AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿಯ ಹಳೇ ಪತ್ರವನ್ನು ಉಲ್ಲೇಖಿಸಿದ ಬಿಜೆಪಿ; ಲಸಿಕೆ ವಿಚಾರದಲ್ಲಿ ಮಮತಾ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂಷಣೆ

ಪ್ರಸ್ತುತ ಭಾರತ ಸರ್ಕಾರವು ಕೊರೊನಾ ಲಸಿಕೆ ಕೊಳ್ಳುವ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಿದ್ದು, ಈ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿದೆ. ಆದರೆ, ಮಮತಾ ಬ್ಯಾನರ್ಜಿಯಂತಹ ಮುಖ್ಯಮಂತ್ರಿ ತಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.

ದೀದಿಯ ಹಳೇ ಪತ್ರವನ್ನು ಉಲ್ಲೇಖಿಸಿದ ಬಿಜೆಪಿ; ಲಸಿಕೆ ವಿಚಾರದಲ್ಲಿ ಮಮತಾ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂಷಣೆ
ಮಮತಾ ಬ್ಯಾನರ್ಜಿ
Skanda
|

Updated on: May 13, 2021 | 11:36 AM

Share

ದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊರೊನಾ ಲಸಿಕೆ ಬಗ್ಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಬರೆದ ಪತ್ರಕ್ಕೆ ಪ್ರತಿಯಾಗಿ ಬಿಜೆಪಿ ಪಕ್ಷವು ದೀದಿಯ ಹಳೆಯ ಪತ್ರವೊಂದನ್ನು ಎತ್ತಿ ತೋರಿಸಿದೆ. ಮಮತಾ ಬ್ಯಾನರ್ಜಿ ಫೆಬ್ರವರಿ 24ರಂದು ಮೋದಿಗೆ ಬರೆದಿದ್ದ ಪತ್ರದಲ್ಲಿ ಕೊರೊನಾ ಲಸಿಕೆ ವಿಚಾರದಲ್ಲಿ ವಿಕೇಂದ್ರೀಕರಣ ಮಾಡಬೇಕು. ರಾಜ್ಯಗಳಿಗೆ ಲಸಿಕೆ ತರಿಸಿಕೊಳ್ಳುವ ಸ್ವಾತಂತ್ರ್ಯ ಕೊಟ್ಟರೆ ಅಗತ್ಯವಿದ್ದಷ್ಟು ಲಸಿಕೆ ಕೊಳ್ಳಬಹುದು ಎಂದು ತಿಳಿಸಿದ್ದರು. ಆದರೆ, ಈಗ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ತಿಳಿಸಿದ್ದಾರೆ.

ಪ್ರಸ್ತುತ ಭಾರತ ಸರ್ಕಾರವು ಕೊರೊನಾ ಲಸಿಕೆ ಕೊಳ್ಳುವ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಿದ್ದು, ಈ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿದೆ. ಆದರೆ, ಮಮತಾ ಬ್ಯಾನರ್ಜಿಯಂತಹ ಮುಖ್ಯಮಂತ್ರಿ ತಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಫೆಬ್ರವರಿಯಲ್ಲಿ ಅವರೇ ಪತ್ರ ಬರೆದು ವಿಕೇಂದ್ರಿಕರಣ ಮಾಡುವಂತೆ, ರಾಜ್ಯಗಳಿಗೆ ಜವಾಬ್ದಾರಿ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಈಗ ಆ ಜವಾಬ್ದಾರಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಕಾಲೆಳೆದಿದ್ದಾರೆ.

ನಿನ್ನೆ (ಮೇ 12) ಪ್ರಧಾನಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ದೇಶದಲ್ಲಿ ಲಸಿಕೆ ವಿತರಣೆಯನ್ನು ವೇಗವಾಗಿ ಮಾಡಬೇಕು. ಜಾಗತಿಕ ಮಟ್ಟದ ಲಸಿಕೆ ಉತ್ಪಾದಕರಿಂದ ನೇರವಾಗಿ ಲಸಿಕೆ ತರಿಸಿಕೊಳ್ಳಿ. ವಿಶ್ವ ಮಟ್ಟದ ಲಸಿಕೆ ಉತ್ಪಾದಕರು ಭಾರತದಲ್ಲಿ ಲಸಿಕೆ ತಯಾರಿಸುವುದಾದರೆ ನಾವು ಜಾಗ ಕೊಡುತ್ತೇವೆ ಹಾಗೂ ನಮ್ಮ ಸರ್ಕಾರ ಅದಕ್ಕೆ ಸಹಕಾರ ನೀಡಲಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಕೇಂದ್ರ ಸಚಿವರು ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ: ಮಮತಾ ಬ್ಯಾನರ್ಜಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್