AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶ ಬಂದ್​.. ಆದ್ರೆ ಪ. ಬಂಗಾಳದಲ್ಲಿ ಬಿಜೆಪಿಯಿಂದಲೇ 12 ತಾಸು ಬಂದ್​ಗೆ ಕರೆ

ಕೋಲ್ಕತ್ತಾ: ಬಿಜೆಪಿ ಕೇಂದ್ರ ಸರ್ಕಾರ ಹೊರತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕರೆ ನೀಡಿರುವ ಭಾರತ್​ ಬಂದ್​ಗೆ ಅಪಾರ ಬೆಂಬಲ ವ್ಯಕ್ತವಾಗಿದೆ. 14ಕ್ಕೂ ಹೆಚ್ಚು ರಾಜಕೀಯ ಪಕ್ಷಗಳೂ ತಮ್ಮ ಬೆಂಬಲ ಇದೆ ಎಂದು ಹೇಳಿವೆ. ಇಡೀ ದೇಶಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಬಂದ್ ಮಾಡಲಾಗುತ್ತಿದ್ದರೆ, ಇತ್ತ ಪಶ್ಚಿಮ ಬಂಗಾಳದ ಉತ್ತರದಲ್ಲಿ ಬಿಜೆಪಿ ಅಲ್ಲಿನ ಟಿಎಂಸಿ ಸರ್ಕಾರದ ವಿರುದ್ಧ 12 ತಾಸುಗಳ ಬಂದ್​ ಕರೆದಿದೆ. ಪಶ್ಚಿಮ ಬಂಗಾಳ ಸರ್ಕಾರದ ದುರಾಡಳಿತವನ್ನು ಖಂಡಿಸಿ ನಿನ್ನೆ ಬಿಜೆಪಿ ಮುಖಂಡರು ಯುವಮೋರ್ಚಾ ಅಧ್ಯಕ್ಷ, […]

ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶ ಬಂದ್​.. ಆದ್ರೆ ಪ. ಬಂಗಾಳದಲ್ಲಿ ಬಿಜೆಪಿಯಿಂದಲೇ 12 ತಾಸು ಬಂದ್​ಗೆ ಕರೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರತಿಭಟನೆಯ ಚಿತ್ರ
Lakshmi Hegde
| Edited By: |

Updated on: Dec 08, 2020 | 10:41 AM

Share

ಕೋಲ್ಕತ್ತಾ: ಬಿಜೆಪಿ ಕೇಂದ್ರ ಸರ್ಕಾರ ಹೊರತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕರೆ ನೀಡಿರುವ ಭಾರತ್​ ಬಂದ್​ಗೆ ಅಪಾರ ಬೆಂಬಲ ವ್ಯಕ್ತವಾಗಿದೆ. 14ಕ್ಕೂ ಹೆಚ್ಚು ರಾಜಕೀಯ ಪಕ್ಷಗಳೂ ತಮ್ಮ ಬೆಂಬಲ ಇದೆ ಎಂದು ಹೇಳಿವೆ. ಇಡೀ ದೇಶಾದ್ಯಂತ ಬಿಜೆಪಿ ಸರ್ಕಾರದ ವಿರುದ್ಧ ಬಂದ್ ಮಾಡಲಾಗುತ್ತಿದ್ದರೆ, ಇತ್ತ ಪಶ್ಚಿಮ ಬಂಗಾಳದ ಉತ್ತರದಲ್ಲಿ ಬಿಜೆಪಿ ಅಲ್ಲಿನ ಟಿಎಂಸಿ ಸರ್ಕಾರದ ವಿರುದ್ಧ 12 ತಾಸುಗಳ ಬಂದ್​ ಕರೆದಿದೆ.

ಪಶ್ಚಿಮ ಬಂಗಾಳ ಸರ್ಕಾರದ ದುರಾಡಳಿತವನ್ನು ಖಂಡಿಸಿ ನಿನ್ನೆ ಬಿಜೆಪಿ ಮುಖಂಡರು ಯುವಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಉತ್ತರ ಬಂಗಾಳದ ಸಿಲಿಗುರಿಯಲ್ಲಿ ಪ್ರತಿಭಟನಾ ಱಲಿ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು, ಜಲಫಿರಂಗಿಗಳ ಪ್ರಯೋಗ ಮಾಡಿದ್ದರು. ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ತೀವ್ರ ಘರ್ಷಣೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದ. ಹಲವು ಕಾರ್ಯಕರ್ತರು, ಪೊಲೀಸರು ಗಾಯಗೊಂಡಿದ್ದಾರೆ. ಈ ಎಲ್ಲ ಅವಘಡ, ಸಾವಿಗೆ ಪೊಲೀಸರೇ ಕಾರಣ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದಾರೆ.

ಉಲೇನ್ ರಾಯ್​ಗೆ ಪೊಲೀಸರು ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸತ್ತಿದ್ದಾಗಿ ಬಿಜೆಪಿ ಆರೋಪ ಮಾಡುತ್ತಿದ್ದರೆ, ಪೊಲೀಸರು ನಾವು ಲಾಠಿ ಚಾರ್ಜ್​ ಮಾಡಿಯೇ ಇಲ್ಲ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ತನ್ನ ಪಟ್ಟು ಬಿಡುತ್ತಿಲ್ಲ. ಪೊಲೀಸರು ಲಾ ಆ್ಯಂಡ್ ಆರ್ಡರ್​ ನಿಯಮ ಮುರಿದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ಪೊಲೀಸರನ್ನು ಬಳಸಿಕೊಂಡು ಬಲವಂತವಾಗಿ ನಮ್ಮನ್ನು ಹತ್ತಿಕ್ಕುತ್ತಿದೆ. ಬಿಜೆಪಿಯ ಬೆಳವಣಿಗೆ ಸಹಿಸಲಾಗುತ್ತಿಲ್ಲ. ಪೊಲೀಸ್​ ದೌರ್ಜನ್ಯದಿಂದ ಕಾರ್ಯಕರ್ತ ಮೃತಪಟ್ಟಿದ್ದಾನೆಂದು ಆರೋಪಿಸಿ, ಇಂದು ಉತ್ತರ ಬಂಗಾಳದಲ್ಲಿ ಬಿಜೆಪಿಯೇ 12 ತಾಸುಗಳ ಬಂದ್​ ನಡೆಸುತ್ತಿದೆ.

ಬಿಜೆಪಿ ಕಾರ್ಯಕರ್ತ ಸಾವು: ಪೊಲೀಸರದೇ ತಪ್ಪು ಎಂದ ತೇಜಸ್ವಿ ಸೂರ್ಯ

Follow Us
Lakshmi Hegde
Lakshmi Hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ