AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಯಾನದಿಂದ ಹಿಡಿದು, ಒಂದು ದೇಶ ಒಂದು ಚುನಾವಣೆವರೆಗೆ ಬಿಜೆಪಿಯ ಪ್ರಣಾಳಿಕೆ ಮುಖ್ಯಾಂಶಗಳು

BJP election manifesto 2024 Highlights: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸತತ ಮೂರನೇ ಬಾರಿ ಸರ್ಕಾರ ರಚನೆ ಮಾಡುತ್ತಿದೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುತ್ತಿದ್ದಾರೆ. ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದರೂ ಎನ್​ಡಿಎ ಅವಶ್ಯಕ ಬಹುಮತ ಪಡೆಯುವಲ್ಲಿ ಸಫಲವಾಗಿದೆ. ಕಾಂಗ್ರೆಸ್​ನ ಪ್ರಬಲ ಗ್ಯಾರಂಟಿ ಭರವಸೆಗಳ ನಡುವೆ ಬಿಜೆಪಿಯೂ ಕೂಡ ಚುನಾವಣಾ ಪ್ರಣಾಳಿಕೆಯಲ್ಲಿ ಒಂದಷ್ಟು ಭರವಸೆಗಳನ್ನು ಕೊಟ್ಟಿತ್ತು. ಅವುಗಳ ಮುಖ್ಯಾಂಶಗಳು ಇಲ್ಲಿವೆ....

ಗಗನಯಾನದಿಂದ ಹಿಡಿದು, ಒಂದು ದೇಶ ಒಂದು ಚುನಾವಣೆವರೆಗೆ ಬಿಜೆಪಿಯ ಪ್ರಣಾಳಿಕೆ ಮುಖ್ಯಾಂಶಗಳು
ಬಿಜೆಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2024 | 6:17 PM

Share

ನವದೆಹಲಿ, ಜೂನ್ 7: ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಎನ್​ಡಿಎ ಮೈತ್ರಿಕೂಟ ಸರ್ಕಾರ ರಚಿಸುತ್ತಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ಜೂನ್ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಟಿಡಿಪಿ ಮತ್ತು ಜೆಡಿಯು ಪಕ್ಷಗಳು ಐದು ವರ್ಷ ಸುಭದ್ರ ಆಡಳಿತಕ್ಕೆ ಅನುವು ಮಾಡಿಕೊಡುವ ಇರಾದೆ ತೋರಿವೆ. ಕಾಂಗ್ರೆಸ್​ನ ಹಲವು ಗ್ಯಾರಂಟಿ ಭರವಸೆಗಳಿಗೆ ಪ್ರತಿಯಾಗಿ ಬಿಜೆಪಿಯೂ ಚುನಾವಣಾ ಪ್ರಣಾಳಿಕೆಯಲ್ಲಿ ಒಂದಷ್ಟು ಭರವಸೆಗಳನ್ನು (BJP election manifesto) ನೀಡಿತ್ತು. ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವನ್ನಾಗಿ ಮಾಡುವುದೂ ಗ್ಯಾರಂಟಿಗಳಲ್ಲಿ ಒಂದು. ಬಿಜೆಪಿಯ ಚುನಾವಣಾ ಪ್ರಣಾಳಿಕೆಗಳ ಮುಖ್ಯಾಂಶಗಳು ಇಂತಿವೆ:

ಬಿಜೆಪಿ ಚುನಾವಣಾ ಭರವಸೆಗಳ (2024ರಿಂದ 2029) ಮುಖ್ಯಾಂಶ

  • ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವನ್ನಾಗಿ ಮಾಡುವುದು.
  • ಚಂದ್ರನ ನೆಲದ ಮೇಲೆ ಮನುಷ್ಯನನ್ನು ಇಳಿಸುವ ಯೋಜನೆ.
  • 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಆಯುಷ್ಮಾನ್ ಯೋಜನೆ ನೆರವು
  • ಐದು ವರ್ಷ ಕಾಲ ಉಚಿತ ಪಡಿತರ ಯೋಜನೆ ಮುಂದುವರಿಕೆ
  • ಮುದ್ರಾ ಯೋಜನೆ ಅಡಿ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ
  • ಪ್ರತೀ ಗ್ರಾಮ, ಪಟ್ಟಣ, ನಗರಗಳ ಎಲ್ಲಾ ಮನೆಗಳಿಗೂ ಕುಡಿಯುವ ನೀರಿನ ಸಂಪರ್ಕ.
  • ಪಿಎಂ ಸೂರ್ಯ ಘರ್ ಬಿಜಲಿ ಯೋಜನೆ ಅಡಿಯಲ್ಲಿ ಬಡ ಮನೆಗಳಿಗೆ ಉಚಿತ ವಿದ್ಯುತ್.
  • ಐಐಟಿ, ಐಐಎಂ, ಎಐಐಎಂಎಸ್ ಮತ್ತಿತರ ಶ್ರೇಷ್ಠ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಳ.
  • 2036ರ ಒಲಿಂಪಿಕ್ ಗೇಮ್ಸ್​ಗೆ ಬಿಡ್ ಸಲ್ಲಿಸುವುದು.

ಇದನ್ನೂ ಓದಿ: ನಾವು ಹಿಂದೆಯೂ ಸೋತಿಲ್ಲ, ಇಂದೂ ಸೋತಿಲ್ಲ, ಗೆಲುವನ್ನು ಅರಗಿಸಿಕೊಳ್ಳುವುದೂ ತಿಳಿದಿದೆ: ಮೋದಿ

  • ಉತ್ತರ ಭಾರತ, ದಕ್ಷಿಣ ಭಾರತ ಮತ್ತು ಪೂರ್ವ ಭಾರತದಲ್ಲಿ ಬುಲೆಟ್ ಟ್ರೈನ್ ಕಾರಿಡಾರ್.
  • ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್​ಕಾರ್, ವಂದೇ ಭಾರತ್ ಮೆಟ್ರೋ ಹೀಗೆ ಮೂರು ಮಾದರಿ ವಂದೇ ಭಾರತ್ ರೈಲುಗಳ ಪರಿಚಯ.
  • ರೈಲು ಸಂಬಂಧಿತ ಎಲ್ಲಾ ಸೇವೆಗಳನ್ನು ಒದಗಿಸುವ ಸೂಪರ್ ಆ್ಯಪ್ ಪರಿಚಯ.
  • ಹೊಸ ತಲೆಮಾರಿನ ರೈಲುಗಳು, ವಿಶ್ವದರ್ಜೆಯ ನಿಲ್ದಾಣಗಳ ಸ್ಥಾಪನೆ
  • ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಮತ್ತು ಪರೀಕ್ಷೆ ಪಾರದರ್ಶಕವಾಗಿ ನಡೆಯಲು ಕಾನೂನು.
  • ಒಂದು ದೇಶ ಒಂದು ವಿದ್ಯಾರ್ಥಿ ಐಡಿ ಯೋಜನೆ. ಪ್ರೀಸ್ಕೂಲ್​ನಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಒಬ್ಬ ವಿದ್ಯಾರ್ಥಿಯ ಶೈಕ್ಷಣಿಕ ದಾಖಲೆಗಳಿಂದ ಹಿಡಿದು ಪ್ರತಿಯೊಂದು ಮಾಹಿತಿಯೂ ಒಂದು ರಿಜಿಸ್ಟ್ರಿಯಲ್ಲಿ ಸಂಗ್ರಹವಾಗುವಂತಹ ವ್ಯವಸ್ಥೆ.
  • ಒಂದು ದೇಶ ಒಂದು ಚುನಾವಣೆ ಜಾರಿ
  • ಪಿಎಂ ಆವಾಸ್ ಯೋಜನೆ ಮತ್ತು ಪಿಎಂ ಉಜ್ವಲ ಯೋಜನೆ ವಿಸ್ತರಣೆ
  • ಬಡವರಿಗೆ ಮೂರು ಕೋಟಿ ಹೆಚ್ಚು ಮನೆಗಳು
  • ಮೂರು ಕೋಟಿ ಮಹಿಳಾ ಸ್ವಸಹಾಯ ಗುಂಪುಗಳು
  • ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಹಾಸ್ಟಲ್.
  • ವಿವಿಧ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ತೀರ್ಥ ಯಾತ್ರೆ ಯೋಜನೆ
  • ತರಕಾರಿ ಉತ್ಪಾದನೆ ಮತ್ತು ಸಂಗ್ರಹಕ್ಕೆ ಹೊಸ ಕ್ಲಸ್ಟರ್​ಗಳು
  • ಹೊಸ ಗ್ಲೋಬಲ್ ಕ್ಯಾಪಿಟಲ್ ಸೆಂಟರ್, ಟೆಕ್ ಸೆಂಟರ್ ಮತ್ತು ಎಂಜಿನಿಯರಿಂಗ್ ಸೆಂಟರ್​ಗಳ ಸ್ಥಾಪನೆ.
  • ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಳ
  • ನಾಗರಿಕ ವಿಮಾನಯಾನ ಅಮೃತ ಕಾಲ ಯೋಜನೆ. ಏರ್​ಪೋರ್ಟ್​​​ಗಳನ್ನು ಪ್ರಾದೇಶಿಕ ಅಂತಾರಾಷ್ಟ್ರೀಯ ಹಬ್​ಗಳಾಗಿ ಪರಿವರ್ತನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!