AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವಾ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ಬಾರಿ ಮೋದಿ ಹುಟ್ಟುಹಬ್ಬ ಆಚರಣೆ

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಏಮ್ಸ್​ ಆಸ್ಪತ್ರೆಯ ನೆಲಗಳನ್ನು ಸ್ವಚ್ಛಗೊಳಿಸಿದ್ದಾರೆ.  ‘ಸೇವ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ವರ್ಷ ಪ್ರಧಾನಿ ಮೋದಿ ಹುಟ್ಟಹಬ್ಬ ಆಚರಿಸಲು ಬಿಜೆಪಿ ನಾಯಕರು ಕರೆ ನೀಡಿದ್ದಾರೆ. ಸೆ. 17ರಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ ಕಾರಣ ಈಗಾಗಲೇ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲು ಮುಂದಾಗಿದ್ದಾರೆ. ಶನಿವಾರ ಬೆಳಗ್ಗೆ ಏಮ್ಸ್​ ಆಸ್ಪತ್ರೆಯ ನೆಲ ಗುಡಿಸುವ ಮೂಲಕ ‘ಸೇವಾ […]

‘ಸೇವಾ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ಬಾರಿ ಮೋದಿ ಹುಟ್ಟುಹಬ್ಬ ಆಚರಣೆ
ಸಾಧು ಶ್ರೀನಾಥ್​
|

Updated on:Sep 14, 2019 | 3:23 PM

Share

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಏಮ್ಸ್​ ಆಸ್ಪತ್ರೆಯ ನೆಲಗಳನ್ನು ಸ್ವಚ್ಛಗೊಳಿಸಿದ್ದಾರೆ.  ‘ಸೇವ ಸಪ್ತಾಹ’ ಕಾರ್ಯಕ್ರಮದ ಮೂಲಕ ಈ ವರ್ಷ ಪ್ರಧಾನಿ ಮೋದಿ ಹುಟ್ಟಹಬ್ಬ ಆಚರಿಸಲು ಬಿಜೆಪಿ ನಾಯಕರು ಕರೆ ನೀಡಿದ್ದಾರೆ.

ಸೆ. 17ರಂದು ಪ್ರಧಾನಿ ಮೋದಿ ಹುಟ್ಟುಹಬ್ಬವಿರುವ ಕಾರಣ ಈಗಾಗಲೇ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲು ಮುಂದಾಗಿದ್ದಾರೆ.

ಶನಿವಾರ ಬೆಳಗ್ಗೆ ಏಮ್ಸ್​ ಆಸ್ಪತ್ರೆಯ ನೆಲ ಗುಡಿಸುವ ಮೂಲಕ ‘ಸೇವಾ ಸಪ್ತಾಹ’ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ನೀಡಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ  ಜೆಪಿ ನಡ್ಡಾ, ವಿಜಯ್ ಗೋಯೆಲ್ ಸೇರಿದಂತೆ ಕೆಲ ನಾಯಕರು ಅಮಿತ್ ಶಾಗೆ ಸಾಥ್ ಕೊಟ್ಟಿದ್ದಾರೆ. ಬಳಿಕ ಏಮ್ಸ್​ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣು, ಆಹಾರ ವಿತರಿಸಿದ್ದಾರೆ.

ದೇಶಾದ್ಯಂತ ‘ಸೇವಾ ಸಪ್ತಾಹ’ ಮೂಲಕ ಮೋದಿ ಹುಟ್ಟಹಬ್ಬ ಆಚರಿಸಲಾಗುವುದು. ಮೋದಿ ತಮ್ಮ ಇಡೀ ಜೀವನವನ್ನು ದೇಶ ಸೇವೆಗೆ ಮುಡಿಪಾಗಿಟ್ಟಿದ್ದಾರೆ ಎಂದು ಅಮಿತ್ ಶಾ ಹೇಳಿದರು.

ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಡೀ ವಾರ ರಕ್ತದಾನ ಶಿಬಿರ, ಉಚಿತ ಆರೋಗ್ಯ ಚಿಕಿತ್ಸೆ, ಅನಾಥರಿಗೆ ಮತ್ತು ವೃದ್ಧರಿಗೆ ಆಹಾರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

Published On - 12:48 pm, Sat, 14 September 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ