AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on:Jun 01, 2023 | 9:30 AM

Share

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನ ಸಮರ್ಪಕ ಜಾರಿಗೆ ನಿರ್ಧಾರ ಮಾಡಲಾಗಿದೆ, ಈ ಮೂಲಕ ಲೋಕಾಸಭಾ ಚುನಾವಣೆಗೂ ಮುನ್ನ ರಾಜಕೀಯ ಆಡಳಿತದ ಮಾಡಲ್ ಸೃಷ್ಠಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಬಿಜೆಪಿಯ ಗುಜರಾತ್ , ಉತ್ತರ ಪ್ರದೇಶ್ ಮಾಡೆಲ್‌ಗೆ ಬದಲಾಗಿ, ಕರ್ನಾಟಕ ಮಾಡೆಲ್‌ ರಚನೆಗೆ ಚಿಂತನೆ ನಡೆದಿದೆ.

ಉತ್ತಮ ಆಡಳಿತ ಜೊತೆ ಜೊತೆಗೆ ಸಮಾಜಿಕ ನ್ಯಾಯದ ಪರಿಕಲ್ಪನೆಯೂ ಇದೆ, ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಪರ ಸರ್ಕಾರ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಮುಂದಾಗಿದೆ. ಗ್ಯಾರಂಟಿ ಯೋಜನೆ ಜಾರಿ ಮೂಲಕ ಹೊಸದೊಂದು ಮಾದರಿ ಸೃಷ್ಟಿ ಮಾಡಲಾಗಿದೆ, ಈ ಮೂಲಕ ದೇಶದ ಇತರೆ ರಾಜ್ಯಗಳಿಗೆ ಸಂದೇಶ ರವಾನೆಗೆ ಯತ್ನಿಸಲಾಗುತ್ತಿದೆ.

ಅಮೆರಿಕದ ಸಾಂತಾ ಕ್ಲಾರಾದ ಕ್ಯಾಲಿಫೋರ್ನಿಯಾ ವಿವಿ ಕ್ಯಾಂಪಸ್‌ನಲ್ಲಿ ನಡೆದ ಸಮಾರಂಭದಲ್ಲಿ ಸಭಿಕರೊಂದಿಗೆ ಸಂವಾದ ನಡೆಸಿದ ಗಾಂಧಿ, ಬಿಜೆಪಿಯಲ್ಲಿನ ದೌರ್ಬಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಒಬ್ಬ ರಾಜಕೀಯ ನಿಪುಣನಾಗಿ ನನಗೆ ಅವರ ದೌರ್ಬಲ್ಯ ಎದ್ದು ಕಾಣುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆಯಾದರೆ ಬಿಜೆಪಿಯನ್ನು ಸೋಲಿಸಬಹುದು ಎಂದರು.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಶುರು; ಡಿಕೆ ಶಿವಕುಮಾರ್ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ? ಇಲ್ಲಿದೆ ವಿವರ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು. ಜತೆಗೆ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ದೇಶಕ್ಕೆ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ. ಪ್ರತಿಪಕ್ಷಗಳ ಏಕತೆಯ ವಿಷಯದಲ್ಲಿ, ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.

ವ್ಯವಸ್ಥೆಗಳು ನೇರವಾಗಿ ಜನರನ್ನು ಸಂಪರ್ಕಿಸಬೇಕು ಎಂಬ ಕಾರಣಕ್ಕೆ ನಾವು ಭಾರತ್‌ ಜೋಡೋ ಯಾತ್ರೆಯನ್ನು ಆರಂಭಿಸಿದೆವು. ಕೆಲವು ವಿಷಯಗಳನ್ನು ರಾಜಕೀಯವಾಗಿ ಕಾರ್ಯರೂಪಕ್ಕೆ ತರುವುದು ಕಷ್ಟ. ಹೀಗಾಗಿ ದಕ್ಷಿಣದ ತುದಿಯಿಂದ ಉತ್ತರ ಭಾರತದವರೆಗೂ ಪಾದಯಾತ್ರೆ ನಡೆಸಿದೆವು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Thu, 1 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು