Sign In

By signing in or creating an account, you agree with Associated Broadcasting Company's Terms & Conditions and Privacy Policy.

 ತೌಕ್ತೆ ಚಂಡಮಾರುತದಿಂದ ಪೀಡಿತ ರಾಜ್ಯಗಳಿಗೆ ಸಹಾಯ ಮಾಡಿ: ಬಿಜೆಪಿ ಕಾರ್ಯಕರ್ತರಿಗೆ ಜೆ.ಪಿ.ನಡ್ಡಾ ಕರೆ

Cyclone Tauktae: ಈ ಬಿಕ್ಕಟ್ಟನ್ನು ಎದುರಿಸಲು ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸಬೇಕು. ಬಿಜೆಪಿಗೆ ಸರ್ಕಾರವಿರುವ ರಾಜ್ಯಗಳಲ್ಲಿ ನಾವು ಸರ್ಕಾರದೊಂದಿಗೆಕೆಲಸ ಮಾಡಬೇಕು. ಅದೇ ವೇಳೆ ಪಕ್ಷ ಅಧಿಕಾರದಲ್ಲಿ ಇಲ್ಲದೇ ಇರುವೆಡೆ ಸ್ಥಳೀಯ ಆಡಳಿತದೊಂದಿಗೆ ಸಕಾರಾತ್ಮಕ ಟಿಪ್ಪಣಿಯೊಂದಿಗೆ ಸಮನ್ವಯ ಸಾಧಿಸಬೇಕು.

 ತೌಕ್ತೆ ಚಂಡಮಾರುತದಿಂದ ಪೀಡಿತ ರಾಜ್ಯಗಳಿಗೆ ಸಹಾಯ ಮಾಡಿ: ಬಿಜೆಪಿ ಕಾರ್ಯಕರ್ತರಿಗೆ ಜೆ.ಪಿ.ನಡ್ಡಾ ಕರೆ
ಜೆಪಿ ನಡ್ಡಾ
Follow us
ರಶ್ಮಿ ಕಲ್ಲಕಟ್ಟ
|

Updated on:May 16, 2021 | 4:19 PM

ದೆಹಲಿ: ತೌಕ್ತೆ ಚಂಡಮಾರುತದ ವೇಳೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಪಕ್ಷದ ಶಾಸಕರು ಮತ್ತು ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ದಮನ್ ಮತ್ತು ದಿಯು ಮತ್ತು ಗುಜರಾತ್‌ನ ರಾಜ್ಯ ಪದಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಈ ಬಿಕ್ಕಟ್ಟನ್ನು ಎದುರಿಸಲು ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ನಾವು ನಮ್ಮ ಜವಾಬ್ದಾರಿಗಳನ್ನು ಪೂರೈಸಬೇಕು. ಬಿಜೆಪಿಗೆ ಸರ್ಕಾರವಿರುವ ರಾಜ್ಯಗಳಲ್ಲಿ ನಾವು ಸರ್ಕಾರದೊಂದಿಗೆ ಕೆಲಸ ಮಾಡಬೇಕು. ಅದೇ ವೇಳೆ ಪಕ್ಷ ಅಧಿಕಾರದಲ್ಲಿ ಇಲ್ಲದೇ ಇರುವೆಡೆ ಸ್ಥಳೀಯ ಆಡಳಿತದೊಂದಿಗೆ ಸಕಾರಾತ್ಮಕ ಟಿಪ್ಪಣಿಯೊಂದಿಗೆ ಸಮನ್ವಯ ಸಾಧಿಸಬೇಕು ಎಂದು ನಾವು ಖಚಿತಪಡಿಸಿಕೊಳ್ಳಬೇಕು ಎಂದು ನಡ್ಡಾ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. ಪಕ್ಷದ ರಾಜ್ಯಮಟ್ಟದ ತಂಡಗಳು ಸಾರ್ವಜನಿಕರ ಮಧ್ಯೆ ಇಳಿಯಬೇಕು ಎಂದು ಹೇಳಿದ ಅವರು ಚಂಡಮಾರುತದ ಹಿನ್ನೆಲೆಯಲ್ಲಿ ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ನಿರ್ವಹಿಸುವತ್ತ ಕೆಲಸ ಮಾಡಬೇಕು ಎಂದಿದ್ದಾರೆ.

ನಡ್ಡಾ ಬಿಜೆಪಿಯ ಸಂಸತ್ತಿನ ಸದಸ್ಯರು ಮತ್ತು ಶಾಸಕರನ್ನು ಸಂತ್ರಸ್ತ ರಾಜ್ಯಗಳ ಪಂಚಾಯತ್ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುವಂತೆ ಕೇಳಿಕೊಂಡರು. ಶಾಸಕರು ಮತ್ತು ಸಂಸದರು ಪಂಚಾಯತ್ ಜಿಲ್ಲಾ ಪರಿಷತ್ ಮತ್ತು ಬ್ಲಾಕ್ ಅಭಿವೃದ್ಧಿ ಮಂಡಳಿಗಳ ಪ್ರತಿನಿಧಿಗಳೊಂದಿಗೆ ನೇರಾ ನೇರ ಸಂವಹನ ನಡೆಸಬೇಕು ಎಂದಿದ್ದಾರೆ.

ವೈದ್ಯಕೀಯ ಸಿಬ್ಬಂದಿಯೊಂದಿಗಿನ ಸೌಹಾರ್ದತೆ ಗಟ್ಟಿಯಾಗಿರಬೇಕು, ಇದರಿಂದಾಗಿ ನಮ್ಮ ತಂಡಗಳು ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಔಷಧಿ ಮತ್ತು ಇತರ ಪರಿಹಾರ ಸಾಮಗ್ರಿಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ನಡ್ಡಾ ಹೇಳಿದರು. ಪಕ್ಷದ ಕಾರ್ಯಕರ್ತರು ಸಹ ಮೀನುಗಾರರತ್ತ ಗಮನಹರಿಸಬೇಕು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.

ಭಾನುವಾರ ಕೊವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದಕ್ಕಾಗಿ ರಾಜ್ಯಕ್ಕೆ ಸಹಾಯ ಮಾಡಲು ‘ಸೇವಾ ಹೈ ಸಂಘಟನ್ ‘ ಕಾರ್ಯಕ್ರಮದಡಿ ನಡ್ಡಾ 17 ಮೊಬೈಲ್ ವೈದ್ಯಕೀಯ ಘಟಕಗಳನ್ನು ಮತ್ತು ಹಿಮಾಚಲ ಪ್ರದೇಶಕ್ಕೆ ವೈದ್ಯಕೀಯ ಸಹಾಯಕ್ಕೆ ಚಾಲನೆ ನೀಡಿದ್ದಾರೆ.

ಕೊವಿಡ್‌ನ ಎರಡನೇ ಅಲೆಯ ಮಧ್ಯೆ, ‘ಸೇವಾ ಹೈ ಸಂಘಟನ್’ನ ಎರಡನೇ ಭಾಗ ಪ್ರಾರಂಭವಾಗಿದೆ. ನಮ್ಮ ಅನೇಕ ಕಾರ್ಮಿಕರು ಆಸ್ಪತ್ರೆಗಳ ಜೊತೆಗೆ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ ಮತ್ತು ಅದರೊಂದಿಗೆ, ಪರೀಕ್ಷೆಯನ್ನು ಆಧರಿಸಿದ ನಾವು ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದೇವೆ ಎಂದು ಅವರು ಹೇಳಿದರು.

ಕಷ್ಟದ ಈ ಹೊತ್ತಿನಲ್ಲಿ ಮಹಿಳಾ ಮಂಡಳಿ ಮತ್ತು ಸ್ವಸಹಾಯ ಗುಂಪುಗಳು ಪಿಪಿಇ ಕಿಟ್, ಮಾಸ್ಕ್ ತಯಾರಿಸಿ ನೆರವಾದವು ಎಂದಿದ್ದಾರೆ ನಡ್ಡಾ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.

ಇದನ್ನೂ ಓದಿ:  Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

Published On - 3:51 pm, Sun, 16 May 21

ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ