AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ; ತಿರುವನಂತಪುರದ ಕೇಸರಿ ಪಕ್ಷದ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ

ಕೇರಳದ ರಾಜಧಾನಿ ತಿರುವನಂತಪುರದ ಮೇಯರ್ ಆಗಿ ಬಿಜೆಪಿಯ ವಿ.ವಿ. ರಾಜೇಶ್ ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ದಕ್ಷಿಣ ಭಾರತದ ರಾಜ್ಯವಾದ ಕೇರಳದ ರಾಜಕೀಯದಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ಈ ಮೂಲಕ ಒಂದೊಂದೇ ಹೆಜ್ಜೆಯನ್ನು ವ್ಯಾಪಿಸಿಕೊಂಡು ಬಿಜೆಪಿ ಕೇರಳದಲ್ಲಿ ತನ್ನ ಪ್ರಾಬಲ್ಯ ಸಾಧಿಸತೊಡಗಿದೆ. ಎಡಪಕ್ಷಗಳ ಹಿಡಿತದಲ್ಲಿದ್ದ ಕೇರಳದಲ್ಲಿ ಬಲಪಂಥೀಯ ಪಕ್ಷವಾದ ಬಿಜೆಪಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳತೊಡಗಿದೆ.

ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ; ತಿರುವನಂತಪುರದ ಕೇಸರಿ ಪಕ್ಷದ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ
Vv Rajesh
ಸುಷ್ಮಾ ಚಕ್ರೆ
|

Updated on: Dec 26, 2025 | 4:36 PM

Share

ತಿರುವನಂತಪುರಂ, ಡಿಸೆಂಬರ್ 26: ಕೇರಳದ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿತ್ತು. ಇದೀಗ ತಿರುವನಂತಪುರದ (Thiruvananthapuram) ಬಿಜೆಪಿಯ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆಯಾಗಿದ್ದಾರೆ. ಇವರು ತಿರುವನಂತಪುರದ ಸ್ಥಳೀಯ ನಾಯಕರಾಗಿದ್ದು, ಬಿಜೆಪಿಯ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಚಿರಪರಿಚಿತರಾಗಿದ್ದಾರೆ.

ಮೇಯರ್ ಆಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, “ನಾವು ಒಟ್ಟಿಗೆ ಮುಂದುವರಿಯುತ್ತೇವೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇವೆ. ಎಲ್ಲಾ 101 ವಾರ್ಡ್‌ಗಳಲ್ಲಿ ಅಭಿವೃದ್ಧಿಯನ್ನು ಜಾರಿಗೆ ತರಲಾಗುವುದು. ತಿರುವನಂತಪುರಂ ಅಭಿವೃದ್ಧಿ ಹೊಂದಿದ ನಗರವಾಗಿ ರೂಪಾಂತರಗೊಳ್ಳುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿ ಕೇರಳದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಹಲವು ದಶಕಗಳಿಂದ ಪ್ರಯತ್ನಿಸುತ್ತಲೇ ಇದೆ. ಆದರೂ ಎಡಪಕ್ಷಗಳ ದರ್ಬಾರ್ ಜೋರಿರುವ ಕೇರಳದಲ್ಲಿ ಬಿಜೆಪಿಗೆ ಸ್ಥಾನ ಸಿಕ್ಕಿರಲಿಲ್ಲ. ಕೇರಳದಲ್ಲಿ ಇದುವರೆಗೆ ಒಬ್ಬ ಬಿಜೆಪಿ ಶಾಸಕ ಹಾಗೂ ಓರ್ವ ಸಂಸದನನ್ನು ಮಾತ್ರ ಹೊಂದಿದೆ. ಓ. ರಾಜಗೋಪಾಲ್ 2016ರಲ್ಲಿ ನೇಮಮ್ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಿದ್ದರು. ನಟ ಹಾಘೂ ರಾಜಕಾರಣಿ ಸುರೇಶ್ ಗೋಪಿ 2024ರಲ್ಲಿ ತ್ರಿಶೂರ್ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು.

ಇದನ್ನೂ ಓದಿ: ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಇಂದು ಬೆಳಿಗ್ಗೆ ನಡೆದ ಮತದಾನದಲ್ಲಿ 45 ವರ್ಷ ವಯಸ್ಸಿನ ವಿ.ವಿ ರಾಜೇಶ್ ಅವರು 51 ಮತಗಳನ್ನು ಪಡೆದರು. ಸಿಪಿಐಎಂನ ಆರ್‌ಪಿ ಶಿವಾಜಿ 29 ಸ್ಥಾನಗಳನ್ನು ಪಡೆದರು ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಕೆ.ಎಸ್. ಶಬರಿನಾಥನ್ 19 ಸ್ಥಾನಗಳನ್ನು ಪಡೆದರು. ಸ್ವತಂತ್ರ ಶಾಸಕರಾದ ಒಬ್ಬ ಕೌನ್ಸಿಲರ್ ಗೈರುಹಾಜರಾಗಿದ್ದರು. ಎರಡನೇ ಸ್ವತಂತ್ರ ಕೌನ್ಸಿಲರ್ ಪಿ. ರಾಧಾಕೃಷ್ಣನ್ ಅವರ ಬೆಂಬಲದಿಂದ ಬಿಜೆಪಿಯ ಗೆಲುವು ಸಾಧ್ಯವಾಯಿತು.

ಡಿಸೆಂಬರ್ 9ರ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳನ್ನು ಗೆದ್ದಿತ್ತು. ಇದು ಪಕ್ಷಕ್ಕೆ ದಾಖಲೆಯ ಯಶಸ್ಸಾಗಿತ್ತು. ರಾಜೇಶ್ ಅವರ ಮೇಯರ್ ಸ್ಥಾನವು ಕೇರಳದ ರಾಜಕೀಯದಲ್ಲಿ ಬಿಜೆಪಿಯ ಹೊಸ ಅಧ್ಯಾಯವನ್ನು ಸೂಚಿಸುತ್ತದೆ.

ಇದನ್ನೂ ಓದಿ: ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ

ಏಪ್ರಿಲ್ 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ 4 ತಿಂಗಳು ಬಾಕಿ ಇರುವಾಗ ಮೇಯರ್ ಆಗಿ ವಿ.ವಿ. ರಾಜೇಶ್ ಅವರ ನೇಮಕವು ಕೇರಳದ ಬಿಜೆಪಿಗೆ ಮಹತ್ವದ ಹೆಜ್ಜೆಯಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಲ್ಲಿ ಹಲವು ಸುತ್ತಿನ ಚರ್ಚೆಗಳು ಮತ್ತು ಚರ್ಚೆಗಳ ನಂತರ ವಿ.ವಿ. ರಾಜೇಶ್ ಅವರ ಹೆಸರನ್ನು ಮೇಯರ್ ಅಭ್ಯರ್ಥಿಯಾಗಿ ನಿರ್ಧರಿಸಲಾಯಿತು. ರಾಜೇಶ್ ಪ್ರಸ್ತುತ ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಎರಡನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕೊಡಂಗನೂರು ವಾರ್ಡ್ ಅನ್ನು ಪ್ರತಿನಿಧಿಸುತ್ತಿದ್ದಾರೆ. 2025ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅವರು 515 ಮತಗಳ ಅಂತರದಿಂದ ಸ್ಥಾನವನ್ನು ಗೆದ್ದಿದ್ದರು.

ವೃತ್ತಿಯಲ್ಲಿ ವಕೀಲರಾಗಿರುವ ರಾಜೇಶ್ ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಕ್ಷದ ಹಿರಿಯ ನಾಯಕ. ಅವರು ಈ ಹಿಂದೆ ತಿರುವನಂತಪುರಂ ಜಿಲ್ಲಾ ಅಧ್ಯಕ್ಷರಾಗಿ ಮತ್ತು ಬಿಜೆಪಿ ಯುವ ಮೋರ್ಚಾದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ