AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​

Gujarat New Chief Minister: ಭೂಪೇಂದ್ರ ಪಟೇಲ್​ ಅವರು  ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

Bhupendra Patel: ಗುಜರಾತ್​ ಮುಂದಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​
ಭೂಪೇಂದ್ರ ಪಟೇಲ್​
TV9 Web
| Edited By: |

Updated on:Sep 12, 2021 | 4:40 PM

Share

ಗುಜರಾತ್​ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಿರಿಯ ನಾಯಕ ಭೂಪೇಂದ್ರ ಪಟೇಲ್ (Bhupendra Patel)​ರನ್ನು ಗುಜರಾತ್​ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ. ನಿನ್ನೆ ವಿಜಯ್​ ರೂಪಾನಿ ದಿಢೀರ್ ರಾಜೀನಾಮೆ ನೀಡಿದಾಗಿನಿಂದ ಗುಜರಾತ್​ನ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ದೊಡ್ಡ ಕುತೂಹಲ ಸೃಷ್ಟಿಸಿದ್ದ ವಿಷಯವಾಗಿತ್ತು. ಇಂದು ಬಿಎಲ್​ಪಿ ಸಭೆ ಕೂಡ ನಡೆದಿತ್ತು. ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ನರೇಂದ್ರ ಸಿಂಗ್​ ತೋಮರ್​ ಕೇಂದ್ರದಿಂದ ವೀಕ್ಷಕರಾಗಿ ಆಗಮಿಸಿದ್ದರು. ಸಭೆ ಮುಕ್ತಾಯವಾಗಿದ್ದು, ಭೂಪೇಂದ್ರ ಪಾಟೀಲ್​ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಇವರ ಹೆಸರನ್ನು ವಿಜಯ್​ ರೂಪಾನಿಯವರೇ ಸೂಚಿಸಿದ್ದಾರೆ ಎನ್ನಲಾಗಿದೆ.

ಭೂಪೇಂದ್ರ ಪಟೇಲ್​ ಅವರು  ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್​ ಪಟೇಲ್​ ವಿರುದ್ಧ ಬರೋಬ್ಬರಿ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಭೂಪೇಂದ್ರ ಪಟೇಲ್​​ಗೂ ಮೊದಲು ಆನಂದಿಬೆನ್​ ಪಟೇಲ್ (ಉತ್ತರಪ್ರದೇಶದ ಈಗಿನ ರಾಜ್ಯಪಾಲರು)​ ಅಭ್ಯರ್ಥಿಯಾಗಿದ್ದರು. ವಿಶೇಷವೆಂದರೆ ಆನಂದಿ ಬೆನ್ ಪಟೇಲ್​ ಇದೇ ಕ್ಷೇತ್ರದಿಂದ ಗೆದ್ದು ಗುಜರಾತ್​ ಮುಖ್ಯಮಂತ್ರಿಯಾಗಿದ್ದರು (2014-2016ರ ಅವಧಿ). ಇಂಜನಿಯರಿಂಗ್​ ಓದಿದ್ದ ಭೂಪೇಂದ್ರ ಪಟೇಲ್​ ಅವರು ಈ ಹಿಂದೆ ಅಹ್ಮದಾಬಾದ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ (AUDA)ರಾಗಿ, ಅಮದ್​ವಾಡ ಮುನ್ಸಿಪಲ್ ಕಾರ್ಪೋರೇಶನ್​ ಸ್ಥಾಯಿ ಸಮಿತಿ (AMC) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಿನ್ನೆ ವಿಜಯ್​ ರೂಪಾನಿ ರಾಜೀನಾಮೆ ನೀಡಿದ್ದು ಬಹು ಅಚ್ಚರಿ ಮೂಡಿಸಿತ್ತು. ಗುಜರಾತ್ ಚುನಾವಣೆ ಒಂದೇ ವರ್ಷದಲ್ಲಿದ್ದಾಗ ಮುಖ್ಯಮಂತ್ರಿ ಬದಲಾವಣೆ ಯಾಕೆ ಎಂಬ ಪ್ರಶ್ನೆಯನ್ನೂ ಮೂಡಿಸಿತ್ತು. ಹಾಗೇ, ಮುಖ್ಯಮಂತ್ರಿ ಹುದ್ದೆ ರೇಸ್​ನಲ್ಲಿ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ, ಪ್ರಫುಲ್​ ಪಟೇಲ್​ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದವು. ಅದರಲ್ಲಿ ಭೂಪೇಂದ್ರ ಪಟೇಲ್​ ಹೆಸರೇನೂ ಅಷ್ಟೊಂದು ಪ್ರಾಮುಖ್ಯತೆ ಪಡೆದಿರಲಿಲ್ಲ. ಇದೀಗ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಅವರು ನಾಳೆಯೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ

Published On - 4:23 pm, Sun, 12 September 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ