Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​

Gujarat New Chief Minister: ಭೂಪೇಂದ್ರ ಪಟೇಲ್​ ಅವರು  ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​
ಭೂಪೇಂದ್ರ ಪಟೇಲ್​
Follow us
| Updated By: Lakshmi Hegde

Updated on:Sep 12, 2021 | 4:40 PM

ಗುಜರಾತ್​ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಿರಿಯ ನಾಯಕ ಭೂಪೇಂದ್ರ ಪಟೇಲ್ (Bhupendra Patel)​ರನ್ನು ಗುಜರಾತ್​ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ. ನಿನ್ನೆ ವಿಜಯ್​ ರೂಪಾನಿ ದಿಢೀರ್ ರಾಜೀನಾಮೆ ನೀಡಿದಾಗಿನಿಂದ ಗುಜರಾತ್​ನ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ದೊಡ್ಡ ಕುತೂಹಲ ಸೃಷ್ಟಿಸಿದ್ದ ವಿಷಯವಾಗಿತ್ತು. ಇಂದು ಬಿಎಲ್​ಪಿ ಸಭೆ ಕೂಡ ನಡೆದಿತ್ತು. ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ನರೇಂದ್ರ ಸಿಂಗ್​ ತೋಮರ್​ ಕೇಂದ್ರದಿಂದ ವೀಕ್ಷಕರಾಗಿ ಆಗಮಿಸಿದ್ದರು. ಸಭೆ ಮುಕ್ತಾಯವಾಗಿದ್ದು, ಭೂಪೇಂದ್ರ ಪಾಟೀಲ್​ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಇವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎನ್ನಲಾಗಿದೆ.

ಭೂಪೇಂದ್ರ ಪಟೇಲ್​ ಅವರು  ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಭೂಪೇಂದ್ರ ಪಟೇಲ್​​ಗೂ ಮೊದಲು ಆನಂದಿಬೆನ್​ ಪಟೇಲ್ (ಉತ್ತರಪ್ರದೇಶದ ಈಗಿನ ರಾಜ್ಯಪಾಲರು)​ ಅಭ್ಯರ್ಥಿಯಾಗಿದ್ದರು. ವಿಶೇಷವೆಂದರೆ ಆನಂದಿ ಬೆನ್ ಪಟೇಲ್​ ಇದೇ ಕ್ಷೇತ್ರದಿಂದ ಗೆದ್ದು ಗುಜರಾತ್​ ಮುಖ್ಯಮಂತ್ರಿಯಾಗಿದ್ದರು (2014-2016ರ ಅವಧಿ). ಇಂಜನಿಯರಿಂಗ್​ ಓದಿದ್ದ ಭೂಪೇಂದ್ರ ಪಟೇಲ್​ ಅವರು ಈ ಹಿಂದೆ ಅಹ್ಮದಾಬಾದ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ (AUDA)ರಾಗಿ, ಅಮದ್​ವಾಡ ಮುನ್ಸಿಪಲ್ ಕಾರ್ಪೋರೇಶನ್​ ಸ್ಥಾಯಿ ಸಮಿತಿ (AMC) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಿನ್ನೆ ವಿಜಯ್​ ರೂಪಾನಿ ರಾಜೀನಾಮೆ ನೀಡಿದ್ದು ಬಹು ಅಚ್ಚರಿ ಮೂಡಿಸಿತ್ತು. ಗುಜರಾತ್ ಚುನಾವಣೆ ಒಂದೇ ವರ್ಷದಲ್ಲಿದ್ದಾಗ ಮುಖ್ಯಮಂತ್ರಿ ಬದಲಾವಣೆ ಯಾಕೆ ಎಂಬ ಪ್ರಶ್ನೆಯನ್ನೂ ಮೂಡಿಸಿತ್ತು. ಹಾಗೇ, ಮುಖ್ಯಮಂತ್ರಿ ಹುದ್ದೆ ರೇಸ್​ನಲ್ಲಿ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ, ಪ್ರಫುಲ್​ ಪಟೇಲ್​ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದವು. ಅದರಲ್ಲಿ ಭೂಪೇಂದ್ರ ಪಟೇಲ್​ ಹೆಸರೇನೂ ಅಷ್ಟೊಂದು ಪ್ರಾಮುಖ್ಯತೆ ಪಡೆದಿರಲಿಲ್ಲ. ಇದೀಗ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಅವರು ನಾಳೆಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ

Published On - 4:23 pm, Sun, 12 September 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ