ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸೋಲಿಸಲು ಕರ್ನಾಟಕ ತಂತ್ರವೇ ಮಾದರಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ

Updated on: Jun 01, 2023 | 9:30 AM

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನ ಸಮರ್ಪಕ ಜಾರಿಗೆ ನಿರ್ಧಾರ ಮಾಡಲಾಗಿದೆ, ಈ ಮೂಲಕ ಲೋಕಾಸಭಾ ಚುನಾವಣೆಗೂ ಮುನ್ನ ರಾಜಕೀಯ ಆಡಳಿತದ ಮಾಡಲ್ ಸೃಷ್ಠಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಬಿಜೆಪಿಯ ಗುಜರಾತ್ , ಉತ್ತರ ಪ್ರದೇಶ್ ಮಾಡೆಲ್‌ಗೆ ಬದಲಾಗಿ, ಕರ್ನಾಟಕ ಮಾಡೆಲ್‌ ರಚನೆಗೆ ಚಿಂತನೆ ನಡೆದಿದೆ.

ಉತ್ತಮ ಆಡಳಿತ ಜೊತೆ ಜೊತೆಗೆ ಸಮಾಜಿಕ ನ್ಯಾಯದ ಪರಿಕಲ್ಪನೆಯೂ ಇದೆ, ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಪರ ಸರ್ಕಾರ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಮುಂದಾಗಿದೆ. ಗ್ಯಾರಂಟಿ ಯೋಜನೆ ಜಾರಿ ಮೂಲಕ ಹೊಸದೊಂದು ಮಾದರಿ ಸೃಷ್ಟಿ ಮಾಡಲಾಗಿದೆ, ಈ ಮೂಲಕ ದೇಶದ ಇತರೆ ರಾಜ್ಯಗಳಿಗೆ ಸಂದೇಶ ರವಾನೆಗೆ ಯತ್ನಿಸಲಾಗುತ್ತಿದೆ.

ಅಮೆರಿಕದ ಸಾಂತಾ ಕ್ಲಾರಾದ ಕ್ಯಾಲಿಫೋರ್ನಿಯಾ ವಿವಿ ಕ್ಯಾಂಪಸ್‌ನಲ್ಲಿ ನಡೆದ ಸಮಾರಂಭದಲ್ಲಿ ಸಭಿಕರೊಂದಿಗೆ ಸಂವಾದ ನಡೆಸಿದ ಗಾಂಧಿ, ಬಿಜೆಪಿಯಲ್ಲಿನ ದೌರ್ಬಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಒಬ್ಬ ರಾಜಕೀಯ ನಿಪುಣನಾಗಿ ನನಗೆ ಅವರ ದೌರ್ಬಲ್ಯ ಎದ್ದು ಕಾಣುತ್ತಿವೆ. ಪ್ರತಿಪಕ್ಷಗಳು ಸರಿಯಾಗಿ ಹೊಂದಾಣಿಕೆಯಾದರೆ ಬಿಜೆಪಿಯನ್ನು ಸೋಲಿಸಬಹುದು ಎಂದರು.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಶುರು; ಡಿಕೆ ಶಿವಕುಮಾರ್ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ? ಇಲ್ಲಿದೆ ವಿವರ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕು. ಜತೆಗೆ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ದೇಶಕ್ಕೆ ಪರ್ಯಾಯ ದೃಷ್ಟಿಕೋನದ ಅಗತ್ಯವಿದೆ. ಪ್ರತಿಪಕ್ಷಗಳ ಏಕತೆಯ ವಿಷಯದಲ್ಲಿ, ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.

ವ್ಯವಸ್ಥೆಗಳು ನೇರವಾಗಿ ಜನರನ್ನು ಸಂಪರ್ಕಿಸಬೇಕು ಎಂಬ ಕಾರಣಕ್ಕೆ ನಾವು ಭಾರತ್‌ ಜೋಡೋ ಯಾತ್ರೆಯನ್ನು ಆರಂಭಿಸಿದೆವು. ಕೆಲವು ವಿಷಯಗಳನ್ನು ರಾಜಕೀಯವಾಗಿ ಕಾರ್ಯರೂಪಕ್ಕೆ ತರುವುದು ಕಷ್ಟ. ಹೀಗಾಗಿ ದಕ್ಷಿಣದ ತುದಿಯಿಂದ ಉತ್ತರ ಭಾರತದವರೆಗೂ ಪಾದಯಾತ್ರೆ ನಡೆಸಿದೆವು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Thu, 1 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us