AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ವಾಪಸ್ ಪಡೆದ ಬಿಜೆಪಿ ಅಭ್ಯರ್ಥಿ, ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ

ಶೆಲ್ಲಿ ಒಬೆರಾಯ್ ಅವರನ್ನು ಅಭಿನಂದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶ್ರಮವಹಿಸಿ ಕೆಲಸ ಮಾಡಲು ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ.

ನಾಮಪತ್ರ ವಾಪಸ್ ಪಡೆದ ಬಿಜೆಪಿ ಅಭ್ಯರ್ಥಿ, ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ
ದೆಹಲಿ ಮೇಯರ್ ಚುನಾವಣೆ
ರಶ್ಮಿ ಕಲ್ಲಕಟ್ಟ
|

Updated on: Apr 26, 2023 | 5:16 PM

Share

ದೆಹಲಿ: ಬಿಜೆಪಿ (BJP) ಅಭ್ಯರ್ಥಿ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ(Aam Aadmi Party) ಶೆಲ್ಲಿ ಒಬೆರಾಯ್ (Shelly Oberoi)ಅವರು ಇಂದು ದೆಹಲಿ ಮೇಯರ್ (Delhi Mayor) ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಒಬೆರಾಯ್ ಅವರು ದೆಹಲಿಯ ಮೇಯರ್ ಆಗಿ ಮತ್ತೊಂದು ಅವಧಿಯನ್ನು ಪಡೆದಿದ್ದಾರೆ. ಸ್ಥಾಯಿ ಸಮಿತಿಗೆ ಚುನಾವಣೆ ನಡೆಯದ ಕಾರಣ ಈ ಕ್ರಮ ಕೈಗೊಂಡಿದ್ದೇನೆ ಎಂದು ರೈ ಸದನಕ್ಕೆ ತಿಳಿಸಿದ್ದಾರೆ. ಶೆಲ್ಲಿ ಒಬೆರಾಯ್ ಅವರನ್ನು ಅಭಿನಂದಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶ್ರಮವಹಿಸಿ ಕೆಲಸ ಮಾಡಲು ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ. ಈ ಬಾರಿ ಅವಿರೋಧವಾಗಿ ಮೇಯರ್ ಮತ್ತು ಉಪಮೇಯರ್ ಆಗಿರುವ ಶೆಲ್ಲಿ ಮತ್ತು ಅಲೇ ಅವರಿಗೆ ಅಭಿನಂದನೆಗಳು. ಇಬ್ಬರಿಗೂ ಶುಭಾಶಯಗಳು. ಜನರು ನಮ್ಮಿಂದ ಭಾರಿ ನಿರೀಕ್ಷೆಗಳನ್ನು ಹೊಂದಿದ್ದಾರೆ. ಅವರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಆರ್ಥಿಕ ವರ್ಷದ ಅಂತ್ಯದ ನಂತರ ದೆಹಲಿ ಹೊಸ ಮೇಯರ್ ಅನ್ನು ಪಡೆಯಲಿದೆ

ರಾಷ್ಟ್ರ ರಾಜಧಾನಿಯಲ್ಲಿನ ಮೇಯರ್ ಹುದ್ದೆಯು ಸರದಿಯ ಆಧಾರದ ಮೇಲೆ ಐದು ವರ್ಷದಲ್ಲಿ ಒಂದೊಂದು ವರ್ಷದ ಅವಧಿಗಳನ್ನು ಪೂರೈಸಲಿದೆ ಮೊದಲ ವರ್ಷ ಮಹಿಳೆಯರಿಗೆ ಮೀಸಲಾಗಿದೆ, ಎರಡನೆಯದು ಮುಕ್ತ ವರ್ಗಕ್ಕೆ, ಮೂರನೆಯದು ಮೀಸಲು ವರ್ಗಕ್ಕೆ ಮತ್ತು ಉಳಿದ ಎರಡು ಮತ್ತೆ ಮುಕ್ತ ವರ್ಗಕ್ಕೆ ಹೀಗೆ ಅಧಿಕಾರ ನೀಡಲಾಗುತ್ತದೆ.

ಮೇಯರ್‌ನ ಅಧಿಕಾರಾವಧಿಯು ಈ ಹಿಂದೆಯೂ ವಿಸ್ತೃತ ಅವಧಿಯನ್ನು ಕಂಡಿದೆ.

ಇದನ್ನೂ ಓದಿ: Mango Price: ಮಾವು ಪ್ರಿಯರಿಗೆ ಕಹಿ ಸುದ್ದಿ, ಈ ಬಾರಿ ಬೆಲೆ ದುಬಾರಿ: ದರ ಏರಿಕೆಯ ಸತ್ಯ ಇಲ್ಲಿದೆ

ಕಳೆದ ವರ್ಷ ಡಿಸೆಂಬರ್ 4 ರಂದು ನಡೆದ ನಾಗರಿಕ ಚುನಾವಣೆಯು ಮೂರು ನಿಗಮಗಳನ್ನು ಎಂಸಿಡಿಗೆ ಏಕೀಕರಿಸಿದ ನಂತರ ಮೊದಲ ಬಾರಿಗೆ ಮತ್ತು ಹೊಸದಾಗಿ ಡಿಲಿಮಿಟೇಶನ್ ಕಸರತ್ತು ನಡೆಸಿತು. 2012 ರಲ್ಲಿ ವಾರ್ಡ್ ಸಂಖ್ಯೆಗಳನ್ನು 272 ರಿಂದ 250 ಕ್ಕೆ ಇಳಿಸಲಾಯಿತು. ನಾಗರಿಕ ಸಂಸ್ಥೆಯ ಚುನಾವಣೆಯಲ್ಲಿ ಎಎಪಿ ಅತಿ ಹೆಚ್ಚು ಮತದಿಂದ ಗೆಲುವು ಸಾಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್