AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಒಂದೇ ಮತ ಪಡೆದ ಬಿಜೆಪಿ ಅಭ್ಯರ್ಥಿ; ಕುಟುಂಬದವರೂ ಮೋಸ ಮಾಡಿದರು !

ತಮಿಳುನಾಡಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕೂಡ, ಆಡಳಿತ ಪಕ್ಷ ಡಿಎಂಕೆ ಅಭೂತಪೂರ್ವ ಜಯಗಳಿಸಿದೆ. ಚೆನ್ನೈನಲ್ಲೇ 134 ವಾರ್ಡ್​ಗಳನ್ನು ಗೆದ್ದುಕೊಂಡಿದೆ.

ತಮಿಳುನಾಡು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಒಂದೇ ಮತ ಪಡೆದ ಬಿಜೆಪಿ ಅಭ್ಯರ್ಥಿ; ಕುಟುಂಬದವರೂ ಮೋಸ ಮಾಡಿದರು !
ಬಿಜೆಪಿ ಅಭ್ಯರ್ಥಿ
TV9 Web
| Edited By: |

Updated on: Feb 22, 2022 | 5:46 PM

Share

ಈರೋಡ್​: ತಮಿಳುನಾಡಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ (TN Urban Local Body Polls) ಬಿಜೆಪಿಯಿಂದ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬರಿಗೆ ಕೇವಲ ಒಂದೇ ಒಂದು ವೋಟ್​ ಬಂದಿದೆ. ತಮಿಳುನಾಡಿನಾದ್ಯಂತ ಪಟ್ಟಣ ಪಂಚಾಯಿತಿ ಚುನಾವಣೆ ನಡೆದಿತ್ತು. ಅದರಲ್ಲಿ ನರೇಂದ್ರನ್ ಎಂಬುವರು ಈರೋಡ್​ ಜಿಲ್ಲೆಯ ಭವಾನಿಸಾಗರ್​ ಪಟ್ಟಣದ 11ನೇ ವಾರ್ಡ್​​ನಿಂದ ಸ್ಪರ್ಧಿಸಿದ್ದರು. ಆದರೆ ಮತ ಎಣಿಕೆ ಮುಗಿದ ಬಳಿಕ ಅಕ್ಷರಶಃ ಶಾಕ್​ ಆಗಿದ್ದಾರೆ. ಅವರಿಗೆ ಬಿದ್ದಿದ್ದು ಒಂದೇ ಮತವಾಗಿತ್ತು. ಅದೂ ಕೂಡ ಅವರೇ ತಮಗೆ ತಾವು ಹಾಕಿಕೊಂಡ ಮತ !

ಈ ಬಗ್ಗೆ ಮಾತನಾಡಿದ ನರೇಂದ್ರನ್​, ನನಗೆ ನಾನೊಬ್ಬನೇ ಮತ ಹಾಕಿಕೊಂಡಿದ್ದೇನೆ. ಅದು ಬಿಟ್ಟರೆ ನನ್ನ ಕುಟುಂಬದವರು, ಸ್ನೇಹಿತರು, ಪಕ್ಷದವರೂ ಕೂಡ ನನಗೆ ಮತ ಹಾಕಲಿಲ್ಲ. ಸುಳ್ಳು ಭರವಸೆ ಕೊಟ್ಟು ಎಲೆಕ್ಷನ್​ಗೆ ನಿಲ್ಲಿಸಿದರು. ಈಗ ಯಾರೂ ಮತಹಾಕಲಿಲ್ಲ. ಈ ಮೂಲಕ ನನಗೆ ಅವಮಾನ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಹೇಳಬೇಕೆಂದರೆ ತಮಿಳುನಾಡಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕೂಡ, ಆಡಳಿತ ಪಕ್ಷ ಡಿಎಂಕೆ ಅಭೂತಪೂರ್ವ ಜಯಗಳಿಸಿದೆ. ಚೆನ್ನೈನಲ್ಲೇ 134 ವಾರ್ಡ್​ಗಳನ್ನು ಗೆದ್ದುಕೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಮುಖ್ಯಮಂತ್ರಿ ಹುದ್ದೆಗೆ ಏರಿರುವ ಎಂ.ಕೆ.ಸ್ಟಾಲಿನ್​ ಇದೀಗ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿದ್ದರ ಬಗ್ಗೆ ತುಂಬ ಸಂತೋಷ ವ್ಯಕ್ತಪಡಿಸಿದ್ದಾರೆ. ಹಾಗೇ, ಈ ವಿಜಯಕ್ಕಾಗಿ ತಮಿಳುನಾಡು ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂಭತ್ತು ತಿಂಗಳು ಒಳ್ಳೆಯ ಆಡಳಿತ ನೀಡಿದ್ದಕ್ಕೆ ಪ್ರತಿಯಾಗಿ ರಾಜ್ಯದ ಜನರು ನೀಡಿದ ಸರ್ಟಿಫಿಕೇಟ್​ ಇದು.  ನಾವು ಜನರ ಆಶೋತ್ತರಗಳನ್ನು ಈಡೇರಿಸುತ್ತಿದ್ದೇವೆ. ಜನರು ನಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ