AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ

ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಎನ್​ಡಿಎ ಮೈತ್ರಿಕೂಟ ಸುಶೀಲ್ ಕುಮಾರ್ ಮೋದಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ. ಬಿಹಾರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ ಸುಶೀಲ್ ಮೋದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಉಡುಗೊರೆ ನೀಡಿದೆ.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ
ಸುಶೀಲ್ ಕುಮಾರ್ ಮೋದಿ (ಸಾಂದರ್ಭಿಕ ಚಿತ್ರ)
guruganesh bhat
| Updated By: ಸಾಧು ಶ್ರೀನಾಥ್​|

Updated on:Nov 28, 2020 | 3:05 PM

Share

ಪಾಟ್ನಾ: ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕೀಯಕ್ಕೆ ಸುಶೀಲ್ ಕುಮಾರ್ ಮೋದಿಯವರ ಎಂಟ್ರಿ ಪಕ್ಕಾ ಆಗಿದೆ. ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಎನ್​ಡಿಎ ಮೈತ್ರಿಕೂಟ ಸುಶೀಲ್ ಕುಮಾರ್ ಮೋದಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ. ಡಿಸೆಂಬರ್ 14ರಂದು ನಡೆಯಲಿರುವ ಚುನಾವಣೆ ನಡೆಯಲಿದೆ. ಡಿಸಿಎಂ ಪಟ್ಟ ತ್ಯಾಗ ಮಾಡಿದ್ದಕ್ಕ ಸಿಕ್ಕ ಉಡುಗೊರೆ 243 ಸಂಖ್ಯಾಬಲದ ರಾಜ್ಯಸಭೆಯಲ್ಲಿ ಸುಶೀಲ್ ಮೋದಿ ಆಯ್ಕೆಯಾಗಲು 123 ಮತಗಳನ್ನು ಪಡೆಯಬೇಕಿದೆ. ಎನ್​ಡಿಎ ಮೈತ್ರಿಕೂಟದ ಬಲ 125 ಇರುವ ಕಾರಣ, ಸುಶೀಲ್ ಮೋದಿ ಆಯ್ಕೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಲಾಗುತ್ತಿದೆ. ಬಿಹಾರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ ಸುಶೀಲ್ ಮೋದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಉಡುಗೊರೆ ನೀಡಿದೆ.

ಎಲ್​ಜೆಪಿ ಕೈತಪ್ಪಿದ ರಾಜ್ಯಸಭೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ರಾಮ್ ವಿಲಾಸ್ ಪಾಸ್ವಾನ್​ರ ಎಲ್​ಜೆಪಿ ನಡುವಿನ ಒಪ್ಪಂದದ ಪ್ರಕಾರ ಆರು ಲೋಕಸಭಾ ಸ್ಥಾನ ಮತ್ತು ಒಂದು ರಾಜ್ಯಸಭಾ ಸ್ಥಾನ ಎಲ್​ಜೆಪಿಗೆ ದಕ್ಕಿತ್ತು. ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅಧಿಕಾರಾವಧಿ 2024ರವರೆಗಿತ್ತು. ಅವರ ಮರಣದ ನಂತರ ತೆರವಾದ ಸ್ಥಾನಕ್ಕೆ ರಾಮ್ ವಿಲಾಸ್ ಪಾಸ್ವಾನ್ ಪತ್ನಿ ರೀನಾ ಪಾಸ್ವಾನ್ ಹೆಸರು ಕೇಳಿಬಂದಿತ್ತು. ಆದರೆ ಈಗ, ಎಲ್​ಜೆಪಿ ಪಾಲಿನ ಒಂದು ರಾಜ್ಯಸಭಾ ಸ್ಥಾನವೂ ಬಿಜೆಪಿ ಪಾಲಾಗಿದೆ.

Published On - 2:27 pm, Sat, 28 November 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?