AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ

ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಎನ್​ಡಿಎ ಮೈತ್ರಿಕೂಟ ಸುಶೀಲ್ ಕುಮಾರ್ ಮೋದಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ. ಬಿಹಾರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ ಸುಶೀಲ್ ಮೋದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಉಡುಗೊರೆ ನೀಡಿದೆ.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ
ಸುಶೀಲ್ ಕುಮಾರ್ ಮೋದಿ (ಸಾಂದರ್ಭಿಕ ಚಿತ್ರ)
guruganesh bhat
| Edited By: ಸಾಧು ಶ್ರೀನಾಥ್​|

Updated on:Nov 28, 2020 | 3:05 PM

Share

ಪಾಟ್ನಾ: ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕೀಯಕ್ಕೆ ಸುಶೀಲ್ ಕುಮಾರ್ ಮೋದಿಯವರ ಎಂಟ್ರಿ ಪಕ್ಕಾ ಆಗಿದೆ. ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಎನ್​ಡಿಎ ಮೈತ್ರಿಕೂಟ ಸುಶೀಲ್ ಕುಮಾರ್ ಮೋದಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ. ಡಿಸೆಂಬರ್ 14ರಂದು ನಡೆಯಲಿರುವ ಚುನಾವಣೆ ನಡೆಯಲಿದೆ. ಡಿಸಿಎಂ ಪಟ್ಟ ತ್ಯಾಗ ಮಾಡಿದ್ದಕ್ಕ ಸಿಕ್ಕ ಉಡುಗೊರೆ 243 ಸಂಖ್ಯಾಬಲದ ರಾಜ್ಯಸಭೆಯಲ್ಲಿ ಸುಶೀಲ್ ಮೋದಿ ಆಯ್ಕೆಯಾಗಲು 123 ಮತಗಳನ್ನು ಪಡೆಯಬೇಕಿದೆ. ಎನ್​ಡಿಎ ಮೈತ್ರಿಕೂಟದ ಬಲ 125 ಇರುವ ಕಾರಣ, ಸುಶೀಲ್ ಮೋದಿ ಆಯ್ಕೆಯಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಲಾಗುತ್ತಿದೆ. ಬಿಹಾರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ ಸುಶೀಲ್ ಮೋದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಉಡುಗೊರೆ ನೀಡಿದೆ.

ಎಲ್​ಜೆಪಿ ಕೈತಪ್ಪಿದ ರಾಜ್ಯಸಭೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ರಾಮ್ ವಿಲಾಸ್ ಪಾಸ್ವಾನ್​ರ ಎಲ್​ಜೆಪಿ ನಡುವಿನ ಒಪ್ಪಂದದ ಪ್ರಕಾರ ಆರು ಲೋಕಸಭಾ ಸ್ಥಾನ ಮತ್ತು ಒಂದು ರಾಜ್ಯಸಭಾ ಸ್ಥಾನ ಎಲ್​ಜೆಪಿಗೆ ದಕ್ಕಿತ್ತು. ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅಧಿಕಾರಾವಧಿ 2024ರವರೆಗಿತ್ತು. ಅವರ ಮರಣದ ನಂತರ ತೆರವಾದ ಸ್ಥಾನಕ್ಕೆ ರಾಮ್ ವಿಲಾಸ್ ಪಾಸ್ವಾನ್ ಪತ್ನಿ ರೀನಾ ಪಾಸ್ವಾನ್ ಹೆಸರು ಕೇಳಿಬಂದಿತ್ತು. ಆದರೆ ಈಗ, ಎಲ್​ಜೆಪಿ ಪಾಲಿನ ಒಂದು ರಾಜ್ಯಸಭಾ ಸ್ಥಾನವೂ ಬಿಜೆಪಿ ಪಾಲಾಗಿದೆ.

Published On - 2:27 pm, Sat, 28 November 20

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!