲ್ಲೂ ರೈತ ಸಮುದಾಯದ ಜೊತೆ ಸಭೆಗಳನ್ನು ಆಯೋಜಿಸುವ ಸಾಧ್ಯತೆ ಸ್ಪಷ್ಟವಾಗುತ್ತಿದೆ. ಜೊತೆಗೆ, ಈಗಾಗಲೇ ನೂತನ ಕೃಷಿ ಕಾಯ್ದೆಗಳ ಪರ ಇರುವವರ ಬೆಂಬಲವನ್ನು ಬಲಪಡಿಸಿಕೊಳ್ಳುವ ಉದ್ದೇಶವನ್ನೂ ಹೊಂದಿದೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್