AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‌ಗೆ ತೆಗೆದುಕೊಂಡು ಹೋಗಿದ್ದರು.

Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ
ಜೆಪಿ ನಡ್ಡಾ
ನಯನಾ ರಾಜೀವ್
|

Updated on:Mar 25, 2024 | 9:32 AM

Share

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರ ಪತ್ನಿಯ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‌ಗೆ ತೆಗೆದುಕೊಂಡು ಹೋಗಿದ್ದರು. ಮಾರ್ಚ್ 19 ರಂದು, ಅವರ ಕಾರನ್ನು ಸರ್ವೀಸ್ ಸೆಂಟರ್‌ನಿಂದಲೇ ಕಳವು ಮಾಡಲಾಗಿತ್ತು. ಚಾಲಕನ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದೀಗ ಪೊಲೀಸರು ಕಾರಿಗೆ ಹುಡುಕಾಟ ಆರಂಭಿಸಿದ್ದಾರೆ.

ಈ ಸಂಬಂಧ ಪೊಲೀಸರು ಸಮೀಪದ ಸಿಸಿಟಿವಿ ವೀಕ್ಷಿಸುತ್ತಿದ್ದಾರೆ. ಅಲ್ಲದೆ ಶಂಕಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಅರೋರಾ ಪ್ರಾಪರ್ಟೀಸ್ ಆರ್‌ಡಿ ಮಾರ್ಗದ ಮುಂಭಾಗದಲ್ಲಿರುವ ಗೋವಿಂದಪುರಿಯಿಂದ ಕಾರು ನೋಂದಣಿ ಸಂಖ್ಯೆ HP03D0021 ಅನ್ನು ಕಳವು ಮಾಡಲಾಗಿದೆ ಎಂದು ಚಾಲಕ ಹೇಳಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯೊಳಗೆ ಕಾರು ಕಳ್ಳತನವಾಗಿರುವ ಸಾಧ್ಯತೆ ಇದೆ ಎಂದು ಚಾಲಕ ತಿಳಿಸಿದ್ದಾರೆ. ದೆಹಲಿ ಸೇರಿದಂತೆ ಹಲವು ಮಹಾನಗರಗಳಲ್ಲಿ ವಾಹನ ಕಳ್ಳತನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಗಮನಾರ್ಹ. ದೆಹಲಿ-ಎನ್‌ಸಿಆರ್‌ನಲ್ಲಿ ಪ್ರತಿ 14 ನಿಮಿಷಕ್ಕೆ ಒಂದು ವಾಹನ ಕಳ್ಳತನವಾಗುತ್ತದೆ.

ಮತ್ತಷ್ಟು ಓದಿ:ಬಿಜೆಪಿ ಜೆಡಿಎಸ್ ಮೈತ್ರಿ ಅಪಸ್ವರ: ಕುಮಾರಸ್ವಾಮಿ ಮುನಿಸು ಶಮನಕ್ಕೆ ನಡ್ಡಾ, ಅಮಿತ್ ಶಾ ಅಖಾಡಕ್ಕೆ

ಜೆಪಿ ನಡ್ಡಾ ಅವರ ಪತ್ನಿಯ ಕಾರು ಸಂಖ್ಯೆ ಹಿಮಾಚಲ ಪ್ರದೇಶದ್ದು ಎಂಬ ಮಾಹಿತಿ ಲಭಿಸಿದೆ. ಕಾರು ಚಾಲಕ ಸರ್ವೀಸ್ ಸೆಂಟರ್ ನಲ್ಲಿ ಕಾರನ್ನು ನಿಲ್ಲಿಸಿ ಊಟ ಮಾಡಲು ಮನೆಗೆ ತೆರಳಿದ್ದ. ಆದರೆ ವಾಪಸ್ ಬಂದಾಗ ಕಾರು ನಾಪತ್ತೆಯಾಗಿತ್ತು. ಕಾರಿನ ಬಣ್ಣ ಬಿಳಿ. ಈ ವೇಳೆ ಚಾಲಕ ಜೋಗಿಂದರ್ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಕಾರಿನ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಇದು ಮಾರ್ಚ್ 19ರ ಘಟನೆ ಎಂದು ಹೇಳಲಾಗುತ್ತಿದೆ. 2022 ಮತ್ತು 2023 ರ ನಡುವೆ ಭಾರತದಲ್ಲಿ ವಾಹನ ಕಳ್ಳತನ ಘಟನೆಗಳು 2.5% ರಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Mon, 25 March 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!