AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಯ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‌ಗೆ ತೆಗೆದುಕೊಂಡು ಹೋಗಿದ್ದರು.

Lok Sabha Election: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಯ ಕಾರು ಕಳ್ಳತನ
ಜೆಪಿ ನಡ್ಡಾ
ನಯನಾ ರಾಜೀವ್
|

Updated on:Mar 25, 2024 | 9:32 AM

Share

ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರ ಪತ್ನಿಯ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‌ಗೆ ತೆಗೆದುಕೊಂಡು ಹೋಗಿದ್ದರು. ಮಾರ್ಚ್ 19 ರಂದು, ಅವರ ಕಾರನ್ನು ಸರ್ವೀಸ್ ಸೆಂಟರ್‌ನಿಂದಲೇ ಕಳವು ಮಾಡಲಾಗಿತ್ತು. ಚಾಲಕನ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದೀಗ ಪೊಲೀಸರು ಕಾರಿಗೆ ಹುಡುಕಾಟ ಆರಂಭಿಸಿದ್ದಾರೆ.

ಈ ಸಂಬಂಧ ಪೊಲೀಸರು ಸಮೀಪದ ಸಿಸಿಟಿವಿ ವೀಕ್ಷಿಸುತ್ತಿದ್ದಾರೆ. ಅಲ್ಲದೆ ಶಂಕಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಅರೋರಾ ಪ್ರಾಪರ್ಟೀಸ್ ಆರ್‌ಡಿ ಮಾರ್ಗದ ಮುಂಭಾಗದಲ್ಲಿರುವ ಗೋವಿಂದಪುರಿಯಿಂದ ಕಾರು ನೋಂದಣಿ ಸಂಖ್ಯೆ HP03D0021 ಅನ್ನು ಕಳವು ಮಾಡಲಾಗಿದೆ ಎಂದು ಚಾಲಕ ಹೇಳಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯೊಳಗೆ ಕಾರು ಕಳ್ಳತನವಾಗಿರುವ ಸಾಧ್ಯತೆ ಇದೆ ಎಂದು ಚಾಲಕ ತಿಳಿಸಿದ್ದಾರೆ. ದೆಹಲಿ ಸೇರಿದಂತೆ ಹಲವು ಮಹಾನಗರಗಳಲ್ಲಿ ವಾಹನ ಕಳ್ಳತನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಗಮನಾರ್ಹ. ದೆಹಲಿ-ಎನ್‌ಸಿಆರ್‌ನಲ್ಲಿ ಪ್ರತಿ 14 ನಿಮಿಷಕ್ಕೆ ಒಂದು ವಾಹನ ಕಳ್ಳತನವಾಗುತ್ತದೆ.

ಮತ್ತಷ್ಟು ಓದಿ:ಬಿಜೆಪಿ ಜೆಡಿಎಸ್ ಮೈತ್ರಿ ಅಪಸ್ವರ: ಕುಮಾರಸ್ವಾಮಿ ಮುನಿಸು ಶಮನಕ್ಕೆ ನಡ್ಡಾ, ಅಮಿತ್ ಶಾ ಅಖಾಡಕ್ಕೆ

ಜೆಪಿ ನಡ್ಡಾ ಅವರ ಪತ್ನಿಯ ಕಾರು ಸಂಖ್ಯೆ ಹಿಮಾಚಲ ಪ್ರದೇಶದ್ದು ಎಂಬ ಮಾಹಿತಿ ಲಭಿಸಿದೆ. ಕಾರು ಚಾಲಕ ಸರ್ವೀಸ್ ಸೆಂಟರ್ ನಲ್ಲಿ ಕಾರನ್ನು ನಿಲ್ಲಿಸಿ ಊಟ ಮಾಡಲು ಮನೆಗೆ ತೆರಳಿದ್ದ. ಆದರೆ ವಾಪಸ್ ಬಂದಾಗ ಕಾರು ನಾಪತ್ತೆಯಾಗಿತ್ತು. ಕಾರಿನ ಬಣ್ಣ ಬಿಳಿ. ಈ ವೇಳೆ ಚಾಲಕ ಜೋಗಿಂದರ್ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಕಾರಿನ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಇದು ಮಾರ್ಚ್ 19ರ ಘಟನೆ ಎಂದು ಹೇಳಲಾಗುತ್ತಿದೆ. 2022 ಮತ್ತು 2023 ರ ನಡುವೆ ಭಾರತದಲ್ಲಿ ವಾಹನ ಕಳ್ಳತನ ಘಟನೆಗಳು 2.5% ರಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:25 am, Mon, 25 March 24

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ