AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶ ಬಂದ್​.. ಆದ್ರೆ ಪ. ಬಂಗಾಳದಲ್ಲಿ ಬಿಜೆಪಿಯಿಂದಲೇ 12 ತಾಸು ಬಂದ್​ಗೆ ಕರೆ

ಕೋಲ್ಕತ್ತಾ: ಬಿಜೆಪಿ ಕೇಂದ್ರ ಸರ್ಕಾರ ಹೊರತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕರೆ ನೀಡಿರುವ ಭಾರತ್​ ಬಂದ್​ಗೆ ಅಪಾರ ಬೆಂಬಲ ವ್ಯಕ್ತವಾಗಿದೆ. 14ಕ್ಕೂ ಹೆಚ್ಚು ರಾಜಕೀಯ ಪಕ್ಷಗಳೂ ತಮ್ಮ ಬೆಂಬಲ ಇದೆ ಎಂದು ಹೇಳಿವೆ. ಇಡೀ ದೇಶಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಬಂದ್ ಮಾಡಲಾಗುತ್ತಿದ್ದರೆ, ಇತ್ತ ಪಶ್ಚಿಮ ಬಂಗಾಳದ ಉತ್ತರದಲ್ಲಿ ಬಿಜೆಪಿ ಅಲ್ಲಿನ ಟಿಎಂಸಿ ಸರ್ಕಾರದ ವಿರುದ್ಧ 12 ತಾಸುಗಳ ಬಂದ್​ ಕರೆದಿದೆ. ಪಶ್ಚಿಮ ಬಂಗಾಳ ಸರ್ಕಾರದ ದುರಾಡಳಿತವನ್ನು ಖಂಡಿಸಿ ನಿನ್ನೆ ಬಿಜೆಪಿ ಮುಖಂಡರು ಯುವಮೋರ್ಚಾ ಅಧ್ಯಕ್ಷ, […]

ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶ ಬಂದ್​.. ಆದ್ರೆ ಪ. ಬಂಗಾಳದಲ್ಲಿ ಬಿಜೆಪಿಯಿಂದಲೇ 12 ತಾಸು ಬಂದ್​ಗೆ ಕರೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರತಿಭಟನೆಯ ಚಿತ್ರ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 08, 2020 | 10:41 AM

Share

ಕೋಲ್ಕತ್ತಾ: ಬಿಜೆಪಿ ಕೇಂದ್ರ ಸರ್ಕಾರ ಹೊರತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕರೆ ನೀಡಿರುವ ಭಾರತ್​ ಬಂದ್​ಗೆ ಅಪಾರ ಬೆಂಬಲ ವ್ಯಕ್ತವಾಗಿದೆ. 14ಕ್ಕೂ ಹೆಚ್ಚು ರಾಜಕೀಯ ಪಕ್ಷಗಳೂ ತಮ್ಮ ಬೆಂಬಲ ಇದೆ ಎಂದು ಹೇಳಿವೆ. ಇಡೀ ದೇಶಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಬಂದ್ ಮಾಡಲಾಗುತ್ತಿದ್ದರೆ, ಇತ್ತ ಪಶ್ಚಿಮ ಬಂಗಾಳದ ಉತ್ತರದಲ್ಲಿ ಬಿಜೆಪಿ ಅಲ್ಲಿನ ಟಿಎಂಸಿ ಸರ್ಕಾರದ ವಿರುದ್ಧ 12 ತಾಸುಗಳ ಬಂದ್​ ಕರೆದಿದೆ.

ಪಶ್ಚಿಮ ಬಂಗಾಳ ಸರ್ಕಾರದ ದುರಾಡಳಿತವನ್ನು ಖಂಡಿಸಿ ನಿನ್ನೆ ಬಿಜೆಪಿ ಮುಖಂಡರು ಯುವಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಪ್ರತಿಭಟನಾ ಱಲಿ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು, ಜಲಫಿರಂಗಿಗಳ ಪ್ರಯೋಗ ಮಾಡಿದ್ದರು. ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ತೀವ್ರ ಘರ್ಷಣೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದ. ಹಲವು ಕಾರ್ಯಕರ್ತರು, ಪೊಲೀಸರು ಗಾಯಗೊಂಡಿದ್ದಾರೆ. ಈ ಎಲ್ಲ ಅವಘಡ, ಸಾವಿಗೆ ಪೊಲೀಸರೇ ಕಾರಣ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದಾರೆ.

ಉಲೇನ್ ರಾಯ್​ಗೆ ಪೊಲೀಸರು ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸತ್ತಿದ್ದಾಗಿ ಬಿಜೆಪಿ ಆರೋಪ ಮಾಡುತ್ತಿದ್ದರೆ, ಪೊಲೀಸರು ನಾವು ಲಾಠಿ ಚಾರ್ಜ್​ ಮಾಡಿಯೇ ಇಲ್ಲ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ತನ್ನ ಪಟ್ಟು ಬಿಡುತ್ತಿಲ್ಲ. ಪೊಲೀಸರು ಲಾ ಆ್ಯಂಡ್ ಆರ್ಡರ್​ ನಿಯಮ ಮುರಿದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಪೊಲೀಸರನ್ನು ಬಳಸಿಕೊಂಡು ಬಲವಂತವಾಗಿ ನಮ್ಮನ್ನು ಹತ್ತಿಕ್ಕುತ್ತಿದೆ. ಬಿಜೆಪಿಯ ಬೆಳವಣಿಗೆ ಸಹಿಸಲಾಗುತ್ತಿಲ್ಲ. ಪೊಲೀಸ್​ ದೌರ್ಜನ್ಯದಿಂದ ಕಾರ್ಯಕರ್ತ ಮೃತಪಟ್ಟಿದ್ದಾನೆಂದು ಆರೋಪಿಸಿ, ಇಂದು ಉತ್ತರ ಬಂಗಾಳದಲ್ಲಿ ಬಿಜೆಪಿಯೇ 12 ತಾಸುಗಳ ಬಂದ್​ ನಡೆಸುತ್ತಿದೆ.

ಬಿಜೆಪಿ ಕಾರ್ಯಕರ್ತ ಸಾವು: ಪೊಲೀಸರದೇ ತಪ್ಪು ಎಂದ ತೇಜಸ್ವಿ ಸೂರ್ಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ