ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್

|

Updated on: Mar 03, 2024 | 2:48 PM

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಸ್ಪರ್ಧಿಸುವುದಿಲ್ಲ ಎಂದು ಭೋಜ್‌ಪುರಿ ನಟ ಮತ್ತು ಹಿನ್ನೆಲೆ ಗಾಯಕ ಪವನ್ ಸಿಂಗ್ ಭಾನುವಾರ ಘೋಷಿಸಿದ್ದಾರೆ. ಬಿಜೆಪಿ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ. ಆದಾಗ್ಯೂ, ಅವರು ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಿಲ್ಲ.

ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ 24 ಗಂಟೆಗಳಲ್ಲೇ ಚುನಾವಣಾ ಕಣದಿಂದ ಹಿಂದೆ ಸರಿದ ಪವನ್​ ಸಿಂಗ್
ಪವನ್​ ಸಿಂಗ್
Follow us on

ಲೋಕಸಭೆ ಚುನಾವಣೆ(Lok Sabha Election)ಗೆ ಬಿಜೆಪಿ 195 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ (ಮಾರ್ಚ್ 2) ಸಂಜೆ ಬಿಡುಗಡೆ ಮಾಡಿದೆ . ಇದರಲ್ಲಿ ಭೋಜ್‌ಪುರಿ ಸೂಪರ್‌ಸ್ಟಾರ್ ಪವನ್ ಸಿಂಗ್‌(Pawan Singh)ಗೂ ಟಿಕೆಟ್ ನೀಡಲಾಗಿದೆ. ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಪವನ್ ಸಿಂಗ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ. ಇದೀಗ ಟಿಕೆಟ್ ಸಿಕ್ಕ 24 ಗಂಟೆಗಳಲ್ಲಿ ಪವನ್ ಸಿಂಗ್ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಎಕ್ಸ್​ನಲ್ಲಿ  ಮಾಹಿತಿ ನೀಡಿದ್ದಾರೆ.

ಭೋಜ್‌ಪುರಿ ಸೂಪರ್‌ಸ್ಟಾರ್ ಭಾನುವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಟ್ವೀಟ್ ಮಾಡಿರುವ ಅವರು, ಭಾರತೀಯ ಜನತಾ ಪಕ್ಷದ ಉನ್ನತ ನಾಯಕತ್ವಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಪಕ್ಷವು ನನ್ನನ್ನು ನಂಬಿ ಅಸನ್ಸೋಲ್‌ನಿಂದ ಅಭ್ಯರ್ಥಿ ಎಂದು ಘೋಷಿಸಿತು, ಆದರೆ ಕಾರಣಾಂತರಗಳಿಂದ ನಾನು ಅಸನ್ಸೋಲ್‌ನಿಂದ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಈ ಟ್ವೀಟ್‌ನಲ್ಲಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಿ ಅವರನ್ನು ಟ್ಯಾಗ್ ಮಾಡಿದ್ದಾರೆ.

ವಾಸ್ತವವಾಗಿ, ಅಸನ್ಸೋಲ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪವನ್ ಸಿಂಗ್ ಹೆಸರನ್ನು ಘೋಷಿಸಿದ ತಕ್ಷಣ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅವರನ್ನು ಮೂಲೆಗುಂಪು ಮಾಡಲು ಪ್ರಾರಂಭಿಸಿತು. ಪವನ್ ಸಿಂಗ್ ಅವರು ಬಂಗಾಳಿ ಮಹಿಳೆಯರ ಬಗ್ಗೆ ಹಾಡಿದ ಹಾಡುಗಳಿಗೆ ಟಿಎಂಸಿ ಅವರನ್ನು ಗುರಿಯಾಗಿಸಿದೆ. ಪವನ್ ಸಿಂಗ್ ಅವರ ಹಾಡುಗಳ ಪೋಸ್ಟರ್‌ಗಳನ್ನು ಹಂಚಿಕೊಳ್ಳುವಾಗ, ಟಿಎಂಸಿ ನಾಯಕರು ಬಂಗಾಳಿ ಹಾಡುಗಳು, ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಮಾನಿಸಿದ ವ್ಯಕ್ತಿಯನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಹೇಳಿದ್ದರು.

ಪವನ್ ಸಿಂಗ್ ಟ್ವೀಟ್​ 

ಕೆಲವು ಟಿಎಂಸಿ ನಾಯಕರು ಭೋಜ್‌ಪುರಿ ಗಾಯಕನ ಕೆಲವು ಹಾಡುಗಳ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದರಲ್ಲಿ ಅವರು ಸ್ಪಷ್ಟವಾಗಿ ಮಹಿಳೆಯರನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಸೇರಿದಂತೆ ಹಲವು ನಾಯಕರು ಪವನ್ ಸಿಂಗ್ ಅವರ ಉಮೇದುವಾರಿಕೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದರು.

ಮತ್ತಷ್ಟು ಓದಿ: ಲೋಕಸಭಾ ಟಿಕೆಟ್ ನಿರಾಕರಣೆ ಬೆನ್ನಲ್ಲೇ ಸಕ್ರಿಯ ರಾಜಕಾರಣದಿಂದ ದೂರವಾದ ಮಾಜಿ ಸಚಿವ ಡಾ. ಹರ್ಷವರ್ಧನ್

ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ ಚುನಾವಣೆ ಘೋಷಣೆಯಾಗುವ ಮೊದಲೇ ಬಿಜೆಪಿ ಒಂದು ಸ್ಥಾನವನ್ನು ಬಿಟ್ಟುಕೊಟ್ಟಿದೆ ಎಂದು ಟಿಎಂಸಿ ನಾಯಕ ಹೇಳಿದ್ದಾರೆ. ಪವನ್ ಸಿಂಗ್ ಚುನಾವಣಾ ಕ್ಷೇತ್ರದಿಂದ ಹಿಂದೆ ಸರಿದಿರುವ ಕುರಿತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಜನರ ಅದಮ್ಯ ಚೇತನ ಮತ್ತು ಶಕ್ತಿ ಎಂದು ಅವರು ಹೇಳಿದರು. ಅದೇ ರೀತಿ, ಡೆರೆಕ್ ಒ’ಬ್ರೇನ್ ಆಟ ಕೂಡಪ್ರಾರಂಭವಾಗುವ ಮೊದಲೇ ಮುಗಿದಿದೆ ಎಂದು ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ