AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ

ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಎನ್​ಡಿಎ ಮೈತ್ರಿಕೂಟ ಸುಶೀಲ್ ಕುಮಾರ್ ಮೋದಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ. ಬಿಹಾರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ ಸುಶೀಲ್ ಮೋದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಉಡುಗೊರೆ ನೀಡಿದೆ.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ
ಸುಶೀಲ್ ಕುಮಾರ್ ಮೋದಿ (ಸಾಂದರ್ಭಿಕ ಚಿತ್ರ)
guruganesh bhat
| Edited By: ಸಾಧು ಶ್ರೀನಾಥ್​|

Updated on:Nov 28, 2020 | 3:05 PM

Share

ಪಾಟ್ನಾ: ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕೀಯಕ್ಕೆ ಸುಶೀಲ್ ಕುಮಾರ್ ಮೋದಿಯವರ ಎಂಟ್ರಿ ಪಕ್ಕಾ ಆಗಿದೆ. ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಎನ್​ಡಿಎ ಮೈತ್ರಿಕೂಟ ಸುಶೀಲ್ ಕುಮಾರ್ ಮೋದಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ. ಡಿಸೆಂಬರ್ 14ರಂದು ನಡೆಯಲಿರುವ ಚುನಾವಣೆ ನಡೆಯಲಿದೆ. ಡಿಸಿಎಂ ಪಟ್ಟ ತ್ಯಾಗ ಮಾಡಿದ್ದಕ್ಕ ಸಿಕ್ಕ ಉಡುಗೊರೆ 243 ಸಂಖ್ಯಾಬಲದ ರಾಜ್ಯಸಭೆಯಲ್ಲಿ ಸುಶೀಲ್ ಮೋದಿ ಆಯ್ಕೆಯಾಗಲು 123 ಮತಗಳನ್ನು ಪಡೆಯಬೇಕಿದೆ. ಎನ್​ಡಿಎ ಮೈತ್ರಿಕೂಟದ ಬಲ 125 ಇರುವ ಕಾರಣ, ಸುಶೀಲ್ ಮೋದಿ ಆಯ್ಕೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಲಾಗುತ್ತಿದೆ. ಬಿಹಾರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ ಸುಶೀಲ್ ಮೋದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಉಡುಗೊರೆ ನೀಡಿದೆ.

ಎಲ್​ಜೆಪಿ ಕೈತಪ್ಪಿದ ರಾಜ್ಯಸಭೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ರಾಮ್ ವಿಲಾಸ್ ಪಾಸ್ವಾನ್​ರ ಎಲ್​ಜೆಪಿ ನಡುವಿನ ಒಪ್ಪಂದದ ಪ್ರಕಾರ ಆರು ಲೋಕಸಭಾ ಸ್ಥಾನ ಮತ್ತು ಒಂದು ರಾಜ್ಯಸಭಾ ಸ್ಥಾನ ಎಲ್​ಜೆಪಿಗೆ ದಕ್ಕಿತ್ತು. ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅಧಿಕಾರಾವಧಿ 2024ರವರೆಗಿತ್ತು. ಅವರ ಮರಣದ ನಂತರ ತೆರವಾದ ಸ್ಥಾನಕ್ಕೆ ರಾಮ್ ವಿಲಾಸ್ ಪಾಸ್ವಾನ್ ಪತ್ನಿ ರೀನಾ ಪಾಸ್ವಾನ್ ಹೆಸರು ಕೇಳಿಬಂದಿತ್ತು. ಆದರೆ ಈಗ, ಎಲ್​ಜೆಪಿ ಪಾಲಿನ ಒಂದು ರಾಜ್ಯಸಭಾ ಸ್ಥಾನವೂ ಬಿಜೆಪಿ ಪಾಲಾಗಿದೆ.

Published On - 2:27 pm, Sat, 28 November 20

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು