AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on:Jun 01, 2023 | 9:30 AM

Share

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನ ಸಮರ್ಪಕ ಜಾರಿಗೆ ನಿರ್ಧಾರ ಮಾಡಲಾಗಿದೆ, ಈ ಮೂಲಕ ಲೋಕಾಸಭಾ ಚುನಾವಣೆಗೂ ಮುನ್ನ ರಾಜಕೀಯ ಆಡಳಿತದ ಮಾಡಲ್ ಸೃಷ್ಠಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಬಿಜೆಪಿಯ ಗುಜರಾತ್ , ಉತ್ತರ ಪ್ರದೇಶ್ ಮಾಡೆಲ್‌ಗೆ ಬದಲಾಗಿ, ಕರ್ನಾಟಕ ಮಾಡೆಲ್‌ ರಚನೆಗೆ ಚಿಂತನೆ ನಡೆದಿದೆ.

ಉತ್ತಮ ಆಡಳಿತ ಜೊತೆ ಜೊತೆಗೆ ಸಮಾಜಿಕ ನ್ಯಾಯದ ಪರಿಕಲ್ಪನೆಯೂ ಇದೆ, ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಪರ ಸರ್ಕಾರ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಮುಂದಾಗಿದೆ. ಗ್ಯಾರಂಟಿ ಯೋಜನೆ ಜಾರಿ ಮೂಲಕ ಹೊಸದೊಂದು ಮಾದರಿ ಸೃಷ್ಟಿ ಮಾಡಲಾಗಿದೆ, ಈ ಮೂಲಕ ದೇಶದ ಇತರೆ ರಾಜ್ಯಗಳಿಗೆ ಸಂದೇಶ ರವಾನೆಗೆ ಯತ್ನಿಸಲಾಗುತ್ತಿದೆ.

ಅಮೆರಿಕದ ಸಾಂತಾ ಕ್ಲಾರಾದ ಕ್ಯಾಲಿಫೋರ್ನಿಯಾ ವಿವಿ ಕ್ಯಾಂಪಸ್‌ನಲ್ಲಿ ನಡೆದ ಸಮಾರಂಭದಲ್ಲಿ ಸಭಿಕರೊಂದಿಗೆ ಸಂವಾದ ನಡೆಸಿದ ಗಾಂಧಿ, ಬಿಜೆಪಿಯಲ್ಲಿನ ದೌರ್ಬಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಒಬ್ಬ ರಾಜಕೀಯ ನಿಪುಣನಾಗಿ ನನಗೆ ಅವರ ದೌರ್ಬಲ್ಯ ಎದ್ದು ಕಾಣುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆಯಾದರೆ ಬಿಜೆಪಿಯನ್ನು ಸೋಲಿಸಬಹುದು ಎಂದರು.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಶುರು; ಡಿಕೆ ಶಿವಕುಮಾರ್ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ? ಇಲ್ಲಿದೆ ವಿವರ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು. ಜತೆಗೆ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ದೇಶಕ್ಕೆ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ. ಪ್ರತಿಪಕ್ಷಗಳ ಏಕತೆಯ ವಿಷಯದಲ್ಲಿ, ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.

ವ್ಯವಸ್ಥೆಗಳು ನೇರವಾಗಿ ಜನರನ್ನು ಸಂಪರ್ಕಿಸಬೇಕು ಎಂಬ ಕಾರಣಕ್ಕೆ ನಾವು ಭಾರತ್‌ ಜೋಡೋ ಯಾತ್ರೆಯನ್ನು ಆರಂಭಿಸಿದೆವು. ಕೆಲವು ವಿಷಯಗಳನ್ನು ರಾಜಕೀಯವಾಗಿ ಕಾರ್ಯರೂಪಕ್ಕೆ ತರುವುದು ಕಷ್ಟ. ಹೀಗಾಗಿ ದಕ್ಷಿಣದ ತುದಿಯಿಂದ ಉತ್ತರ ಭಾರತದವರೆಗೂ ಪಾದಯಾತ್ರೆ ನಡೆಸಿದೆವು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Thu, 1 June 23

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?